Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಗಾಝಾ ಪಟ್ಟಿಯಲ್ಲಿ ಇಸ್ರೇಲ್ ನಿಂದ ವ್ಯಾಪಕ...

ಗಾಝಾ ಪಟ್ಟಿಯಲ್ಲಿ ಇಸ್ರೇಲ್ ನಿಂದ ವ್ಯಾಪಕ ಯುದ್ಧಾಪರಾಧ : ಮಾನವಹಕ್ಕು ಸಮಿತಿ ವರದಿ

ವಾರ್ತಾಭಾರತಿವಾರ್ತಾಭಾರತಿ27 July 2021 11:18 PM IST
share
ಗಾಝಾ ಪಟ್ಟಿಯಲ್ಲಿ ಇಸ್ರೇಲ್ ನಿಂದ ವ್ಯಾಪಕ ಯುದ್ಧಾಪರಾಧ : ಮಾನವಹಕ್ಕು ಸಮಿತಿ ವರದಿ

ನ್ಯೂಯಾರ್ಕ್, ಜು.27: ಗಾಝಾ ಪಟ್ಟಿಯಲ್ಲಿ ಮೇ 10ರಿಂದ ಆರಂಭವಾಗಿ ನಿರಂತರ 11 ದಿನ ಇಸ್ರೇಲ್‌ನ ಸೇನೆ ನಡೆಸಿದ ದಾಳಿಯು ಯುದ್ಧಾಪರಾದ ಕೃತ್ಯವನ್ನು ಹೋಲುತ್ತದೆ ಎಂದು ಹ್ಯೂಮನ್ ರೈಟ್ಸ್ ವಾಚ್ (ಎಚ್ಆರ್ಡಬ್ಲ್ಯೂ) ಸಂಘಟನೆ ಹೇಳಿದೆ.

ಈ ಆಕ್ರಮಣವನ್ನು ಯಾವುದೇ ಸ್ಪಷ್ಟ ಮಿಲಿಟರಿ ಗುರಿಯನ್ನು ಉದ್ದೇಶಿಸಿ ನಡೆಸಲಾಗಿಲ್ಲ ಎಂದು, 62 ಪೆಲೆಸ್ತೀನ್ ನಾಗರಿಕರ ಸಾವಿಗೆ ಕಾರಣವಾದ ಇಸ್ರೇಲ್ನ 3 ವೈಮಾನಿಕ ದಾಳಿಯ ಬಗ್ಗೆ ಪರಿಶೀಲನೆ ನಡೆಸಿ ತಯಾರಿಸಿದ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಯುದ್ಧಾಪರಾಧ ಆರೋಪದ ಬಗ್ಗೆ ಗಂಭೀರ ತನಿಖೆ ನಡೆಸುವ ಪ್ರಸ್ತಾವನೆಗೆ ಇಸ್ರೇಲ್ನ ನಿರಂತರ ನಿರಾಕರಣೆ ಹಾಗೂ ಇಸ್ರೇಲ್‌ನ ಜನವಸತಿ ಮೇಲೆ ಪೆಲೆಸ್ತೀನ್ ರಾಕೆಟ್ ದಾಳಿ ಪ್ರಕರಣವು ಅಂತರಾಷ್ಟ್ರೀಯ ಕ್ರಿಮಿನಲ್ ಕೋರ್ಟ್ ನಲ್ಲಿ ನಡೆಯುತ್ತಿರುವ ತನಿಖೆಗೆ ಮಹತ್ವ ತಂದಿದೆ ಎಂದು ಎಚ್ ಆರ್ ಡಬ್ಲ್ಯೂ ನ ನಿರ್ದೇಶಕ ಗೆರೀ ಸಿಂಪ್ಸನ್ ಹೇಳಿದ್ದಾರೆ.

ಇದೇ ವೇಳೆ, ಇಸ್ರೇಲ್‌ನ ಜನಸಮೂಹದ ಮೇಲೆ 4000ಕ್ಕೂ ಅಧಿಕ ಅನಿರ್ದೇಶಿತ ರಾಕೆಟ್ ಹಾಗೂ ಮೋರ್ಟರ್ ದಾಳಿ ನಡೆಸಿದ ಪೆಲೆಸ್ತೀನ್ ನ ಸಶಸ್ತ್ರ ಪಡೆಯ ಕೃತ್ಯವೂ ಯುದ್ಧಾಪರಾಧ ಕೃತ್ಯಕ್ಕೆ ಸಮವಾಗಿದೆ. ಇಂತಹ ಆಕ್ರಮಣವು ನಾಗರಿಕರ ವಿರುದ್ಧದ ಉದ್ದೇಶಪೂರ್ವಕ ಮತ್ತು ಗೊತ್ತುಗುರಿಯಿಲ್ಲದ ದಾಳಿಯ ನಿಷೇಧವನ್ನು ಉಲ್ಲಂಸಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. 

ಹಮಾಸ್ ಮತ್ತಿತರ ಪೆಲೆಸ್ತೀನ್ ಗುಂಪುಗಳ ಕ್ರಿಯೆಯ ಬಗ್ಗೆ ಆಗಸ್ಟ್ ನಲ್ಲಿ ಪ್ರತ್ಯೇಕ ವರದಿ ಪ್ರಕಟಿಸುವುದಾಗಿ ಸಂಸ್ಥೆ ಹೇಳಿದೆ.

ಈ ವರದಿಯ ಬಗ್ಗೆ ಇಸ್ರೇಲ್ ಸೇನೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಗಾಝಾದಲ್ಲಿರುವ ಸೇನಾ ನೆಲೆಯನ್ನು ಗುರಿಯಾಗಿಸಿ ದಾಳಿ ಮಾಡಿರುವುದಾಗಿ ಇಸ್ರೇಲ್ ಹೇಳುತ್ತಿದೆ. ಗಾಝಾ ಪಟ್ಟಿಯಲ್ಲಿ ಆಡಳಿತ ನಡೆಸುತ್ತಿರುವ ಹಮಾಸ್, ಆಕ್ರಮಿತ ಪೂರ್ವ ಜೆರುಸಲೇಂನ ಅಲ್ಅಖ್ಸಾ ಮಸೀದಿಯ ಆವರಣದಿಂದ ಸೇನೆಯನ್ನು ಹಿಂಪಡೆಯಲು ಇಸ್ರೇಲ್ ನಿರಾಕರಿಸಿದ ಬಳಿಕ ಇಸ್ರೇಲ್ ಅನ್ನು ಗುರಿಯಾಗಿಸಿ 4 ಸಾವಿರಕ್ಕೂ ಅಧಿಕ ರಾಕೆಟ್ ದಾಳಿ ನಡೆಸಿದೆ. ಇದಕ್ಕೆ ಪ್ರತಿಯಾಗಿ ಗಾಝಾ ಪಟ್ಟಿಯನ್ನು ಗುರಿಯಾಗಿಸಿ ಇಸ್ರೇಲ್ ಸೇನೆ ವೈಮಾನಿಕ ದಾಳಿ ನಡೆಸಿದೆ. ಈ ದಾಳಿಯಲ್ಲಿ ಕನಿಷ್ಟ 67 ಮಕ್ಕಳು, 39 ಮಹಿಳೆಯರ ಸಹಿತ ಸುಮಾರು 260 ಮಂದಿ ಬಲಿಯಾಗಿದ್ದರೆ, ಇಸ್ರೇಲ್ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಮಕ್ಕಳ ಸಹಿತ 12 ಮಂದಿ ಬಲಿಯಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X