ಕಾರ್ಯಕರ್ತರೇ ಬಿಜೆಪಿ ಪಕ್ಷದ ಜೀವಾಳ: ಸುರೇಶ್ ನಾಯಕ್ ಕುಯಿಲಾಡಿ
![ಕಾರ್ಯಕರ್ತರೇ ಬಿಜೆಪಿ ಪಕ್ಷದ ಜೀವಾಳ: ಸುರೇಶ್ ನಾಯಕ್ ಕುಯಿಲಾಡಿ ಕಾರ್ಯಕರ್ತರೇ ಬಿಜೆಪಿ ಪಕ್ಷದ ಜೀವಾಳ: ಸುರೇಶ್ ನಾಯಕ್ ಕುಯಿಲಾಡಿ](https://www.varthabharati.in/sites/default/files/images/articles/2021/07/27/300453-1627409935.jpg)
ಉಡುಪಿ, ಜು.27: ಬಿಜೆಪಿ ಕಾರ್ಯಕರ್ತ ಆಧಾರಿತ ಅತೀ ದೊಡ್ಡ ರಾಜಕೀಯ ಪಕ್ಷ. ಕಾರ್ಯಕರ್ತರೇ ಪಕ್ಷದ ಜೀವಾಳ. ಪಕ್ಷದ ಕಾರ್ಯಕರ್ತರ ಅವಿರತ ಶ್ರಮದ ಫಲವಾಗಿ ಉಡುಪಿ ಜಿಲ್ಲೆಯಲ್ಲಿ ಬಿಜೆಪಿಯ ಬೇರುಗಳು ಸದೃಢವಾಗಿವೆ. ಪಕ್ಷವನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ ಪಕ್ಷದ ಕಾರ್ಯಕರ್ತರು ನಿತ್ಯ ನಿರಂತರ ಪಕ್ಷದ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ.
ಹಿರಿಯಡ್ಕದ ಓಂತಿಬೆಟ್ಟು ಆರ್.ಎಸ್.ಬಿ. ಸಭಾಂಗಣದಲ್ಲಿ ಸೋಮವಾರ ನಡೆದ ಬಿಜೆಪಿ ಕಾಪು ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆಯನ್ನು ಉ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರಕಾರಗಳು ವಿವಿಧ ಜನಪರ ಯೋಜನೆಗಳ ಮೂಲಕ ಅತ್ಯುತ್ತಮ ಕೆಲಸ ಕಾರ್ಯಗಳನ್ನು ಮಾಡುತ್ತಿವೆ. ಆದರೆ ವಿರೋಧ ಪಕ್ಷಗಳು ಮಾತ್ರ ಸರಕಾರದ ಯಾವುದೇ ಜನಪರ ಕಾರ್ಯಕ್ರಮಗಳಿಗೆ ಸಹಕಾರ ನೀಡದೇ ಕೇವಲ ಅಪಪ್ರಚಾರದಲ್ಲಿ ತೊಡಗಿಸಿಕೊಂಡಿವೆ. ಈ ನಿಟ್ಟಿನಲ್ಲಿ ಪಕ್ಷದ ಕಾರ್ಯಕರ್ತರು ಬಿಜೆಪಿ ಸರಕಾರದ ಯೋಜನೆ ಹಾಗೂ ಸಾಧನೆಗಳನ್ನು ಮನೆ ಮನೆಗಳಿಗೆ ತಲುಪಿಸುವ ಮೂಲಕ ಪಕ್ಷ ಸಂಘಟನೆಗೆ ಒತ್ತು ನೀಡಬೇಕೆಂದರು.
ಅಧ್ಯಕ್ಷತೆಯನ್ನು ಬಿಜೆಪಿ ಕಾಪು ಮಂಡಲಾಧ್ಯಕ್ಷ ಶ್ರೀಕಾಂತ್ ನಾಯಕ್ ವಹಿಸಿದ್ದರು. ಈ ಸಂದರ್ಭದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಎ.ಸುವರ್ಣ, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಗುರ್ಮೆ ಸುರೇಶ್ ಶೆಟ್ಟಿ, ಗೀತಾಂಜಲಿ ಸುವರ್ಣ, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ.ಸುವರ್ಣ, ಕಾಪು ಮಂಡಲ ಪ್ರಭಾರಿ ರವೀಂದ್ರ ಮಡಿವಾಳ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ, ಜಿಪಂ ಮಾಜಿ ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ, ಕಾಪು ಮಂಡಲ ಮಾಜಿ ಅಧ್ಯಕ್ಷ ಪ್ರಕಾಶ್ ಶೆಟ್ಟಿ, ಮಂಡಲ ಪ್ರಧಾನ ಕಾರ್ಯದರ್ಶಿ ಅನಿಲ್ ಶೆಟ್ಟಿ, ಗೋಪಾಲಕೃಷ್ಣ ರಾವ್ ಉಪಸ್ಥಿತರಿದ್ದರು.
ಮಂಡಲ ವಿಶೇಷ ಕಾರ್ಯಕಾರಿಣಿ ಸಭೆಯ ಸಮಾರೋಪದಲ್ಲಿ ಬಿಜೆಪಿ ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕುಮಾರ್ ಮಂಗಳೂರು ಸಮಾರೋಪ ಭಾಷಣಗೈದರು.