Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಡಿಕೇರಿ: ಗುಂಪು ಹಲ್ಲೆಗೂ ನಮಗೂ...

ಮಡಿಕೇರಿ: ಗುಂಪು ಹಲ್ಲೆಗೂ ನಮಗೂ ಸಂಬಂಧವಿಲ್ಲ; ಇಸಾಕ್ ಖಾನ್ ಸ್ಪಷ್ಟೀಕರಣ

ವಾರ್ತಾಭಾರತಿವಾರ್ತಾಭಾರತಿ28 July 2021 4:38 PM IST
share
ಮಡಿಕೇರಿ: ಗುಂಪು ಹಲ್ಲೆಗೂ ನಮಗೂ ಸಂಬಂಧವಿಲ್ಲ; ಇಸಾಕ್ ಖಾನ್ ಸ್ಪಷ್ಟೀಕರಣ

ಮಡಿಕೇರಿ ಜು.28 : ಬೋಯಿಕೇರಿ ಸಮೀಪ ಸಂಭವಿಸಿದ ಅಪಘಾತದ ಸಂದರ್ಭ ನಡೆದ ಗುಂಪು ಹಲ್ಲೆಗೂ ನಮಗೂ ಸಂಬಂಧವಿಲ್ಲವೆಂದು ಸ್ಪಷ್ಟ ಪಡಿಸಿರುವ ಜಾತ್ಯತೀತ ಜನತಾದಳದ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಇಸಾಕ್ ಖಾನ್ ರಾಜಕೀಯ ಒತ್ತಡದಿಂದ ಪೊಲೀಸರು ನಮ್ಮ ಮೇಲೆ ಪ್ರಕರಣ ದಾಖಲಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅಪಘಾತಗಳು ನಡೆಯುವುದು ಆಕಸ್ಮಿಕ, ಆದರೆ ಇದನ್ನೇ ನೆಪ ಮಾಡಿಕೊಂಡು ಘಟನೆಗೆ ಇಲ್ಲಸಲ್ಲದ ಬಣ್ಣ ಬಳಿಯುತ್ತಿರುವುದು ಸರಿಯಲ್ಲವೆಂದು ತಿಳಿಸಿದರು.

ನಮಗೂ ಹೆಂಡತಿ, ಮಕ್ಕಳು, ತಾಯಿ, ತಂದೆ ಇದ್ದಾರೆ, ಚಿನ್ನಾಭರಣ ಕಸಿದು ಹಲ್ಲೆ ಮಾಡುವಷ್ಟು ನೀಚರು ನಾವಲ್ಲ. ನಮ್ಮ ಮೇಲೆ ದರೋಡೆ ಪ್ರಕರಣ ದಾಖಲಿಸಿರುವುದು ಅತ್ಯಂತ ದು:ಖಕರ ವಿಚಾರವಾಗಿದೆ. ಅಪಘಾತ ಒಂದು ಸಣ್ಣ ಘಟನೆಯಾಗಿದೆ, ಆದರೆ ಇದಕ್ಕೆ ರಾಜಕೀಯ ಬಣ್ಣ ಬಳಿದು ಒತ್ತಡ ಹೇರಲಾಗುತ್ತಿದೆ. ಕಾರಿನಲ್ಲಿದ್ದವರು ಸೈನಿಕರು ಎಂದು ನಮಗೆ ತಿಳಿದಿರಲಿಲ್ಲ. ನಮ್ಮ ಕುಟುಂಬದಲ್ಲೂ ಸೈನಿಕರಿದ್ದಾರೆ. ಯೋಧರು ಹಾಗೂ ಮಹಿಳೆಯರ ಬಗ್ಗೆ ನಮಗೆ ಗೌರವವಿದೆ ಎಂದರು.

ನನ್ನ ಅಣ್ಣ ರಫೀಕ್ ಖಾನ್ ಕಾರಿಗೆ ಅಪಘಾತವಾದ ಕಾರಣ ಸ್ಥಳಕ್ಕೆ ನಾನು ಭೇಟಿ ನೀಡಲೇಬೇಕಾಯಿತು. ಘಟನೆ ನಡೆದ ಸ್ಥಳದಲ್ಲಿ ಜನರ ದೊಡ್ಡ ಗುಂಪು ನೆರೆದಿತ್ತು. ನಾನು ಹೋದ ತಕ್ಷಣ ಕೆಲವರು ಎಲ್ಲವೂ ಸರಿಯಾಗಿದೆ ನೀವು ಹೋಗಿ ಎಂದು ಕಳುಹಿಸಿದರು. 
ಈ ಸಂದರ್ಭ ಪೊಲೀಸರು ಅಲ್ಲಿದ್ದವರ ಫೋಟೋಗಳನ್ನು ತೆಗೆಯುತ್ತಿದ್ದರು. ಫೋಟೋದಲ್ಲಿ ನಾನೂ ಇದ್ದೆ ಎನ್ನುವ ಕಾರಣಕ್ಕೆ ಪ್ರಕರಣ ದಾಖಲಿಸಿಕೊಂಡು ಬಂಧಿಸಿದರು. ಈ ಬಗ್ಗೆ ಪ್ರಶ್ನಿಸಿದಾಗ “ನಮ್ಮ ಮೇಲೆ ಮೇಲಿನಿಂದ ಒತ್ತಡವಿದೆ, ನಾವು ಹೆಲ್ಪ್ ಲೆಸ್” ಎಂದು ಪೊಲೀಸರು ಉತ್ತರ ನೀಡಿರುವುದಾಗಿ ಇಸಾಕ್ ಖಾನ್ ಆರೋಪಿಸಿದರು.

ಘಟನೆ ನಡೆದ ದಿನ ರಾತ್ರಿ ನಮ್ಮ ಮನೆಯ ಬಳಿ ನಮ್ಮನ್ನು ಬಂಧಿಸಲು 25 ರಿಂದ 30 ಪೊಲೀಸರು ಸುತ್ತುವರೆದಿದ್ದರು. ನಾವು ಏನು ಮಾಡಿದ್ದೇವೆ ಎಂದು ಈ ರೀತಿ ಟಾರ್ಗೆಟ್ ಮಾಡುತ್ತಿದ್ದಾರೆ, ನಾವು ಮುಸ್ಲಿಮರು ಎನ್ನುವ ಕಾರಣಕ್ಕೆ ಹೀಗೆ ಮಾಡುತ್ತಿದ್ದಾರೆಯೇ ಎಂದು ಪ್ರಶ್ನಿಸಿದರು.

ನಾವು ಯಾವುದೇ ತಪ್ಪು ಮಾಡಿಲ್ಲ, ದರೋಡೆ ಮಾಡಿದ್ದರೆ ಇನ್ನೂ ಜೈಲಿನಲ್ಲೇ ಇರಬೇಕಾಗಿತ್ತು. ಸೈನಿಕ ಕುಟುಂಬದ ಮೇಲೆ ಯಾರು ಹಲ್ಲೆ ನಡೆಸಿದ್ದಾರೆ ಎಂದು ನಮಗೆ ತಿಳಿದಿಲ್ಲ. ಜಿಲ್ಲೆಯ ಜನ ಊಹಾಪೋಹಗಳಿಗೆ ಕಿವಿಗೊಡದೆ ಸತ್ಯಾಂಶವನ್ನು ತಿಳಿಯಬೇಕೆಂದು ಇಸಾಕ್ ಖಾನ್ ಮನವಿ ಮಾಡಿದರು.

ಸುಂಟಿಕೊಪ್ಪ ಗ್ರಾ.ಪಂ ಸದಸ್ಯ ರಫೀಕ್ ಖಾನ್ ಮಾತನಾಡಿ ಅಪಘಾತದಿಂದ ನನ್ನ ಕಾರಿಗೆ ಹಾನಿಯಾಗಿತ್ತು, ನಾನ್ಯಾಕೆ ಅವರ ಮೇಲೆ ಹಲ್ಲೆ ಮಾಡಲಿ, ಅಲ್ಲದೆ ಅವರು ಸೈನಿಕರು ಎಂದು ನನಗೇಗೆ ತಿಳಿಯಲು ಸಾಧ್ಯವೆಂದು ಪ್ರಶ್ನಿಸಿದರು.

ಮೊದಲು ಅವರೇ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ, ನನ್ನ ಕಾರಿನಲ್ಲಿ ಪತ್ನಿ ಹಾಗೂ ಮಕ್ಕಳಿದ್ದರು. ಘಟನೆಯಿಂದ ಗಾಬರಿಗೊಂಡಿದ್ದ ಅವರನ್ನು ಬೇರೆಯವರ ಕಾರಿನಲ್ಲಿ ಮನೆಗೆ ಕಳುಹಿಸಿದೆ. ನಂತರ ನಾನು ಆಸ್ಪತ್ರೆಗೆ ದಾಖಲಾಗಲೆಂದು ಮಡಿಕೇರಿಯ ಆಸ್ಪತ್ರೆಗೆ ಬಂದಿದ್ದೇನೆ. ಆಮೇಲೆ ಏನಾಯಿತ್ತೆಂದು ನನಗೆ ತಿಳಿದಿಲ್ಲ. ರಾಜಕೀಯ ಕಾರಣಕ್ಕಾಗಿ ಘಟನೆಯ ಬಗ್ಗೆ ಹಾದಿ ತಪ್ಪಿಸುವ ಯತ್ನ ನಡೆಯುತ್ತಿದೆ. ಪೊಲೀಸರು ಯಾರದ್ದೋ ಒತ್ತಡಕ್ಕೆ ಮಣಿದು ನಮ್ಮ ವಿರುದ್ಧ ಕ್ರಮ ಕೈಗೊಂಡಿದ್ದಾರೆ ಎಂದು ಆರೋಪಿಸಿದ ಅವರು, ಈ ಪ್ರಕರಣದಲ್ಲಿ ಪೊಲೀಸರಿಗೆ ಮುಕ್ತವಾಗಿ ಕಾರ್ಯ ನಿರ್ವಹಿಸಲು ಅವಕಾಶ ಕಲ್ಪಿಸಬೇಕೆಂದು ಒತ್ತಾಯಿಸಿದರು.

ನಾನು ಮೊಬೈಲ್ ಕರೆ ಮಾಡಿ ಯಾರನ್ನೋ ಕರೆಸಿ ಹಲ್ಲೆ ಮಾಡಿಸಿದ್ದೇನೆ ಎಂದು ತಪ್ಪು ಅಭಿಪ್ರಾಯ ಮೂಡಿಸಲಾಗುತ್ತಿದೆ. ಆದರೆ ನನ್ನ ಮೊಬೈಲ್ ನ್ನು ಪೊಲೀಸರು ತನಿಖೆಗೆ ಒಳಪಡಿಸಿದರೆ ಸತ್ಯಾಂಶ ತಿಳಿಯಲಿದೆ. ನಾನು ಯಾರಿಗೂ ಕರೆ ಮಾಡಿ ಬರಲು ಹೇಳಿಲ್ಲ, ಹಲ್ಲೆ ಮಾಡಿದವರು ಯಾರೆಂದೇ ನನಗೆ ತಿಳಿದಿಲ್ಲ. ಚಿನ್ನಾಭರಣ ಕಸಿದು ಜೀವನ ಸಾಗಿಸುವ ಪರಿಸ್ಥಿತಿ ಕೂಡ ನನಗೆ ಬಂದಿಲ್ಲವೆಂದು ರಫೀಕ್ ಖಾನ್ ಸ್ಪಷ್ಟಪಡಿಸಿದರು.

ಯಾರೂ ಕೂಡ ಸಣ್ಣ ಘಟನೆಯನ್ನು ದೊಡ್ಡದು ಮಾಡಿ ಜನರ ಹಾದಿ ತಪ್ಪಿಸುವ ಯತ್ನ ಮಾಡಬಾರದೆಂದು ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಗ್ರಾ.ಪಂ ಮಾಜಿ ಅಧ್ಯಕ್ಷ ಕೆ.ಇ.ಕರೀಂ ಹಾಗೂ ಸುಂಟಿಕೊಪ್ಪ ನಗರ ಕಾಂಗ್ರೆಸ್ ಅಧ್ಯಕ್ಷ ಕೆ.ಐ.ರಫೀಕ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X