Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೆ.ಎಸ್.ಈಶ್ವರಪ್ಪಗೆ ಡಿಸಿಎಂ ಸ್ಥಾನ...

ಕೆ.ಎಸ್.ಈಶ್ವರಪ್ಪಗೆ ಡಿಸಿಎಂ ಸ್ಥಾನ ನೀಡಬೇಕು : ಮಠಾಧೀಶರ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ29 July 2021 2:41 PM IST
share
ಕೆ.ಎಸ್.ಈಶ್ವರಪ್ಪಗೆ ಡಿಸಿಎಂ ಸ್ಥಾನ ನೀಡಬೇಕು : ಮಠಾಧೀಶರ ಒತ್ತಾಯ

ಬೆಂಗಳೂರು, ಜು. 29: `ಕುರುಬ ಸಮುದಾಯದ ಹಿರಿಯ ಮುಖಂಡ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಉಪಮುಖ್ಯಮಂತ್ರಿ ಸ್ಥಾನವನ್ನು ನೀಡಲೇಬೇಕು' ಎಂದು ವಿವಿಧ ಮಠಾಧಿಪತಿಗಳು ಆಗ್ರಹಿಸಿದ್ದಾರೆ.

ಗುರುವಾರ ನಗರದ ಖಾಸಗಿ ಹೊಟೇಲ್‍ನಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸ್ವಾಮೀಜಿಗಳು, `ಬಿಜೆಪಿ ವರಿಷ್ಠರು, ಈಶ್ವರಪ್ಪ ಅವರಿಗೆ ಸಂಪುಟ ರಚನೆ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು. ರಾಜ್ಯ ಸರಕಾರ ರಚನೆಗೆ ಹಲವರು ಕಾರಣರಾಗಿದ್ದಾರೆ. ಅದು ನಿಜ. ಆದರೆ, ಈಶ್ವರಪ್ಪ ಅವರನ್ನು ಕಡೆಗಣಿಸದೆ ಸೂಕ್ತ ಸ್ಥಾನ ನೀಡಬೇಕು' ಎಂದು ಮನವಿ ಮಾಡಿದರು.

`ಹಿರಿಯ ಮುಖಂಡ ಈಶ್ವರಪ್ಪ ಅವರು ಉಪಮುಖ್ಯಮಂತ್ರಿ ಸ್ಥಾನವನ್ನು ಕೇಳಿ ಪಡೆಯಬಾರದು. ಬಿಜೆಪಿಗಾಗಿ ಈಶ್ವರಪ್ಪ ಇದುವರೆಗೂ ದುಡಿದಿದ್ದಾರೆ. ಅದರ ಫಲವಾಗಿ ಈ ಸ್ಥಾನ ದೊರೆಯಬೇಕು. ನಾವೆಲ್ಲರೂ ಉತ್ತರ ಕರ್ನಾಟಕದ ಸ್ವಾಮೀಜಿಗಳು, ಎಲ್ಲರೂ ಒಟ್ಟಾಗಿ ಕೆ.ಎಸ್.ಈಶ್ವರಪ್ಪ ಅವರಿಗೆ ಸೂಕ್ತ ಸ್ಥಾನಮಾನ ಕೊಡಿ ಎಂದು ಕೇಳುತ್ತಿದ್ದೇವೆ. ಮಾಜಿ ಸಿಎಂ ಯಡಿಯೂರಪ್ಪ ಅವರೊಂದಿಗೆ ಈಶ್ವರಪ್ಪ ಅವರೂ ಪಕ್ಷ ಕಟ್ಟಿದ್ದಾರೆ. ಅವರಿಗೆ ಅನ್ಯಾಯವಾಗಬಾರದು' ಎಂದು ಸ್ವಾಮೀಜಿಗಳು ಕೋರಿದರು.

`ಈಶ್ವರಪ್ಪ ಪಕ್ಷದ ಬಗ್ಗೆ ನಿಷ್ಠೆ ಹೊಂದಿದ್ದಾರೆ. ಈಗಾಗಲೇ ಮುಖ್ಯಮಂತ್ರಿ ಸ್ಥಾನದ ಗೊಂದಲ ಬಗೆಹರಿದಿದೆ. ಬಿಜೆಪಿಗೆ ವಲಸೆ ಬಂದಿರುವ ಎಲ್ಲರನ್ನೂ ಪರಿಗಣಿಸಬೇಕು. ಯಾರನ್ನೂ ಕಡೆಗಣಿಸಬಾರದು. ಇದನ್ನು ವರಿಷ್ಠರು ನಡೆಸಿಕೊಡಬೇಕು. ಒಂದು ವೇಳೆ ಈಶ್ವರಪ್ಪ ಅವರಿಗೆ ಡಿಸಿಎಂ ಸ್ಥಾನ ದೊರೆಯದಿದ್ದರೆ ಚರ್ಚೆ ಮಾಡಿ ಮುಂದಿನ ತೀರ್ಮಾನ ಮಾಡುತ್ತೇವೆ' ಎಂದು ಸ್ವಾಮೀಜಿಗಳು ಎಚ್ಚರಿಕೆ ನೀಡಿದರು.
`ಒಬ್ಬರಿಗೆ ನಾಲ್ಕು ಬಾರಿ ಮುಖ್ಯಮಂತ್ರಿಯಾಗುವ ಅವಕಾಶವಿದ್ದರೆ ಈಶ್ವರಪ್ಪ ಅವರನ್ನು ಒಂದು ಬಾರಿಯಾದರೂ ಮುಖ್ಯಮಂತ್ರಿ ಮಾಡಬೇಕಿತ್ತು. ಅದು ಸಾಧ್ಯವಾಗಲಿಲ್ಲ. ಈಶ್ವರಪ್ಪ ಎಂದೂ ಪಕ್ಷವನ್ನು ಬಿಟ್ಟು ಹೋದವರಲ್ಲ. ಹೀಗಾಗಿ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಉಪಮುಖ್ಯಮಂತ್ರಿ ಸ್ಥಾನವನ್ನು ನೀಡಲೇಬೇಕು' ಎಂದು ಆಗ್ರಹಪಡಿಸಿದರು.

ಮಖಣಾಪೂರ ಗುರುಪೀಠದ ಸೋಮಲಿಂಗೇಶ್ವರ ಸ್ವಾಮಿ, ರೇವಣಸಿದ್ದೇಶ್ವರ ಗುರುಪೀಠದ ಶಾಂತಮಯ ರೇವಣಸಿದ್ದೇಶ್ವರ ಸ್ವಾಮಿ, ಅಥಣಿಯ ಸಿದ್ಧಸಿರಿ ಸಿದ್ಧಾಶ್ರಮ ಕೌಲಗುಡ್ಡ ಹಣಮಾಪೂರ ಸಿದ್ದಯೋಗಿ ಅಮರೇಶ್ವರ ಮಹಾರಾಜ ಹಾಗೂ ಗಣಿ ಆಶ್ರಮದ ಚಿನ್ಮಯಾನಂದ ಸ್ವಾಮಿ, ಸುಕ್ಷೇತ್ರ ಹುಲಜಂತಿ ಮಾಳಿಂಗರಾಯ ಮಹಾರಾಜ, ತುಮಕೂರಿನ ಬಿಂದುಶೇಖರ ಸ್ವಾಮಿ, ನಾಗರಾಳ ಅಮೋಘಸಿದ್ದೇಶ್ವರ ಆಶ್ರಮ ಲಕ್ಕಪ ಮಹಾರಾಜ, ಸುಜ್ಞಾನ ಕುಟೀರ ಕೋಳಿಗುಡ್ಡ ಸ್ವರೂಪಾನಂದ ಸ್ವಾಮಿ ಸೇರಿದಂತೆ ಇನ್ನಿತರರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X