Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮನಪಾದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾದ...

ಮನಪಾದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾದ ತ್ಯಾಜ್ಯ ಸಮಸ್ಯೆ; ಶೇ. 68ರಷ್ಟು ತ್ಯಾಜ್ಯ ವಿಂಗಡಣೆ: ಮೇಯರ್

ಜನ ಸ್ಪಂದಿಸಿದರೂ ನಿರ್ವಹಣೆ ಸರಿಯಾಗುತ್ತಿಲ್ಲ - ವಿಪಕ್ಷ

ವಾರ್ತಾಭಾರತಿವಾರ್ತಾಭಾರತಿ29 July 2021 5:01 PM IST
share
ಮನಪಾದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾದ ತ್ಯಾಜ್ಯ ಸಮಸ್ಯೆ; ಶೇ. 68ರಷ್ಟು ತ್ಯಾಜ್ಯ ವಿಂಗಡಣೆ: ಮೇಯರ್

ಮಂಗಳೂರು, ಜು.29: ಘನತ್ಯಾಜ್ಯ ನಿರ್ವಹಣೆ ಸಮಸ್ಯೆ ಪಾಲಿಕೆ ವ್ಯಾಪ್ತಿಯಲ್ಲಿ ಸಮಸ್ಯೆ ಮುಂದುವರಿದಿರುವಂತೆಯೇ ಪಾಲಿಕೆಯ ಸಾಮಾನ್ಯ ಸಭೆಯಲ್ಲಿಯೂ ಇಂದು ಸದಸ್ಯರ ನಡುವೆ ವ್ಯಾಪಕ ಚರ್ಚೆ ಹಾಗೂ ವಾಗ್ವಾದಕ್ಕೆ ಕಾರಣವಾಯಿತು.

ಸಭೆಯ ಆರಂಭದಲ್ಲಿಯೇ ಮೇಯರ್ ಪ್ರೇಮಾನಂದ ಶೆಟ್ಟಿಯವರು ಮಾತನಾಡುತ್ತಾ, ಕಸ ವಿಲೇಗೆ ಸಂಬಂಧಿಸಿ ಮನೆಗಳಿಂದ ಮೂಲದಿಂದಲೇ ತ್ಯಾಜ್ಯ ವಿಂಗಡಣೆಯಲ್ಲಿ ಶೇ. 70ರಷ್ಟು ಯಶಸ್ಸು ಸಾಧಿಸಲಾಗಿದೆ. ಹಾಗಾಗಿ ಸ್ವಚ್ಛ ಮಂಗಳೂರು ತ್ಯಾಜ್ಯ ಸಂಸ್ಕರಣೆಯಲ್ಲಿ ಮಂಗಳೂರು ಪಾಲಿಕೆ ಮತ್ತೆ 1ನೇ ಸ್ಥಾನಕ್ಕೇರುವುದರಲ್ಲಿ ಸಂಶಯವಿಲ್ಲ ಎಂದರು.

ಬಳಿಕ ಪ್ರಶ್ನೋತ್ತರ ವೇಳೆಯಲ್ಲಿ ತ್ಯಾಜ್ಯ ಸಮಸ್ಯೆಯನ್ನು ಪ್ರಸ್ತಾಪಿಸಿದ ಮಾಜಿ ಮೇಯರ್ ಭಾಸ್ಕರ ಕೆ., 2018ರಲ್ಲಿ ನಗರಕ್ಕೆ ಸ್ವಚ್ಛತೆಯಲ್ಲಿ 1ನೆ ಸ್ಥಾನ ದೊರಕಿ ಪ್ರಶಸ್ತಿ ಲಭಿಸಿತ್ತು. ಆದರೆ ಒಣಕಸ ಹಾಗೂ ಹಸಿ ಕಸ ವಿಂಗಡಣೆಯ ಬಳಿಕ ತ್ಯಾಜ್ಯ ನಿರ್ವಹಣೆ ವಹಿಸಿರುವ ಆ್ಯಂಟನಿ ಸಂಸ್ಥೆಯಿಂದ ಸಮಸ್ಯೆಯಾಗುತ್ತಿದೆ. ಸಮರ್ಪಕವಾಗಿ ಕಸವನ್ನು ವಿಲೇ ಮಾಡಲಾಗುತ್ತಿಲ್ಲ ಎಂದು ದೂರಿದರು.

ಸದಸ್ಯ ಪ್ರವೀಣ್ ಚಂದ್ರ ಆಳ್ವ ಮಾತನಾಡಿ, 2012-13ನೆ ಸಾಲಿನಲ್ಲಿದ್ದ ಮಂಗಳೂರು ಕಸದ ಸಮಸ್ಯೆ ಮತ್ತೆ 2022ರ ವೇಳೆಗೆ ಮರುಕಳಿಸುವಂತಾಗಿದೆ. ರಸ್ತೆ ಬದಿಗಳಲ್ಲಿ ಕಸ ರಾಶಿ ಹಾಕುವುದು ಕಂಡು ಬರುತ್ತಿದೆ. ಕಸ ವಿಂಗಡಣೆಗೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ಆದರೆ ಒಣ ಕಸ ವಾರಕ್ಕೊಮ್ಮೆಯೂ ಸರಿಯಾಗಿ ನಿರ್ವಹಣೆಯಾಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ಸಂದರ್ಭ ಆಡಳಿತ ಪಕ್ಷದ ಕೆಲ ಸದಸ್ಯರು ತಮ್ಮ ವಾರ್ಡ್‌ನಲ್ಲಿ ಕಸ ಸಮರ್ಪಕವಾಗಿ ವಿಲೇ ಆಗುತ್ತಿರುವುದಾಗಿ ಹೇಳಿದಾಗ, ನಿಮಗೆ ಪ್ರಭಾವ ಇರಬೇಕು. ನಮಗೆ ಅದು ಸಿಗುತ್ತಿಲ್ಲ ಎಂದು ವಿಪಕ್ಷ ಸದಸ್ಯರು ಆಕ್ಷೇಪಿಸಿದರು. ಈ ಬಗ್ಗೆ ಕೆಲ ಹೊತ್ತು ಸದಸ್ಯರ ನಡುವೆ ವಾಗ್ವಾದ ನಡೆಯಿತು.

2019ರ ಆಗಸ್ಟ್ 6ರಂದು ಸಂಭವಿಸಿದ ಪಚ್ಚನಾಡಿ ತ್ಯಾಜ್ಯದುರಂತಕ್ಕೆ ಸಂಬಂಧಿಸಿ ಮದ್ಯಂತ ಆದೇಶದಂತೆ 14.8 ಕೋಟಿ ರೂ. ಪರಿಹಾರ ಬಿಡುಗಡೆಯಾಗಿದೆ. ರಿಟ್ ಬಗ್ಗೆ ಹೈಕೋರ್ಟ್ ನಿರ್ದೇಶನದಂತೆ ಸಾಷ್ಟು ಕ್ರಮ ಕೈಗೊಳ್ಳಲಾಗಿದೆ. 7 ಮೀ. ಎತ್ತರದ ತಡೆಗೋಡೆ ನಿರ್ಮಾಣ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ತ್ಯಾಜ್ಯ ದುರಂತ ಸಂಭವಿಸದಂತೆ ಮುನ್ನೆಚ್ಚರಿಕೆ ಕೈಗೊಂಡಿದ್ದೇವೆ. ಮೂರು ತಿಂಗಳ ಹಿಂದೆ ಒಣ ಕಸ ಘಟಕದಲ್ಲಿ ಅಗ್ನಿ ಅವಘಡ ಸಂಭವಿಸಿತ್ತು. ತತ್‌ಕ್ಷಣ ಅಧಿಕಾರಿಗಳು, ಸಿಬಂದಿ ಸ್ಥಳಕ್ಕೆ ಧಾವಿಸಿ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಘಟಕದ ಸುತ್ತಲೂ ಸಿಸಿ ಕ್ಯಾಮರಾ ಅಳವಡಿಸಲಾಗಿದೆ. ವೈಜ್ಞಾನಿಕ ರೀತಿಯ ಕಸ ವಿಲೇವಾರಿಗೆ ಆದ್ಯತೆ ನೀಡಲಾಗಿದ್ದು, ಈಗಾಗಲೇ ಶೇ.65 ರಿಂದ 70ರಷ್ಟು ಕಸ ಮೂಲದಿಂದಲೇ ಬೇರ್ಪಟ್ಟು ಬರುತ್ತಿದೆ. ಆ್ಯಂಟನಿ ಸಂಸ್ಥೆಯ ಗುತ್ತಿಗೆ ಅವಧಿ ಆರು ತಿಂಗಳಲ್ಲಿ ಮುಗಿಯಲ್ಲಿದ್ದು, ಮುಂದೆ ಪಾರಂಪರಿಕ ತ್ಯಾಜ್ಯ ಸಂಸ್ಕರಣೆಗೆ ಟೆಂಡರ್ ಆಗಿದ್ದು, ಸರಕಾರ ಅನುಮೋದನೆ ನೀಡುವ ಭರವಸೆ ಇದೆ ಎಂದು ಮೇಯರ್ ಪ್ರೇಮಾನಂದ ಶೆಟ್ಟಿ ತಿಳಿಸಿದರು.

ಪಾಲಿಕೆ ವ್ಯಾಪ್ತಿಯಲ್ಲಿ ಲಸಿಕೆ ಪೂರೈಕೆ ಬೇಡಿಕೆ ಮಟ್ಟದಲ್ಲಿ ಇಲ್ಲದ ಕಾರಣ ಜನರು ಹತಾಶರಾಗಿದ್ದಾರೆ ಎಂಬ ವಿಪಕ್ಷ ಸದಸ್ಯರ ಅಬ್ದುಲ್ ರವೂಫ್ ವಿಷಯ ಪ್ರಸ್ತಾಪಿಸಿದರು. ಬೇಡಿಕೆಗೆ ತಕ್ಕಷ್ಟು ಕಳೆದೊಂದು ವಾರದಿಂದ ಲಸಿಕೆ ಪೂರೈಕೆಯಾಗುತ್ತಿಲ್ಲ ಎಂದು ತಾಲೂಕು ವೈದ್ಯಾಧಿಕಾರಿ ಮಾಹಿತಿ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಮೇಯರ್ ಪ್ರೇಮಾನಂದ ಶೆಟ್ಟಿ, ಲಸಿಕೆ ಹೆಚ್ಚಿನ ಪೂರೈಕೆ ಕುರಿತಂತೆ ಸಂಬಂಧಪಟ್ಟವರ ಗಮನ ಸೆಳೆಯುವುದಾಗಿ ಹೇಳಿದರು.

ಎಡಿಬಿ 2ನೆ ಯೋಜನೆಯಡಿ ನೆಹರೂ ಮೈದಾನದ ಫುಟ್ಬಾಲ್ ಕ್ರೀಡಾಂಗಣದ ಬಳಿ ಓವರ್‌ಹೆಡ್ ಟ್ಯಾಂಕ್ ನಿರ್ಮಾಣಕ್ಕೆ ಟೆಂಡರ್ ಆಗಿದೆ. 6 ಕೋಟಿ ರೂ. ಖರ್ಚು ಮಾಡಿ ಕೊನೆಗೆ ಅದಕ್ಕೆ ತಡೆಯಾದಲ್ಲಿ ಈಗಾಗಲೇ ನೀರಿಗಾಗಿ ಸಂಕಷ್ಟ ಪಡುತ್ತಿರುವ ವಾರ್ಡ್‌ನ ಜನರು ಮತ್ತಷ್ಟು ಸಂಕಷ್ಟಕ್ಕೀಡಾಗಲಿದ್ದಾರೆ ಎಂದು ಸದಸ್ಯ ಅಬ್ದುಲ್ ಲತೀಫ್ ಸಭೆಯ ಗಮನ ಸೆಳೆದರು.

ಫುಟ್ಬಾಲ್ ಮೈದಾನದ ಸ್ಥಳದ ಹೊರಭಾಗದ ಜಾಗದಲ್ಲಿ ಓವರ್ ಹೆಡ್ ಟ್ಯಾಂಕ್ ನಿರ್ಮಾಣ ಮಾಡಲಾಗುತ್ತಿದೆ ಎಂದು ಆಯುಕ್ತ ಅಕ್ಷಯ್ ಶ್ರೀಧರ್ ತಿಳಿಸಿದರು.

ಕೃಷ್ಣಾಪುರದಲ್ಲಿ ಮಾರುಕಟ್ಟೆ ನಿರ್ಮಾಣ ಮಾಡಬೇಕೆಂದು ಸದಸ್ಯೆ ಸಂಶಾದ್ ಅಬೂಬಕರ್ ಸಭೆಯಲ್ಲಿ ಆಗ್ರಹಿಸಿದರೆ, ನೀರಿನ ಟ್ಯಾಂಕ್ ಸ್ವಚ್ಛಗೊಳಿಸುವ ಕಾರ್ಯವನ್ನು ಯಾವುದೇ ಹಬ್ಬದ ಒಂದೆರಡು ದಿನಗಳ ಮುಂಚಿತವಾಗಿ ಮಾಡುವುದನ್ನು ನಿಲ್ಲಿಸಬೇಕೆಂದು ಸದಸ್ಯ ಸಂಶುದ್ದೀನ್ ಆಗ್ರಹಿಸಿದರು.

ತುಳು ಭಾಷೆಗೆ ಅಧಿಕೃತ ಸ್ಥಾನಮಾನ; ಸರಕಾರಕ್ಕೆ ಪ್ರಸ್ತಾವನೆ

ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾದ ತುಳು ಭಾಷೆಯನ್ನು 8ನೇ ಪರಿಚ್ಛೇಕ್ಕೆ ಸೇರ್ಪಡೆಗೊಳಿಸಬೇಕೆಂಬುವುದು ದಶಕದ ಆಗ್ರಹ. ಆದರೆ ಈ ಹೋರಾಟಕ್ಕೆ ಇನ್ನೂ ನ್ಯಾಯ ಸಿಕ್ಕಿಲ್ಲ. ತುಳು ಭಾಷೆಗೆ ಅಧಿಕೃತ ಸ್ಥಾನಮಾನ ನೀಡಬೇಕು ಎಂದು ಒತ್ತಾಯಿಸಿ ಈಗಾಗಲೇ ಟ್ವಿಟ್ಟರ್ ಅಭಿಯಾನ ನಡೆದಿದೆ. ವಿಧಾನಸೌಧದಲ್ಲಿ ಕೂ ಜನಪ್ರತಿನಿಧಿಗಳು ಧ್ವನಿ ಎತ್ತಿದ್ದಾರೆ. ಆದರೆ ಈವರೆಗೆ ಯಾವುದೇ ಪ್ರಯೋಜನ ಆಗಿಲ್ಲ. ಈ ನಿಟ್ಟಿನಲ್ಲಿ ಪಾಲಿಕೆಯಿಂದ ಒತ್ತಾಯ ಮಾಡಬೇಕೆಂದು ಮನಪಾ ಸದಸ್ಯ ವರುಣ್ ಚೌಟ ಮನವಿ ಮಾಡಿದರು. ಈ ಬಗ್ಗೆ ಪ್ರತಿಕ್ರಿಯಿಸಿದ ಮೇಯರ್, ತುಳು ಭಾಷೆ 8ನೇ ಪರಿಚ್ಛೇದಕ್ಕೆ ಸೇರಿಸುವ ಕುರಿತು ರಾಜ್ಯ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಹೇಳಿದರು.

ಕೊರೋನ 2ನೆ ಅಲೆ ಎದುರಿಸುವಲ್ಲಿ ಯಶಸ್ವಿ

ಕೊರೋನ ಎರಡನೇ ಅಲೆ ಎದುರಿಸಲು ಕೋವಿಡ್ ವಾರಿಯರ್ಸ್‌, ಅಧಿಕಾರಿಗಳು, ಜನಪ್ರತಿನಿಧಿಗಳು ಉತ್ತಮ ಕೆಲಸ ನಿರ್ವಹಿಸಿದ್ದಾರೆ. ವರ್ಚುವಲ್ ಸಭೆ ನಡೆಸಿ ಸಮಸ್ಯೆ ಬಗ್ಗೆ ಚರ್ಚಿಸಿದ್ದೇವೆ. 10 ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ವಾರ್ಡ್‌ಗೆ ಕೋವಿಡ್ ನೋಡಲ್ ಅಧಿಕಾರಿ ನೇಮಿಸಿದ್ದೇವೆ. ಟಾಸ್ಕ್‌ಪೋರ್ಸ್ ರಚನೆ ಮಾಡಲಾಗಿದೆ. ಮನೆ ಮನೆಗೆ ಭೇಟಿ ನೀಡಿ ಕೊರೊನಾ ಜಾಗೃತಿ ಮೂಡಿಸಲಾಗಿದ್ದು, ಮೆಡಿಸಿನ್ ಕಿಟ್ ವಿತರಿಸಲಾಗಿದೆ. ಇದರ ಜೊತೆ ನಗರದ ಅಭಿವೃದ್ಧಿಯ ಕಡೆಗೂ ಗಮನಹರಿಸಿದ್ದು, ಮಳೆಗಾಲಕ್ಕೂ ಮುನ್ನ ಚರಂಡಿ ಹೂಳೆತ್ತುವಿಕೆ, ಚರಂಡಿ ಕಾಮಗಾರಿ ನಡೆಸಲಾಗಿದೆ.

- ಪ್ರೇಮಾನಂದ ಶೆಟ್ಟಿ, ಮೇಯರ್, ಮಂಗಳೂರು ಮಹಾನಗರ ಪಾಲಿಕೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X