Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಾನು ಜಗದೀಶ್‌ ಶೆಟ್ಟರ್‌ ರಂತೆ...

ನಾನು ಜಗದೀಶ್‌ ಶೆಟ್ಟರ್‌ ರಂತೆ ಸಂಪುಟಕ್ಕೆ ಸೇರಲ್ಲ ಎಂದು ಹೇಳುವುದಿಲ್ಲ: ಕೆ.ಎಸ್‌. ಈಶ್ವರಪ್ಪ

ವಾರ್ತಾಭಾರತಿವಾರ್ತಾಭಾರತಿ29 July 2021 7:10 PM IST
share
ನಾನು ಜಗದೀಶ್‌ ಶೆಟ್ಟರ್‌ ರಂತೆ ಸಂಪುಟಕ್ಕೆ ಸೇರಲ್ಲ ಎಂದು ಹೇಳುವುದಿಲ್ಲ: ಕೆ.ಎಸ್‌. ಈಶ್ವರಪ್ಪ

ಶಿವಮೊಗ್ಗ, ಜು.29: ಉಪ ಮುಖ್ಯಮಂತ್ರಿ ಸ್ಥಾನ ನೀಡಿದ್ರೆ ನಾನು ಬೇಡ ಎನ್ನುವುದಿಲ್ಲ. ಆದರೆ, ಅದಕ್ಕಾಗಿ ಲಾಬಿ ಮಾಡುವುದಿಲ್ಲಎಂದು ಶಾಸಕ ಹಾಗೂ ಬಿಜೆಪಿ ಹಿರಿಯ ನಾಯಕ ಕೆ.ಎಸ್‌. ಈಶ್ವರಪ್ಪ ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿಮಾತನಾಡಿದ ಅವರು, ಯಾವುದೇ ಗೊಂದಲವಿಲ್ಲದೇ ಸರ್ವಸಮ್ಮತಿ ಮೇರೆಗೆ ಮುಖ್ಯಮಂತ್ರಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್‌ ನವರ ನಿರೀಕ್ಷೆ ಸುಳ್ಳಾಗಿ ಅವರಿಗೆ ನಿರಾಶೆ ತಂದಿದೆ. ಯಾವ ಗೊಂದಲಗಳು ಇಲ್ಲದೇ ರಾಷ್ಟ್ರೀಯ ನಾಯಕರು ಅತ್ಯಂತ ಸರಳವಾಗಿ ಬಗೆಹರಿಸಿದ್ದಾರೆ ಎಂದರು.

ಹಲವು ಸಂಘ, ಸಂಸ್ಥೆಗಳು ಅಭಿಮಾನಿಗಳು ನಾನು ಉಪ ಮುಖ್ಯಮಂತ್ರಿ ಆಗಬೇಕೆಂದು ಬಯಸುತ್ತಿದ್ದಾರೆ. ನಾನೊಬ್ಬ ಪಕ್ಷ ದ ನಿಷ್ಠಾವಂತ ಕಾರ್ಯಕರ್ತನಾಗಿದ್ದು, ಈ ಹಿಂದೆ ಸಚಿವ ಸ್ಥಾನದಲ್ಲಿದ್ದರೂ ಕೂಡ ಅದನ್ನು ಬಿಟ್ಟು ವರಿಷ್ಠರ ತೀರ್ಮಾನದಂತೆ ರಾಜ್ಯಾಧ್ಯಕ್ಷ ನಾಗಿ ಕೆಲಸ ಮಾಡಿದ್ದೇನೆ. ಪಕ್ಷ ದ ವರಿಷ್ಠರ ತೀರ್ಮಾನಕ್ಕೆ ನಾನು ಬದ್ಧನಾಗಿದ್ದೇನೆ. ನನಗೆ ಮಂತ್ರಿ ಸ್ಥಾನವನ್ನಾದರೂ ಕೊಡಲಿ, ಉಪ ಮುಖ್ಯಮಂತ್ರಿ ಸ್ಥಾನವನ್ನಾದರೂ ಕೊಡಲಿ ಇಲ್ಲವೇ ಶಾಸಕನಾಗಿ ಉಳಿದು ಪಕ್ಷ  ಸಂಘಟನೆ ಮಾಡುವ ಜವಾಬ್ದಾರಿ ನೀಡಿದರೂ ಅದನ್ನು ನಿಷ್ಠೆಯಿಂದ ನಿಭಾಯಿಸುತ್ತೇನೆ ಎಂದರು.

ರಾಮ ರಾಜ್ಯ ಪರಿಕಲ್ಪನೆಯ ಆಡಳಿತ ನಡೆಸಲು ಕೆಲವೊಮ್ಮೆ ಶ್ರೀಕೃಷ್ಣನ ತಂತ್ರಗಾರಿಕೆಯೂ ಅಗತ್ಯ. ಇದೇ ಮೇಲ್ಪಂಕ್ತಿಯನ್ನು ನಮ್ಮ ವರಿಷ್ಠರು ಹಾಕಿಕೊಟ್ಟಿದ್ದು,  ಕೃಷ್ಣನ ತಂತ್ರಗಾರಿಕೆಯೂ ಕೆಲವೊಮ್ಮೆ ರಾಜಕೀಯದಲ್ಲಿಅನಿವಾರ್ಯವಾಗಿರುತ್ತದೆ. ಆ ಅನಿವಾರ್ಯತೆಯೇ ಇಂದಿನ ರಾಜಕಾರಣವಾಗಿದೆ. ಆದರೆ, ಮುಂದಿನ ಚುನಾವಣೆಯಲ್ಲಿಬಿಜೆಪಿ ಪೂರ್ಣ ಬಹುಮತ ಪಡೆದು ರಾಮರಾಜ್ಯವನ್ನು ಸ್ಥಾಪಿಸುತ್ತದೆ ಎಂದರು.

ಜಗದೀಶ್‌ ಶೆಟ್ಟರ್‌ ಸಂಪುಟಕ್ಕೆ ಸೇರಲ್ಲಎಂದು ಹೇಳಿದ್ದಾರೆ. ಆದರೆ, ನಾನು ಹಾಗೇ ಹೇಳುವುದಿಲ್ಲ. ರಾಜಕಾರಣ ಸಾಕು ಎನ್ನುವುದೂ ಇಲ್ಲ. ಪಕ್ಷ ದ ತೀರ್ಮಾನಕ್ಕೆ ಬದ್ಧನಾಗಿಯೇ ಇರುತ್ತೇನೆ. ಉಪ ಮುಖ್ಯಮಂತ್ರಿ ಆಕಾಂಕ್ಷಿ ಎಂದ ಮಾತ್ರಕ್ಕೆ ಲಾಬಿ ಮಾಡಲಾರೆ. ನನಗೆ ಲಾಬಿ ಎಂಬ ಪದದ ಅರ್ಥವೇ ಗೊತ್ತಿಲ್ಲಎಂದು ಹೇಳಿದರು.

ಸಿಎಂ ಹಾಗೂ ಸಂಪುಟ ಬದಲಾದರೂ ಶಿವಮೊಗ್ಗದ ಘೋಷಿತ ಮತ್ತು ಚಾಲ್ತಿಯಲ್ಲಿರುವ ಯಾವ ಅಭಿವೃದ್ಧಿ ಕಾರ್ಯಗಳು ನಿಲ್ಲುವುದಿಲ್ಲ. ಶಿವಮೊಗ್ಗಕ್ಕೆ ಮತ್ತಷ್ಟು ಯೋಜನೆ ತರಲಿದ್ದೇವೆ. ಮುಂದಿನ ದಿನಗಳಲ್ಲಿಬಿಜೆಪಿ ಜಿಲ್ಲೆಯಲ್ಲಿಮತ್ತಷ್ಟು ಪ್ರಬಲವಾಗಲಿದೆ. ಮುಂದಿನ ಜಿಪಂ ಮತ್ತು ತಾಪಂ ಚುನಾವಣೆಯಲ್ಲಿಬಿಜೆಪಿ ಜಯಭೇರಿ ಬಾರಿಸಲಿದೆ. ಮಧು ಬಂಗಾರಪ್ಪ ಕಾಂಗ್ರೆಸ್‌ ಸೇರ್ಪಡೆಯಿಂದ ಯಾವ ಬದಲಾವಣೆಯೂ ಆಗುವುದಿಲ್ಲಎಂದರು.

ಪತ್ರಿಕಾಗೋಷ್ಠಿಯಲ್ಲಿ ಮೇಯರ್‌ ಸುನಿತಾ ಅಣ್ಣಪ್ಪ, ಉಪ ಮೇಯರ್‌ ಶಂಕರ್‌ ಗನ್ನಿ, ಜ್ಞಾನೇಶ್ವರ್‌, ಚೆನ್ನಬಸಪ್ಪ, ವಿಶ್ವಾಸ್‌, ಕೆ.ವಿ. ಅಣ್ಣಪ್ಪ ಮತ್ತಿತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X