ಉಡುಪಿ ಜಿಲ್ಲಾ ಯುವ ಮಂಡಳ ಪ್ರಶಸ್ತಿಗೆ ಅರ್ಜಿ ಆಹ್ವಾನ
ಉಡುಪಿ, ಜು. 29:ಕೇಂದ್ರ ಸರಕಾರದ ನೆಹರು ಯುವ ಕೇಂದ್ರದ ಜಿಲ್ಲಾ ಕಚೇರಿಯ ವತಿಯಿಂದ 2020-21ನೇ ಸಾಲಿನ ಜಿಲ್ಲಾ ಯುವ ಮಂಡಳಿ ಪ್ರಶಸ್ತಿಗೆ, ಅರ್ಹ ಯುವ ಮಂಡಳಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಜಿಲ್ಲಾ ನೊಂದಣಾಧಿಕಾರಿಗಳ ಕಛೇರಿಯಲ್ಲಿ ನೋಂದಾವಣೆಗೊಂಡಿರುವ ಯುವಕ, ಯುವತಿ ಮಂಡಳಗಳು ನೆಹರು ಯುವ ಕೇಂದ್ರದಲ್ಲಿ ಸಂಯೋಜನೆ ಹೊಂದಿರಬೇಕು. 2020-21ನೇ ಸಾಲಿನಲ್ಲಿ ಗ್ರಾಮ, ಪಟ್ಟಣ ಹಾಗೂ ತಾಲೂಕು ಅಭಿವೃದ್ಧಿಗಾಗಿ ಜನಪರ ಕಾರ್ಯಕ್ರಮಗಳನ್ನು ನಡೆಸಿರುವ (ಮಾಹಿತಿ 2020ರ ಎ.1ರಿಂದ ಪ್ರಸಕ್ತ ಸಾಲಿನ ಮಾರ್ಚ್ 31ರ ಒಳಗಿರಬೇಕು) ಯುವ ಮಂಡಳಗಳು ಅರ್ಜಿ ಸಲ್ಲಿಸಬಹುದಾಗಿದೆ. ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾದ ಯುವ ಮಂಡಳಕ್ಕೆ 25,000 ರೂ. ನಗದು ಹಾಗೂ ಪ್ರಶಸ್ತಿ ಪತ್ರ ನೀಡಲಾಗುವುದು.
ಅರ್ಜಿ ಸಲ್ಲಿಸಲು ಆಗಸ್ಟ್ 30 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವಿಲ್ಫ್ರೆಡ್ ಡಿ ಸೋಜ, ಜಿಲ್ಲಾ ಯುವಜನ ಅಧಿಕಾರಿ, ನೆಹರು ಯುವ ಕೇಂದ್ರ, ರಜತಾದ್ರಿ ಮಣಿಪಾಲ, ದೂ.ಸಂಖ್ಯೆ: 0820- 2574992 ಅನ್ನು ಸಂಪರ್ಕಿಸುವಂತೆ ನೆಹರು ಯುವ ಕೇಂದ್ರದ ಕಚೇರಿ ಪ್ರಕಟಣೆ ತಿಳಿಸಿದೆ.





