ವಸತಿ ಶಾಲೆಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
ಮಂಗಳೂರು, ಜು.29: ತಾಲೂಕಿನ ಕಮ್ಮಾಜೆ, ಕಲ್ಲಬೆಟ್ಟು, ನೆಲ್ಲಿತೀರ್ಥ, ಗುರುಪುರ ಹಾಗೂ ಬೆಳ್ತಂಗಡಿಯ ಮಚ್ಚಿನ, ಮುಂಡಾಜೆ, ಹೊಸಂಗಡಿ, ಬಂಟ್ವಾಳದ ವಗ್ಗ, ಪುತ್ತೂರಿನ ಬಲ್ನಾಡು, ಉಪ್ಪಿನಂಗಡಿ ಹಾಗೂ ಸುಳ್ಯದ ಪಂಜ ಮೊರಾರ್ಜಿ ದೇಸಾಯಿ/ ಡಾ. ಬಿ.ಆರ್. ಅಂಬೇಡ್ಕರ್/ ಇಂದಿರಾ ಗಾಂಧಿ ವಸತಿ ಶಾಲೆಗಳಿಗೆ 6ನೇತರಗತಿ ಪ್ರವೇಶಕ್ಕಾಗಿ ಅರ್ಜಿ ಅಹ್ವಾನಿಸಲಾಗಿದೆ.
ಪ್ರಸ್ತುತ ಜಿಲ್ಲೆಯಲ್ಲಿ 6ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. 6ರಿಂದ 10ನೇ ತರಗತಿಯವರೆಗೆ ಆಂಗ್ಲ ಮಾಧ್ಯಮದಲ್ಲಿ ವ್ಯಾಸಂಗ ಮಾಡಲು ಪ್ರತಿಭಾನ್ವಿತ ಗ್ರಾಮೀಣ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ.
ಈ ವಿದ್ಯಾರ್ಥಿಗಳಿಗೆ ಯಾವುದೇ ಶುಲ್ಕವಿಲ್ಲದೆ ಊಟ, ವಸತಿ, ಸಮವಸ್ತ್ರ, ಪಠ್ಯಪುಸ್ತಕ ಹಾಗೂ ಇನ್ನಿತರ ಸಾಮಗ್ರಿಗಳನ್ನು ನೀಡಲಾಗುವುದು. ಸೆಪ್ಟಂಬರ್ 16ರಂದು ಬೆಳಗ್ಗೆ 11ಕ್ಕೆ ಆಯಾ ತಾಲೂಕು ಕೇಂದ್ರಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುವುದು. ಆಭ್ಯರ್ಥಿಯು ತನ್ನ ಎಸ್ಎಟಿಎಸ್ ಸಂಖ್ಯೆ, ಭಾವಚಿತ್ರ, ಜಾತಿ ಹಾಗೂ ಆದಾಯ ಪ್ರಮಾಣ ಪತ್ರ ಹಾಗೂ ಸಂಬಂಧಿತ ಇತರ ದಾಖಲೆಗಳೊಂದಿಗೆ ಹತ್ತಿರದ ವಸತಿ ಶಾಲೆಯ ಪ್ರಾಂಶುಪಾಲರನ್ನು ಸಂಪರ್ಕಿಸಿ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸುವುದು. ಅರ್ಜಿ ಸಲ್ಲಿಸಲು ಆಗಸ್ಟ್ 10 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ವಸತಿ ಶಾಲಾ ಪ್ರಾಂಶುಪಾಲರನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.







