Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಪಾಕಿಸ್ತಾನದಲ್ಲಿ ಹೆಚ್ಚುತ್ತಿರುವ...

ಪಾಕಿಸ್ತಾನದಲ್ಲಿ ಹೆಚ್ಚುತ್ತಿರುವ ಮಹಿಳೆಯರ ಮೇಲಿನ ಹಲ್ಲೆ ಪ್ರಕರಣ: ಮಾನವ ಹಕ್ಕು ಸಂಘಟನೆ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ30 July 2021 9:11 PM IST
share
ಪಾಕಿಸ್ತಾನದಲ್ಲಿ ಹೆಚ್ಚುತ್ತಿರುವ ಮಹಿಳೆಯರ ಮೇಲಿನ ಹಲ್ಲೆ ಪ್ರಕರಣ: ಮಾನವ ಹಕ್ಕು ಸಂಘಟನೆ ಎಚ್ಚರಿಕೆ

ಇಸ್ಲಾಮಾಬಾದ್, ಜು.30: ಪಾಕಿಸ್ತಾನದಲ್ಲಿ ಮಹಿಳೆಯರ ಮೇಲಿನ ಹಲ್ಲೆ ಪ್ರಕರಣ ಹೆಚ್ಚುತ್ತಿದ್ದು , ಕಳೆದ ವರ್ಷದ ಜನವರಿಯಿಂದ ಮಾರ್ಚ್ ವರೆಗಿನ ಅವಧಿಯಲ್ಲಿ ಕೌಟುಂಬಿಕ ಹಿಂಸೆಯ ಪ್ರಕರಣದಲ್ಲಿ 200% ಏರಿಕೆಯಾಗಿದೆ ಎಂದು ಹ್ಯೂಮನ್ ರೈಟ್ಸ್ ವಾಚ್ ಸಂಸ್ಥೆಯ ವರದಿ ಹೇಳಿದೆ.

ಮಾರ್ಚ್ ನಲ್ಲಿ ಕೊರೋನ ಸೋಂಕಿನ ಕಾರಣದಿಂದ ದೇಶವ್ಯಾಪಿ ಲಾಕ್ಡೌನ್ ಜಾರಿಯಾದ ಬಳಿಕ ಕೌಟುಂಬಿಕ ಹಿಂಸೆ ಮತ್ತಷ್ಟು ಹೆಚ್ಚಿದೆ ಎಂದೂ ವರದಿ ಹೇಳಿದೆ. ಕಳೆದ ವಾರ , ರಾಜತಾಂತ್ರಿಕರೊಬ್ಬರ ಪುತ್ರಿ, 27 ವರ್ಷದ ನೂರ್ ಮುಕದಮ್ ರ ರುಂಡ ಕತ್ತರಿಸಿದ್ದ ಸ್ಥಿತಿಯಲ್ಲಿದ್ದ ಮೃತದೇಹ ಪತ್ತೆಯಾಗಿತ್ತು. ಈಕೆಯ ಬಾಲ್ಯಕಾಲದ ಸ್ನೇಹಿತನೊಬ್ಬ ಈ ಹತ್ಯೆ ಮಾಡಿರುವುದಾಗಿ ಪ್ರಕರಣ ದಾಖಲಾಗಿತ್ತು. ಆದರೆ ವಾಸ್ತವವಾಗಿ, ಮನೆಯಲ್ಲಿ ತನ್ನ ಮೇಲಾಗುತ್ತಿರುವ ಹಲ್ಲೆಯನ್ನು ಸಹಿಸಲಾಗದೆ ಮುಕದಮ್ ಕಿಟಕಿಯಿಂದ ಹೊರಗೆ ಜಿಗಿಯಲು ಪ್ರಯತ್ನಿಸಿದ್ದರು. ಆಕೆಯನ್ನು ಮತ್ತೆ ಒಳಗೆ ಎಳೆದುಕೊಂಡು ಮತ್ತಷ್ಟು ಹಲ್ಲೆ ನಡೆಸಿ, ರುಂಡ ಕತ್ತರಿಸಲಾಗಿದೆ ಎಂದು ಪಾಕಿಸ್ತಾನದ ಪ್ರಮುಖ ಮಾನವಹಕ್ಕು ಕಾಯಕರ್ತೆ ತಾಹಿರಾ ಅಬ್ದುಲ್ಲಾ ಹೇಳಿದ್ದಾರೆ.

ರಾಜತಾಂತ್ರಿಕರ ಪುತ್ರಿಗೇ ಈ ಗತಿಯಾದರೆ, ಇಲ್ಲಿರುವ ಸಾಮಾನ್ಯ ಜನರ ಪಾಡೇನು ಎಂದು ಪ್ರಶ್ನಿಸಿರುವ ಅವರು, ಲಿಂಗ ಆಧಾರಿತ ಹಲ್ಲೆ, ಹಿಂಸಾಚಾರ ಪ್ರಕರಣ ದೇಶದಲ್ಲಿ ಹೆಚ್ಚುತ್ತಿರುವುದು ದೇಶವು ಇನ್ನಷ್ಟು ಧಾರ್ಮಿಕ ಉಗ್ರವಾದದ ಕಡೆಗೆ ವಾಲುತ್ತಿರುವ ಸೂಚನೆಯಾಗಿದೆ ಎಂದಿದ್ದಾರೆ. ಪಾಕಿಸ್ತಾನದಲ್ಲಿ ಮಹಿಳೆಯರ ವಿರುದ್ಧದ ಲೈಂಗಿಕ ದೌರ್ಜನ್ಯ ಮತ್ತು ಹಿಂಸಾಚಾರವು ಮೌನ ಸಾಂಕ್ರಾಮಿಕವಾಗಿದ್ದು ಯಾರಿಗೂ ಇದು ಗೋಚರವಾಗುವುದಿಲ್ಲ ಮತ್ತು ಯಾರು ಕೂಡಾ ಈ ಬಗ್ಗೆ ಮಾತಾಡುವುದಿಲ್ಲ ಎಂದು ತಾಹಿರಾ ಹೇಳುತ್ತಾರೆ.

 ಕೌಟುಂಬಿಕ ಹಿಂಸೆಯಿಂದ ಸಂತ್ರಸ್ತರಾಗಿರುವ ಮಹಿಳೆಯರಲ್ಲಿ ಬಹುತೇಕ ಬಡ ಮತ್ತು ಮಧ್ಯಮವರ್ಗದವರಾಗಿದ್ದು ಹೆಚ್ಚಿನ ಸಂದರ್ಭದಲ್ಲಿ ಇಂತಹ ಸಾವಿನ ಪ್ರಕರಣ ವರದಿಯಾಗುವುದೇ ಇಲ್ಲ ಎಂದು ಮಾನವಹಕ್ಕು ಕಾರ್ಯಕರ್ತರು ಆರೋಪಿಸಿದ್ದಾರೆ.

ಹೀಗಿದ್ದರೂ, ಮಹಿಳೆಯರನ್ನು ಕೌಟುಂಬಿಕ ಹಿಂಸೆಯಿಂದ (ಪತಿಯಿಂದ ಹಲ್ಲೆ ಸೇರಿದಂತೆ) ರಕ್ಷಿಸುವ ನಿಟ್ಟಿನಲ್ಲಿ ಮಸೂದೆಯೊಂದನ್ನು ಅಂಗೀಕರಿಸಲು ಪಾಕ್ ಸಂಸತ್ತು ವಿಫಲವಾಗಿದೆ. ಬದಲು, ಈ ಬಗ್ಗೆ ಪರಿಶೀಲಿಸಲು ಇಸ್ಲಾಮಿಕ್ ಸೈದ್ಧಾಂತಿಕ ಸಮಿತಿಗೆ ಸೂಚಿಸಿದೆ. ವಿಪರ್ಯಾಸವೆಂದರೆ, ಇದೇ ಸಮಿತಿ ಈ ಹಿಂದೆ, ಪತ್ನಿಗೆ ಗಂಡ ಹೊಡೆಯುವುದರಲ್ಲಿ ತಪ್ಪೇನಿಲ್ಲ ಎಂದು ಸಲಹೆ ನೀಡಿತ್ತು.

2020ರಲ್ಲಿ ವಿಶ್ವ ಆರ್ಥಿಕ ವೇದಿಕೆಯ ಜಾಗತಿಕ ಲಿಂಗ ಸಮಾನತೆ ಸೂಚ್ಯಂಕದಲ್ಲಿರುವ 156 ದೇಶಗಳಲ್ಲಿ ಪಾಕಿಸ್ತಾನ 153ನೇ ಸ್ಥಾನ ಪಡೆದಿತ್ತು. ಇರಾಕ್, ಯೆಮನ್ ಮತ್ತು ಅಪಘಾನಿಸ್ತಾನ ದೇಶಗಳು ಪಾಕಿಸ್ತಾನದ ನಂತರದ ಸ್ಥಾನದಲ್ಲಿದ್ದವು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X