Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಪಿಒಕೆ ಮತದಾನದ ಬಗ್ಗೆ ಭಾರತದ ಹೇಳಿಕೆ...

ಪಿಒಕೆ ಮತದಾನದ ಬಗ್ಗೆ ಭಾರತದ ಹೇಳಿಕೆ ತಿರಸ್ಕರಿಸಲು ಭಾರತದ ರಾಜತಾಂತ್ರಿಕರಿಗೆ ಪಾಕ್ ಸಮನ್ಸ್

ವಾರ್ತಾಭಾರತಿವಾರ್ತಾಭಾರತಿ30 July 2021 10:26 PM IST
share

ಇಸ್ಲಮಾಬಾದ್, ಜು.30: ಪಾಕ್ ಆಕ್ರಮಿತ ಕಾಶ್ಮೀರ(ಪಿಒಕೆ)ದಲ್ಲಿ ಇತ್ತೀಚೆಗೆ ನಡೆದ ಚುನಾವಣೆ ಬಗ್ಗೆ ಭಾರತದ ಹೇಳಿಕೆಯನ್ನು ತಿರಸ್ಕರಿಸಿರುವ ಬಗ್ಗೆ ಮಾಹಿತಿ ನೀಡಲು ಪಾಕಿಸ್ತಾನ ಭಾರತದ ಹೈಕಮಿಶನ್ನ ರಾಜತಾಂತ್ರಿಕರಿಗೆ ಸಮನ್ಸ್ ನೀಡಿದೆ ಎಂದು ವರದಿಯಾಗಿದೆ. ಭಾರತದ ಪ್ರತಿಭಟನೆಯನ್ನು ಸಂಪೂರ್ಣ ತಿರಸ್ಕರಿಸಿರುವುದನ್ನು ತಿಳಿಸಲು ಮತ್ತು ಜಮ್ಮು-ಕಾಶ್ಮೀರ ವಿವಾದದಲ್ಲಿ ಪಾಕಿಸ್ತಾನದ ಸ್ಪಷ್ಟ ಮತ್ತು ಸ್ಥಿರ ನಿಲುವನ್ನು ವ್ಯಕ್ತಪಡಿಸಲು ಭಾರತದ ಹೈಕಮಿಷನ್ನ ಸಹಾಯಕ ರಾಯಭಾರಿಗೆ ವಿದೇಶ ವ್ಯವಹಾರ ಇಲಾಖೆ ಸಮನ್ಸ್ ನೀಡಿದೆ ಎಂದು ಪಾಕಿಸ್ತಾನದ ವಿದೇ ವ್ಯವಹಾರ ಇಲಾಖೆ ಹೇಳಿಕೆ ನೀಡಿದೆ.

  ಜುಲೈ 25ರಂದು ಪಿಒಕೆಯಲ್ಲಿ ನಡೆದಿದ್ದ ಚುನಾವಣೆಯನ್ನು ಅಂಗೀಕರಿಸುವುದಿಲ್ಲ ಎಂದು ಭಾರತ ಹೇಳಿತ್ತು. ಪ್ರಧಾನಿ ಇಮ್ರಾನ್ ಖಾನ್ ಅವರ ತೆಹ್ರೀಕ್ ಇ ಇನ್ಸಾಫ್ ಪಕ್ಷ ಚುನಾವಣೆಯಲ್ಲಿ ಗೆಲುವು ಸಾಧಿಸಿತ್ತು. ತನ್ನ ಅಕ್ರಮ ಸ್ವಾಧೀನತೆಯನ್ನು ಮರೆಮಾಚಲು ಈ ರೀತಿಯ ತೋರಿಕೆಯ ಉಪಕ್ರಮ ನಡೆದಿದ್ದು ಈ ವಿಷಯಕ್ಕೆ ಸಂಬಂಧಿಸಿ ಪ್ರಭಲ ಪ್ರತಿಭಟನೆ ಸಲ್ಲಿಸಿರುವುದಾಗಿ ಭಾರತ ಹೇಳಿತ್ತು. ಭಾರತದ ಪ್ರದೇಶದಲ್ಲಿ ಪಾಕಿಸ್ತಾನಕ್ಕೆ ಯಾವುದೇ ಸ್ಥಾನಾಧಿಕಾರವಿಲ್ಲ ಮತ್ತು ತಕ್ಷಣ ಭಾರತದ ಪ್ರದೇಶದ ಅಕ್ರಮ ಸ್ವಾಧೀನತೆಯನ್ನು ತೆರವುಗೊಳಿಸಬೇಕು ಎಂದು ಭಾರತದ ವಿದೇಶ ವ್ಯವಹಾರ ಇಲಾಖೆಯ ವಕ್ತಾರ ಅರಿಂದಮ್ ಬಾಗ್ಚಿ ಪ್ರತಿಕ್ರಿಯಿಸಿದ್ದರು. ಜೊತೆಗೆ, ಜಮ್ಮು ಕಾಶ್ಮೀರದ ಬಗ್ಗೆ ಚೀನಾ ಮತ್ತು ಪಾಕಿಸ್ತಾನ ನೀಡಿದ್ದ ಜಂಟಿ ಹೇಳಿಕೆಯನ್ನು ತಿರಸ್ಕರಿಸಿದ್ದ ಅವರು, ಜಮ್ಮು ಕಾಶ್ಮೀರ ಭಾರತದ ಅವಿಭಾಜ್ಯ ಅಂಗವಾಗಿದೆ ಮತ್ತು ಎಂದೆಂದಿಗೂ ಭಾರತದ ಪ್ರದೇಶವಾಗಿಯೇ ಇರಲಿದೆ ಎಂದು ಸ್ಪಷ್ಟಪಡಿಸಿದ್ದರು.

ಭಾರತ-ಪಾಕ್ ನಡುವಿನ ಜಮ್ಮು ಕಾಶ್ಮೀರ ವಿವಾದವು 1948ರಿಂದಲೂ ವಿಶ್ವಸಂಸ್ಥೆ ಭದ್ರತಾ ಸಮಿತಿಯ ಅಜೆಂಡಾದಲ್ಲಿದ್ದು ಈ ಬಗ್ಗೆ ಹಲವು ನಿರ್ಣಯಗಳನ್ನು ಕೈಗೊಳ್ಳಲಾಗಿದೆ.

ಅಂತರಾಷ್ಟ್ರಿಯ ಮಟ್ಟದಲ್ಲಿ ವಿವಾದಿತ ರಾಜ್ಯವೆಂದು ಗುರುತಿಸಲಾಗಿರುವ ಜಮ್ಮು ಕಾಶ್ಮೀರದಲ್ಲಿ, ವಿಶ್ವಸಂಸ್ಥೆಯ ಭದ್ರತಾ ಸಮಿತಿಯ ನಿರ್ಣಯಗಳನ್ನು ಧಿಕ್ಕರಿಸಿ ಏಕಪಕ್ಷೀಯವಾಗಿ ಬದಲಾವಣೆ ತರಲು ಭಾರತ ಪ್ರಯತ್ನಿಸುತ್ತಿದೆ ಎಂದು ಪಾಕಿಸ್ತಾನದ ವಿದೇಶ ಕಾರ್ಯಾಲಯ ಹೇಳಿದೆ. ಅಲ್ಲದೆ, ಕಾಶ್ಮೀರದ ಬಗ್ಗೆ ವಿಶ್ವಸಂಸ್ಥೆ ಭದ್ರತಾ ಸಮಿತಿಯ ನಿರ್ಣಯಗಳನ್ನು ಜಾರಿಗೊಳಿಸಲು ಭಾರತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X