ಕುಲಶೇಖರ ಸಿಲ್ವರ್ ಗೇಟ್ ಬಳಿ ಹಾಲಿನ ಬೂತ್ ಬೆಂಕಿಗಾಹುತಿ
![ಕುಲಶೇಖರ ಸಿಲ್ವರ್ ಗೇಟ್ ಬಳಿ ಹಾಲಿನ ಬೂತ್ ಬೆಂಕಿಗಾಹುತಿ ಕುಲಶೇಖರ ಸಿಲ್ವರ್ ಗೇಟ್ ಬಳಿ ಹಾಲಿನ ಬೂತ್ ಬೆಂಕಿಗಾಹುತಿ](https://www.varthabharati.in/sites/default/files/images/articles/2021/07/31/300853-1627703626.gif)
ಮಂಗಳೂರು, ಜು.31: ನಗರ ಹೊರವಲಯದ ಕುಲಶೇಖರ ಸಮೀಪದ ಸಿಲ್ವರ್ ಗೇಟ್ ಬಳಿಯ ನಂದಿನಿ ಹಾಲಿನ ಬೂತ್ ಶುಕ್ರವಾರ ತಡರಾತ್ರಿ ಬೆಂಕಿಗೆ ಆಹುತಿಯಾಗಿದೆ.
ವಿಕಲಚೇತನರಾಗಿರುವ ವಸಂತ ಕುಮಾರ್ ಎಂಬವರಿಗೆ ಸೇರಿದ 'ವಿಜೇತ್ ನಂದಿನಿ ಮಿಲ್ಕ್ ಪಾರ್ಲರ್' ಎಂಬ ಹೆಸರಿನ ಈ ಹಾಲಿನ ಬೂತ್ ಶುಕ್ರವಾರ ರಾತ್ರಿ 9:30ರವರೆಗೆ ತೆರೆದಿತ್ತು ಎನ್ನಲಾಗಿದೆ. ಆದರೆ ತಡರಾತ್ರಿ ಸುಮಾರು 2:25ರ ಬಳಿಕ ಕದ್ರಿ ಅಗ್ನಿಶಾಮಕ ಠಾಣೆಗೆ ಬಂದ ಕರೆಯಂತೆ ಸ್ಥಳಕ್ಕೆ ತೆರಳಿದಾಗ ಹಾಲಿನ ಬೂತ್ ಭಾಗಶಃ ಸುಟ್ಟು ಹೋಗಿತ್ತು. ಬೂತ್ನೊಳಗಿದ್ದ ಸುಮಾರು 500 ಲೀ.ನಷ್ಟು ಹಾಲು ಮತ್ತು ಹಾಲಿನ ಇತರ ಉತ್ಪನ್ನಗಳ ಸಹಿತ ಎಲ್ಲಾ ವಸ್ತುಗಳಿಗೆ ಹಾನಿಯಾಗಿದೆ. ಇದರಿಂದ 2:50 ಲಕ್ಷ ರೂ.ಗಿಂತಲೂ ಅಧಿಕ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಶಾರ್ಟ್ ಸರ್ಕ್ಯೂಟ್ನಿಂದ ಈ ಅವಘಡ ಸಂಭವಿಸಿರಬಹುದು ಎಂದು ಹೇಳಲಾಗಿದೆ.