Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಭಿವೃದ್ಧಿ ಕಾಣದ ಪ್ರಾಕೃತಿಕ ಸೊಬಗಿನ...

ಅಭಿವೃದ್ಧಿ ಕಾಣದ ಪ್ರಾಕೃತಿಕ ಸೊಬಗಿನ ವೀಕ್ಷಣೆ ತಾಣ ಮೆಟ್ಕಲ್‌ಗುಡ್ಡದ ಸಂಪರ್ಕ ರಸ್ತೆ!

ವಾರ್ತಾಭಾರತಿವಾರ್ತಾಭಾರತಿ1 Aug 2021 7:54 PM IST
share
ಅಭಿವೃದ್ಧಿ ಕಾಣದ ಪ್ರಾಕೃತಿಕ ಸೊಬಗಿನ ವೀಕ್ಷಣೆ ತಾಣ ಮೆಟ್ಕಲ್‌ಗುಡ್ಡದ ಸಂಪರ್ಕ ರಸ್ತೆ!

ಕುಂದಾಪುರ, ಆ.1: ಪುರಾಣ ಪ್ರಸಿದ್ಧ ಶ್ರೀಮಹಾಗಣಪತಿ ದೇವಸ್ಥಾನ ಹಾಗೂ ಪಶ್ಚಿಮ ಘಟ್ಟದ ಸಹಜ ಸುಂದರವಾದ ಪ್ರಾಕೃತಿಕ ಸೊಬಗಿನ ವೀಕ್ಷಣೆಯ ತಾಣ ವಾದ ಮೆಟ್ಕಲ್‌ಗುಡ್ಡವನ್ನು ಸಂಪರ್ಕಿಸುವ ಮಣ್ಣಿನ ರಸ್ತೆ ದುರ್ಗಮವಾಗಿದ್ದು, ಈ ರಸ್ತೆಯನ್ನು ಅಭಿವೃದ್ಧಿ ಮಾಡುವಂತೆ ಭಕ್ತರು ಹಾಗೂ ಪ್ರವಾಸಿಗರಿಂದ ಒತ್ತಾಯಗಳು ಕೇಳಿ ಬರುತ್ತಿವೆ.

ಸಿದ್ಧಾಪುರ ಹೊಸಂಗಡಿಯಿಂದ ನಾಲ್ಕು ಕಿ.ಮೀ. ದೂರದಲ್ಲಿರುವ ಮೆಟ್ಕಲ್ ಗುಡ್ಡ ಸುಮಾರು ಎರಡು ಸಾವಿರ ಅಡಿಗೂ ಎತ್ತರದಲ್ಲಿದೆ. ಈ ಬೆಟ್ಟಕ್ಕೆ ಇದೀಗ ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಹೊಸಂಗಡಿಯಿಂದ ಬೆಟ್ಟದ ಬುಡದವರೆಗಿನ ಆರಂಭದ 2 ಕಿ.ಮೀ. ರಸ್ತೆ ಅಭಿವೃದ್ಧಿ ಯಾಗಿದ್ದು, ಉಳಿದ ಸುಮಾರು ಎರಡು ಕಿ.ಮೀ. ಮಣ್ಣಿನ ರಸ್ತೆ ಸಂಪೂರ್ಣ ಹದಗೆಟ್ಟಿದೆ.

ಕೆಳಭಾಗದ ಸುಮಾರು 2 ಕಿ.ಮೀ. ದೂರದ ಏರು ಹಾದಿಯ ಮಣ್ಣಿನ ರಸ್ತೆಯಲ್ಲಿ ವಾಹನ ಸಂಚರಿಸುವುದು ಅಸಾಧ್ಯವಾಗಿದೆ. ಆದುದರಿಂದ ಪ್ರವಾಸಿ ಗರು ಬೆಟ್ಟದ ಕೆಳಗೆಯೇ ವಾಹನ ನಿಲ್ಲಿಸಿ ಏರಬೇಕಾಗಿದೆ. ಈ ರಸ್ತೆ ಬೃಹತ್ ಹೊಂಡ, ಕಲ್ಲುಗಳಿಂದ ತುಂಬಿದ್ದು, ನಡೆದಾಡಲು ಕೂಡ ಪ್ರಯಾಸ ಪಡ ಬೇಕಾಗಿದೆ.

ಮೆಟ್ಕಲ್‌ ಗುಡ್ಡವು ಶ್ರೀಮಹಾಗಣಪತಿ ದೇವರ ಸನ್ನಿಧಾನವಾಗಿದ್ದು, ಇಲ್ಲಿಗೆ ನಿತ್ಯ ಅಲ್ಲದಿದ್ದರೂ ವಿಶೇಷ ದಿನಗಳಲ್ಲಿ ಸಾಕಷ್ಟು ಮಂದಿ ಭಕ್ತರು ಆಗಮಿಸಿ, ಪೂಜೆ ಸಲ್ಲಿಸುತ್ತಾರೆ. ಈ ಗುಡ್ಡವು ಸುಮಾರು 2 ಸಾವಿರ ಅಡಿ ಎತ್ತರದಲ್ಲಿ ರುವುದರಿಂದ ಮೇಲೆ ನಿಂತು ಪಶ್ಚಿಮ ಘಟ್ಟದ ಪ್ರಾಕೃತಿಕ ಸೌಂದರ್ಯವನ್ನು ಕಣ್ತುಂಬಿಕೊಳ್ಳಬಹುದಾಗಿದೆ. ಕಣ್ಣು ಹಾಯಿಸಿದಷ್ಟು ಹಸಿರು ಬೆಟ್ಟ ಗುಡ್ಡಗಳೇ ತುಂಬಿಕೊಂಡಿವೆ. ಮಾತ್ರವಲ್ಲದೆ ಹಲವು ಜಲಧಾರೆಗಳ ಸೊಬಗು, ಗದ್ದೆ, ತೋಟ ಗಳ ವಿಹಂಗಮ ನೋಟವನ್ನು ಸವಿಯಬಹುದಾಗಿದೆ.

''ಹೊಸಂಗಡಿ ಗ್ರಾಪಂ ವ್ಯಾಪ್ತಿಯ ಮೆಟ್ಕಲ್‌ಗುಡ್ಡ ದೇವಸ್ಥಾನವನ್ನು ಸಂಪರ್ಕಿ ಸುವ ಮಣ್ಣಿನ ರಸ್ತೆ ಹದಗೆಟ್ಟಿರುವುದು ನಮ್ಮ ಗಮನದಲ್ಲಿ ಇದೆ. ಈ ರಸ್ತೆಯು ಮೀಸಲು ಅರಣ್ಯ ವ್ಯಾಪ್ತಿಯಲ್ಲಿ ಬರುವುದಿಂದ ಅಭಿವೃದ್ಧಿಗೆ ತೊಡಕಾಗಿದೆ. ಮುಂದಿನ ದಿನಗಳಲ್ಲಿ ಪಂಚಾಯತ್‌ನಿಂದ ಸಂಬಂಧಪಟ್ಟ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಅಭಿವೃದ್ಧಿ ಪ್ರಯತ್ನಿಸಲಾಗುವುದು''.

- ಶ್ವೇತಲತಾ, ಪಿಡಿಓ, ಹೊಸಂಗಡಿ ಗ್ರಾ.ಪಂ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X