ಕಳವಿಗೆ ಯತ್ನ: ಪೊಲೀಸರನ್ನು ಕಂಡು ಆರೋಪಿಗಳು ಪರಾರಿ
ಬೈಂದೂರು, ಆ.1: ಅಂಗಡಿಗೆ ಕಳವಿಗೆ ಯತ್ನಿಸುತ್ತಿದ್ದ ತಂಡವೊಂದು ಪೊಲೀಸರನ್ನು ಕಂಡು ಪರಾರಿಯಾಗಿರುವ ಘಟನೆ ಜು.31ರಂದು ನಸುಕಿನ ವೇಳೆ ಶಿರೂರು ಮಾರ್ಕೆಟ್ ಬಳಿ ನಡೆದಿದೆ.
ಬಿಳಿ ಬಣ್ಣದ ಕಾರಿನಲ್ಲಿ ಬಂದ ತಂಡ ಅಂಗಡಿಯ ಬಳಿ ನಿಂತು ಕಳ್ಳತನ ಮಾಡಲು ಪ್ರಯತ್ನಿಸುತ್ತಿದ್ದರೆನ್ನಲಾಗಿದೆ. ಈ ಕುರಿತು ದೊರೆತ ಮಾಹಿತಿ ಯಂತೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಈ ವೇಳೆ ಆರೋಪಿಗಳು ಕಾರಿನಲ್ಲಿ ಕುಳಿತು ಭಟ್ಕಳ ಕಡೆಗೆ ವೇಗವಾಗಿ ಚಲಾಯಿಸಿಕೊಂಡು ಹೋದರು ಎನ್ನಲಾಗಿದೆ. ಬಳಿಕ ಟೋಲ್ನಿಂದ ಸ್ದಲ್ಪಮುಂದೆ ಚೆಕ್ಪೋಸ್ಟ್ನಲ್ಲಿ ಪೊಲೀಸರು ಇರುವುದನ್ನು ನೋಡಿ ಕಾರನ್ನು ರಾಷ್ಟ್ರೀಯ ಹೆದ್ದಾರಿ ಪೂರ್ವ ಬದಿಯ ಭಟ್ಕಳದಿಂದ ಬೈಂದೂರು ಕಡೆಗೆ ಬರುವ ಏಕಮುಖ ಸಂಚಾರದ ರಸ್ತೆಯಲ್ಲಿ ವಿರುದ್ಧವಾಗಿ ಚಲಾಯಿಸಿಕೊಂಡು ಹೋಗಿ ಬ್ಯಾರಿಕೇಡ್ಗಳಿಗೆ ಢಿಕ್ಕಿ ಹೊಡೆದು ಜಖಂಗೊಳಿಸಿದ್ದಾರೆ. ನಂತರ ಮತ್ತೆ ಭಟ್ಕಳ ಕಡೆಗೆ ಚಲಾಯಿಸಿಕೊಂಡು ಹೋಗಿರುವುದಾಗಿ ದೂರಲಾಗಿದೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.
Next Story