Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಿಲ್ಲಿ ಪೊಲೀಸ್ ಮುಖ್ಯಸ್ಥರಾಗಿ ರಾಕೇಶ್...

ದಿಲ್ಲಿ ಪೊಲೀಸ್ ಮುಖ್ಯಸ್ಥರಾಗಿ ರಾಕೇಶ್ ಅಸ್ತಾನ ನೇಮಕಾತಿ ವಿರೋಧಿಸಿ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಲಿರುವ ಸುಪ್ರೀಂ

ವಾರ್ತಾಭಾರತಿವಾರ್ತಾಭಾರತಿ2 Aug 2021 4:44 PM IST
share
ದಿಲ್ಲಿ ಪೊಲೀಸ್ ಮುಖ್ಯಸ್ಥರಾಗಿ ರಾಕೇಶ್ ಅಸ್ತಾನ ನೇಮಕಾತಿ ವಿರೋಧಿಸಿ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಲಿರುವ ಸುಪ್ರೀಂ

ಹೊಸದಿಲ್ಲಿ : ನಿವೃತ್ತಿಗಿಂತ ಕೇವಲ ಮೂರು ದಿನಗಳಿಗೆ ಮುನ್ನ ಮಾಜಿ ಸಿಬಿಐ ಅಧಿಕಾರಿ ರಾಕೇಶ್ ಅಸ್ತಾನ ಅವರನ್ನು ದಿಲ್ಲಿ ಪೊಲೀಸ್ ಆಯುಕ್ತರನ್ನಾಗಿ ಸರಕಾರ ನೇಮಕಗೊಳಿಸಿರುವ ಕ್ರಮವನ್ನು ಪ್ರಶ್ನಿಸಿ ಎಂ ಎಲ್ ಶರ್ಮ ಎಂಬ ವಕೀಲರು ಸಲ್ಲಿಸಿರುವ  ಅರ್ಜಿಯ ವಿಚಾರಣೆಯನ್ನು   ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ಹಾಗೂ ನ್ಯಾಯಮೂರ್ತಿ ಸೂರ್ಯಕಾಂತ್ ಅವರ ದ್ವಿಸದಸ್ಯ ಪೀಠ ಗುರುವಾರ ವಿಚಾರಣೆಗೆ ಕೈಗೆತ್ತಿಕೊಳ್ಳಲಿದೆ.

ಕನಿಷ್ಠ ಎರಡು ವರ್ಷ ಸೇವಾವಧಿ ಬಾಕಿಯಿರುವ ಅಧಿಕಾರಿಗಳನ್ನಷ್ಟೇ  ಕೇಂದ್ರ ಲೋಕಸೇವಾ ಆಯೋಗ ನೇಮಿಸಬೇಕೆಂಬ 2018ರ ಸುಪ್ರೀಂ ಕೋರ್ಟ್ ತೀರ್ಪನ್ನು ಆಸ್ಥಾನ ಅವರ ನೇಮಕಾತಿಯಲ್ಲಿ ಉಲ್ಲಂಘಿಸಲಾಗಿದೆ ಎಂದು ಅರ್ಜಿದಾರರು ಹೇಳಿದ್ದಾರೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ಗೃಹ ಸಚಿವಾಲಯದ ಅಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಬೇಕೆಂದೂ ಅವರು  ಮನವಿ ಮಾಡಿದ್ದಾರೆ.

"ಸಾರ್ವಜನಿಕ ಹಿತದೃಷ್ಟಿ" ಯಿಂದ ಆಸ್ತಾನ ಅವರಿಗೆ ಒಂದು ವರ್ಷ ಸೇವಾವಧಿ ವಿಸ್ತರಣೆ ನೀಡಿ ನಿವೃತ್ತಿಗೆ ಇನ್ನೇನು ಮೂರು ದಿನಗಳಿವೆಯೆನ್ನುವಾಗ ಅವರನ್ನು ದಿಲ್ಲಿ ಪೊಲೀಸ್ ಆಯುಕ್ತರನ್ನಾಗಿ ಕಳೆದ ವಾರ ಕೇಂದ್ರ ಗೃಹ ಸಚಿವಾಲಯ ನೇಮಿಸಿತ್ತು.

ಆಸ್ತಾನ ಅವರನ್ನು ಸಿಬಿಐ ನಿರ್ದೇಶಕರನ್ನಾಗಿಸಬೇಕೆಂದು ಸರಕಾರ  ಈ ಹಿಂದೆ ಬಯಸಿದ್ದರೂ ಹಾಗೂ ಸರಕಾರ ಸಿದ್ಧಪಡಿಸಿದ್ದ ಅಂತಿಮ ಪಟ್ಟಿಯಲ್ಲಿ ಅವರ ಹೆಸರು ಮೊದಲ ಸ್ಥಾನದಲ್ಲಿದ್ದರೂ ಸುಪ್ರೀಂ ಕೋರ್ಟಿನ ತೀರ್ಪನ್ನು ಉನ್ನತಾಧಿಕಾರ ಸಮಿತಿಯ ಸದಸ್ಯರಲ್ಲೊಬ್ಬರಾಗಿದ್ದ ಸಿಜೆಐ ಅವರು ಉಲ್ಲೇಖಿಸಿದ್ದರಿಂದ ಆಸ್ಥಾನ ಅವರಿಗೆ ಆ ಹುದ್ದೆ ತಪ್ಪಿ ಹೋಗಿತ್ತು.

ಪೊಲೀಸ್ ಮುಖ್ಯಸ್ಥರ ಹುದ್ದೆಗೆ ನೇಮಕಗೊಳ್ಳಲು ಆರು ತಿಂಗಳ ಸೇವಾವಧಿ ಬಾಕಿಯಿರುವವರನ್ನು ನೇಮಿಸಬಾರದೆಂಬ ಸುಪ್ರೀಂ ಕೋರ್ಟಿನ ಈ ಹಿಂದಿನ ಸೂಚನೆಯನ್ನು ಸರಕಾರಕ್ಕೆ ನೆನಪಿಸಲಾಗಿದ್ದರಿಂದ ಸರಕಾರ ಆಸ್ಥಾನ ಅವರನ್ನು ದಿಲ್ಲಿ ಪೊಲೀಸ್ ಮುಖ್ಯಸ್ಥರನ್ನಾಗಿಸುವುದಿಲ್ಲವೆಂದೇ ನಂಬಲಾಗಿತ್ತು.

ಅಸ್ತಾನ ಅವರ ನೇಮಕಾತಿಯನ್ನು ಆಮ್ ಆದ್ಮಿ ಪಕ್ಷ ಹಾಗೂ ಕಾಂಗ್ರೆಸ್ ಈಗಾಗಲೇ ಟೀಕಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X