Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹಿರಿಯೂರು ಶಾಸಕಿ ಪೂರ್ಣಿಮಾಗೆ ಸಚಿವ...

ಹಿರಿಯೂರು ಶಾಸಕಿ ಪೂರ್ಣಿಮಾಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ2 Aug 2021 10:24 PM IST
share
ಹಿರಿಯೂರು ಶಾಸಕಿ ಪೂರ್ಣಿಮಾಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯ

ಬೆಂಗಳೂರು, ಆ.2: ರಾಜ್ಯದಲ್ಲಿ ಪ್ರವರ್ಗ-1ರ ಅಡಿಯಲ್ಲಿ ಬರುವ ಯಾದವ, ಗೊಲ್ಲ ಸಮುದಾಯದ ಏಕೈಕ ಮಹಿಳಾ ಶಾಸಕಿಯಾಗಿರುವ ಕೆ.ಪೂರ್ಣಿಮಾ ಶ್ರೀನಿವಾಸ್ ಅವರನ್ನು ಸಚಿವೆ ಹಾಗೂ ಉಪಮುಖ್ಯಮಂತ್ರಿಯನ್ನಾಗಿ ಮಾಡಬೇಕೆಂದು ಕರ್ನಾಟಕ ರಾಜ್ಯ ಪ್ರವರ್ಗ -1 ರ ಜಾತಿಗಳ ಒಕ್ಕೂಟ ಒತ್ತಾಯಿಸಿದೆ.

ಸೋಮವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಅಧ್ಯಕ್ಷ ಹಾಗೂ ಯಾದವ ಸಮಾಜದ ಮುಖಂಡ ಡಿ.ಟಿ.ಶ್ರೀನಿವಾಸ್, ರಾಜ್ಯದ 50 ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲುವಿನ ನಿರ್ಣಾಯಕ ಪಾತ್ರ ವಹಿಸುವಲ್ಲಿ ಪ್ರವರ್ಗ 1ರ ಜಾತಿಗಳು ಸಮರ್ಥವಾಗಿವೆ ಎಂದರು.

ಈ ಜಾತಿಯ ಅಡಿಯಲ್ಲಿ ಬರುವ ಗೊಲ್ಲ, ಉಪ್ಪಾರ, ಬೆಸ್ತ, ಕೋಳಿ, ದೊಂಬಿದಾಸ ಇತ್ಯಾದಿ ಸೇರಿ ಒಟ್ಟು 356 ಉಪಜಾತಿಗಳಿದ್ದು, ಒಂದು ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು, ರಾಜ್ಯದ ಜನಸಂಖ್ಯೆಯಲ್ಲಿ 6ನೇ ಒಂದು ಭಾಗದಷ್ಟಿರುವ ಈ ಜಾತಿಯ ಆಧಾರದ ಮೇಲೆ 15 ರಿಂದ 20 ಕ್ಷೇತ್ರಗಳು ಗೆಲ್ಲಬಹುದಾಗಿದೆ ಎಂದು ಅವರು ತಿಳಿಸಿದರು.

ಹಿಂದುಳಿದ ವರ್ಗಗಳ ಮಹಿಳಾ ಶಾಸಕಿಯಾಗಿ ಪೂರ್ಣಿಮಾ ಶ್ರೀನಿವಾಸ್ ಈ ಸಂಘಟನೆಯ ನೇತೃತ್ವ ವಹಿಸಿಕೊಂಡು ಪ್ರವರ್ಗ-1 ಜಾತಿಯ ಗೊಲ್ಲ ಸಮಾಜದಿಂದ ಆಡಳಿತ ಪಕ್ಷ ಬಿಜೆಪಿಯಿಂದ ವಿಧಾನಸಭೆಗೆ ಗೆಲುವು ಸಾಧಿಸಿರುವ ಏಕೈಕ ಮಹಿಳಾ ಶಾಸಕಿಯಾಗಿದ್ದಾರೆ. ರಾಜಕೀಯ ಕುಟುಂಬ ಹಿನ್ನೆಲೆಯಲ್ಲಿ ಬಂದಿರುವ ಇವರ ತಂದೆ ದಿವಂಗತ ಎ.ಕೃಷ್ಣಪ್ಪನವರು ಈ ಹಿಂದೆ ಸಮಾಜಕಲ್ಯಾಣ ಸಚಿವರಾಗಿ ಯಶಸ್ವಿಯಾಗಿ ಕಾರ್ಯ ನಿರ್ವಹಿಸಿದ್ದರು ಎಂದು ಅವರು ತಿಳಿಸಿದರು.

ಹಿರಿಯೂರು ವಿಧಾನಸಭಾ ಕ್ಷೇತ್ರದ ಶಾಸಕಿಯಾಗಿರುವ ಪೂರ್ಣಿಮಾ ಶ್ರೀನಿವಾಸ್ ಹಿಂದುಳಿದ ಜಾತಿಗಳ ಸಂಘಟನೆಯನ್ನು ಒಂದೇ ರಥದಲ್ಲಿ ತೆಗೆದುಕೊಂಡು ಹೋಗುವ ನೈಪುಣ್ಯತೆ ಹೊಂದಿದ್ದಾರೆ. ಇತ್ತೀಚಿಗೆ ಕೇಂದ್ರ ಸಚಿವ ಸಂಪುಟದಲ್ಲಿ ಹಿಂದುಳಿದ ಜನಾಂಗದವರಿಗೆ ಹೆಚ್ಚಿನ ಸ್ಥಾನಗಳನ್ನು ನೀಡಿರುವುದು ತುಂಬಾ ಸಂತೋಷದ ವಿಷಯ. ಅದೇ ರೀತಿ ರಾಜ್ಯದಲ್ಲೂ ಹಿಂದುಳಿದ ಜಾತಿಗಳಿಗೆ ಸಂಪುಟದಲ್ಲಿ ಪ್ರಾತಿನಿಧ್ಯ ನೀಡಿದರೆ ಮುಂದಿನ ದಿನಗಳಲ್ಲಿ ಬಿಜೆಪಿಗೆ ಅನುಕೂಲವಾಗುತ್ತದೆ. ಹಾಗಾಗಿ ಮಹಿಳಾ ಕೋಟಾದಲ್ಲಿ ಪೂರ್ಣಿಮಾ ಶ್ರೀನಿವಾಸ್ ರವರಿಗೆ ಸಚಿವ ಸ್ಥಾನ ಹಾಗೂ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಅವರು ಒತ್ತಾಯಿಸಿದರು.

ಪತ್ರಿಕಾಗೋಷ್ಟಿಯಲ್ಲಿ ಉಪ್ಪಾರ ಸಮಾಜದ ಕಾರ್ಯಾಧ್ಯಕ್ಷರಾದ ಎಚ್.ವಿ.ಬಂಡಿ, ಲೋಕೇಶಪ್ಪ, ಗೂರ್ಖಾ ಸಮಾಜ ರಾಜ್ಯಾಧ್ಯಕ್ಷ ಜೋಗಮಲ್, ತೇವರ್ ಸಮಾಜದ ರಾಜ್ಯಾಧ್ಯಕ್ಷ ನಾಗರಾಜ, ದೊಂಬಿದಾಸ ಸಮಾಜದ ರಾಜ್ಯಾಧ್ಯಕ್ಷ ರಂಗಪ್ಪ ಮತ್ತು ಹೆಳವ ಸಮಾಜದ ಗೌರವಾಧ್ಯಕ್ಷ ಎಂ.ಎಸ್. ಹೆಳವರ್ ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X