Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಜ್ಯದ ಸ್ಥಾನಮಾನಕ್ಕಾಗಿ ಲಡಾಕ್ ನಾಯಕರ...

ರಾಜ್ಯದ ಸ್ಥಾನಮಾನಕ್ಕಾಗಿ ಲಡಾಕ್ ನಾಯಕರ ಒಕ್ಕೊರಲ ಆಗ್ರಹ: 370ನೇ ವಿಧಿಯ ಮರುಸ್ಥಾಪನೆಗೂ ಬೇಡಿಕೆ

ವಾರ್ತಾಭಾರತಿವಾರ್ತಾಭಾರತಿ2 Aug 2021 11:22 PM IST
share

ಲೇಹ್,ಆ.2: ಕೇಂದ್ರ ಸರಕಾರವು ಲಡಾಕ್ ಗೆ ವಿಧಾನಸಭೆಯನ್ನು ಹೊಂದಿರುವಂತಹ ಪೂರ್ಣಮಟ್ಟದ ರಾಜ್ಯದ ಸ್ಥಾನಮಾನ ನೀಡಬೇಕೆಂದು ಲಡಾಕ್ ನ ನಾಯಕರು ಒಕ್ಕೊರಲಿನಿಂದ ಆಗ್ರಹಿಸಿದ್ದಾರೆ. ಲಡಾಕ್ಗೆ ಕೇಂದ್ರಾಡಳಿತ ಪ್ರದೇಶದ ಸ್ಥಾನಮಾನ ನೀಡಿದ್ದ ಕೇಂದ್ರ ಸರಕಾರದ ಕ್ರಮವನ್ನು ವಿರೋಧಿಸುವ ಮೂಲಕ ಲಡಾಕ್ ನಾಯಕರು ತಮ್ಮ ಹಿಂದಿನ ನಿಲುವಿನಿಂದ ಸಂಪೂರ್ಣವಾಗಿ ಹಿಂದೆ ಸರಿದಂತಾಗಿದೆ.

    2019ರ ಆಗಸ್ಟ್ 5ರಂದು ಜಮ್ಮಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ 370ನೇ ತಿದ್ದುಪಡಿ ರದ್ದತಿಯ ಎರಡನೆ ವರ್ಷಾಚರಣೆಗೆ ನಾಲ್ಕು ದಿನ ಮಂಚಿತವಾಗಿ ಲೇಹ್ ನಲ್ಲಿ ನಡೆದ ಸಮಾವೇಶದಲ್ಲಿ ಲಡಾಖ್ ಗೆ ರಾಜ್ಯದ ಸ್ಥಾನಮಾನ ನೀಡಬೇಕೆಂಬ ಬೇಡಿಕೆ ವ್ಯಕ್ತವಾಗಿದೆ. ಲೇಹ್ ಹಾಗೂ ಕಾರ್ಗಿಲ್ ಪ್ರಾಂತಗಳ ನಾಯಕರು ಸಮಾವೇಶದಲ್ಲಿ ಪಾಲ್ಗೊಂಡಿದ್ದು, ಹಲವಾರು ಮಹತ್ವದ ವಿಷಯಗಳ ಬಗ್ಗೆ ಚರ್ಚಿಸಿದರು.

   2019ರ ಆಗಸ್ಟ್ 5ರಂದು ಜಮ್ಮುಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿ, ಆ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶವಾಗಿ ವಿಭಜಿಸಿದ ಸಂದರ್ಭದಲ್ಲಿ ಲಡಾಕ್ ನ ನಾಯಕರು ಮೋದಿ ಸರಕಾರದ ಈ ನಡೆಯನ್ನು ಸ್ವಾಗತಿಸಿದ್ದರು.

ರವಿವಾರ ನಡೆದ ಸಮಾವೇಶದಲ್ಲಿ ಭಾಷಣದ ಮಾಡಿದ ನಾಯಕರು ಲಡಾಕ್ ಗೆ ಕೇಂದ್ರಾಡಳಿತ ಸ್ಥಾನಮಾನ ನೀಡಿರುವುದನ್ನು ತಿರಸ್ಕರಿಸಿದರಲ್ಲದೆ, 370ನೇ ವಿಧಿಯಡಿ ಲಡಾಕ್ ನ ಜನತೆಗೆ ಖಾತರಿಪಡಿಸಲಾಗಿದ್ದ ನೆಲ, ಉದ್ಯೋಗಗಳು, ಸಂಸ್ಕೃತಿ ಹಾಗೂ ಭಾಷೆಗಳ ಸಂರಕ್ಷಣೆಯಾಗಬೇಕೆಂದು ಕರೆ ನೀಡಿದರು.

  ಲಡಾಕ್ನಿಂದ ಲೋಕಸಭೆಗೆ ಎರಡು ಸ್ಥಾನಗಳಲ್ಲದೆ, ಪ್ರತ್ಯೇಕ ಶಾಸನಸಭೆಗಳ ಸ್ಥಾಪನೆಯಾಗಬೇಕೆಂದೂ ಅವರು ಆಗ್ರಹಿಸಿದರು. ಆಗಸ್ಟ್ 5ರಂದು ಲಡಾಕ್ಗೆ ಕೇಂದ್ರಾಡಳಿತ ಪ್ರದೇಶದ ಸ್ಥಾಮಾನವನ್ನು ನೀಡಲಾಯಿತಾದರೂ, ವಿಧಾನಸಭೆಯನ್ನು ನೀಡಿರಲಿಲ್ಲ.

 ರವಿವಾರ ಸಮಾವೇಶದ ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಲಡಾಕ್ನ ಜನತಾಚಳವಳಿಯ ಉನ್ನತ ಸಮಿತಿಯ ಅಧ್ಯಕ್ಷ ತುಪ್ಸ್ಟನ್ ಚೆವಾಂಗ್ ಹಾಗೂ ಕಾರ್ಗಿಲ್ ಪ್ರಜಾತಾಂತ್ರಿಕ ಮೈತ್ರಿಕೂಟದ ಉಪಾಧ್ಯಕ್ಷ ಆಸ್ಗರ್ ಅಲಿ ಕರ್ಬಾಲಿ ಮಾತನಾಡಿದರು.‘‘ ಸಂವಿಧಾನದ 371ನೇ ವಿಧಿ ಹಾಗೂ ಆರನೇ ಪರಿಚ್ಚೇದದಡಿ ನಮ್ಮ ನೆಲ ಹಾಗೂ ಉದ್ಯೋಗಗಳಿಗೆ ರಕ್ಷಣೆಯ ಅಗತ್ಯವಿದೆಯೆಂದು ಅವರು ಹೇಳಿದರು. ಲಡಾಕ್ಗೆ ಎರಡು ಲೋಕಸಭಾ ಕ್ಷೇತ್ರಗಳನ್ನು ನೀಡಬೇಕೆಂದು ಅವರು ಆಗ್ರಹಿಸಿದರು..

 ಸಮಾವೇಶದಲ್ಲಿ ಭಾಗವಹಿಸಿದ್ದ ಗುಫ್ಕರ್ ಮೈತ್ರಿಕೂಟದ ಕಾರ್ಗಿಲ್ ಪ್ರಾಂತ ನಾಯಕರುಗಳು ಸಂವಿಧಾನದ 370ನೇ ವಿಧಿಯ ಮರುಸ್ಥಾಪನೆಗೆ ಆಗ್ರಹಿಸಿದರು.ಕಾರ್ಗಿಲ್ ಪ್ರಜಾತಾಂತ್ರಿಕ ಮೈತ್ರಿಕೂಟದಂತಹ ಕೆಲವು ಕಾಶ್ಮೀರಿ ಪಕ್ಷಗಳು ಸಂವಿಧಾನದ 370ನೇ ವಿಧಿ ರದ್ದತಿಯನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X