Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ಡಾ.ಕಫೀಲ್ ಖಾನ್ ಅಮಾನತಿಗೆ ಕಾರಣ ನೀಡಿ":...

"ಡಾ.ಕಫೀಲ್ ಖಾನ್ ಅಮಾನತಿಗೆ ಕಾರಣ ನೀಡಿ": ಉ.ಪ್ರ. ಸರಕಾರಕ್ಕೆ ಅಲಹಾಬಾದ್ ಹೈಕೋರ್ಟ್ ಆದೇಶ

ವಾರ್ತಾಭಾರತಿವಾರ್ತಾಭಾರತಿ3 Aug 2021 9:27 PM IST
share
ಡಾ.ಕಫೀಲ್ ಖಾನ್ ಅಮಾನತಿಗೆ ಕಾರಣ ನೀಡಿ: ಉ.ಪ್ರ. ಸರಕಾರಕ್ಕೆ ಅಲಹಾಬಾದ್ ಹೈಕೋರ್ಟ್ ಆದೇಶ

ಲಕ್ನೋ, ಆ.3: ನಾಲ್ಕು ವರ್ಷಗಳಿಗೂ ಅಧಿಕ ಸಮಯದಿಂದ ಗೋರಖ್ಪುರದ ಆಸ್ಪತ್ರೆಯಿಂದ ಡಾ.ಕಫೀಲ್ ಖಾನ್ ಅವರನ್ನು ಅಮಾನತನ್ನು ಸಮರ್ಥಿಸಲು ಕಾರಣ ನೀಡುವಂತೆ ಅಲಹಾಬಾದ್ ಹೈಕೋರ್ಟ್ ಸೋಮವಾರ ಉತ್ತರಪ್ರದೇಶ ಸರಕಾರಕ್ಕೆ ತಿಳಿಸಿದೆ.

ತನ್ನನ್ನು ಸೇವೆಯಿಂದ ಅಮಾನತುಗೊಳಿಸಿರುವುದನ್ನು ಪ್ರಶ್ನಿಸಿ ಕಫೀಲ್ ಖಾನ್ ಅವರು ಜುಲೈ 29ರಂದು ಸಲ್ಲಿಸಿದ ಅರ್ಜಿಯ ಆಲಿಕೆಯನ್ನು ನಡೆಸಿದ ನ್ಯಾಯಮೂರ್ತಿ ಯಶ್ವಂತ್ ವರ್ಮಾ ಅವರು ಈ ಆದೇಶವನ್ನು ಹೊರಡಿಸಿದ್ದಾರೆ.

ಗೋರಖ್ಪುರದ ಬಾಬಾರಾಘವ್ ದೇಸ್ ಮೆಡಿಕಲ್ ಕಾಲೇಜ್ ಆಸ್ಪತ್ರೆಯಲ್ಲಿ 2017ರಲ್ಲಿ ಆಮ್ಲಜನಕದ ಕೊರತೆಯಿಂದ 63 ಮಂದಿ ಮಕ್ಕಳು ಮೃತಪಟ್ಟ ಘಟನೆಗೆ ಸಂಬಂಧಿಸಿ ಕಫೀಲ್ ಖಾನ್ ಅವರನ್ನು ಅಮಾನತುಗೊಳಿಸಿತ್ತು. ಕರ್ತವ್ಯಲೋಪ, ಭ್ರಷ್ಟಾಚಾರ ಹಾಗೂ ವೈದ್ಯಕೀಯ ನಿರ್ಲಕ್ಷದ ಆರೋಪದಲ್ಲಿ ಅವರು 9 ತಿಂಗಳು ಜೈಲು ವಾಸ ಅನುಭವಿಸಿದ್ದರು.

ಆದರೆ 2019ರಲ್ಲಿ ಉ.ಪ್ರ. ಸರಕಾರವು ಡಾ.ಕಫೀಲ್ ಅವರನ್ನು ಎಲ್ಲಾ ರೀತಿಯ ಆರೋಪಗಳಿಂದ ಮುಕ್ತಗೊಳಿಸಿತ್ತು ಹಾಗೂ ಮಕ್ಕಳ ಪ್ರಾಣವನ್ನು ರಕ್ಷಿಸಲು ಅವರು ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡಿದ್ದರೆಂದು ಶ್ಲಾಘಿಸಿತ್ತು. ಬಿಕ್ಕಟ್ಟಿನ ಸಂದರ್ಭದಲ್ಲಿ ತನ್ನದೇ ಖರ್ಚಿನಲ್ಲಿ ಆಕ್ಸಿಜನ್ ಸಿಲಿಂಡರ್ ಡಾ.ಕಫೀಲ್ ಆಸ್ಪತ್ರೆಗೆ ತರಿಸಿಕೊಂಡಿದ್ದರು ಹಾಗೂ ಇನ್ನೂ ಹೆಚ್ಚು ಆಕ್ಸಿಜನ್ ಸಿಲಿಂಡರ್ಗಳನ್ನು ಆಸ್ಪತ್ರೆಗೆ ಪೂರೈಕೆಯಾಗುವಂತೆ ಏರ್ಪಾಟುಗಳನ್ನು ಮಾಡಿದ್ದರು ಎಂದು ಶ್ಲಾಘಿಸಿತ್ತು.

ಆದಾಗ್ಯೂ 2019ರಲ್ಲಿ ಉ.ಪ್ರ. ಸರಕಾರವು ಖಾನ್ ವಿರುದ್ಧ ಗೋರಖ್ಪುರದ ಆಸ್ಪತ್ರೆಯಲ್ಲಿ ಸಂಭವಿಸಿದ ಶಿಶುಗಳ ಸಾವಿನ ಕುರಿತ ವರದಿಯ ಬಗ್ಗೆ ತಪ್ಪು ಮಾಹಿತಿಗಳನ್ನು ನೀಡಿದ ಹಾಗೂ ತನ್ನ ಅಮಾನತಿನ ಅವಧಿಯಲ್ಲಿ ಸರಕಾರಿ ವಿರೋಧಿ ಹೇಳಿಕೆ ನೀಡಿದ್ದಾರೆಂಬ ಆರೋಪದ ಬಗ್ಗೆ ತತಕಅದು ಆದೇಶವನ್ನು ಹೊರಡಿಸಿತ್ತು.

ತನ್ನ ಪ್ರಕರಣಕ್ಕೆ ಸಂಬಂಧಿಸಿ ಶಿಸ್ತುಕ್ರಮ ಸಮಿತಿಯು 2019ರ ಎಪ್ರಿಲ್ 15ರಂದು ವರದಿಯೊಂದನ್ನು ಸಲ್ಲಿಸಿತ್ತು. ಶಿಸ್ತುಕ್ರಮ ಸಮಿತಿಯು ವರದಿಯನ್ನು ಸ್ವೀಕರಿಸಿತ್ತಾದರೂ, ಪ್ರಕರಣದಲ್ಲಿ ತನ್ನ ದೋಷಮುಕ್ತಿಯನ್ನು ಒಪ್ಪಿಕೊಳ್ಳಲಿಲ್ಲ ಮತ್ತು 11 ತಿಂಗಳ ಬಳಿಕ ತನಿಖೆಗೆ ಮರು ಆಜ್ಞಾಪಿಸಿತ್ತು ಎಂದು ಡಾ. ಕಫೀಲ್ ನ್ಯಾಯಾಲಯಕ್ಕೆ ತಿಳಿಸಿದ್ದರು.

ತನ್ನನ್ನು ಹೊರತುಪಡಿಸಿ, ಗೋರಖ್ಪುರದ ಆಸ್ಪತ್ರೆಯಲ್ಲಿ ಶಿಶು ಮರಣದ ಘಟನೆಗೆ ಸಂಬಂಧಿಸಿ ಅಮಾನತುಗೊಂಡ ಎಲ್ಲಾ ಸಿಬ್ಬಂದಿಯನ್ನು ಅವರ ಹುದ್ದೆಗಳಲ್ಲಿ ಮರುಸ್ಥಾಪಿಸಲಾಗಿದೆ ಎಂದು ಖಾನ್ ನ್ಯಾಯಾಲಯದಲ್ಲಿ ದೂರಿದ್ದರು.
ಪ್ರಕರಣದ ಆಲಿಕೆ ನಡೆಸಿದ ನ್ಯಾಯಾಲಯವು ನಾಲ್ಕು ವರ್ಷಗಳಿಗೂ ಅಧಿಕ ಸಮಯದವರೆಗೆ ಕಫೀಲ್ ಅವರ ಅಮಾನತು ಆದೇಶವನ್ನು ಮುಂದುವರಿಸಿರುವುಕ್ಕೆ ಸೂಕ್ತ ಕಾರಣ ನೀಡುವಂತೆ ಉತ್ತರಪ್ರದೇಶ ಸರಕಾರಕ್ಕೆ ಸೂಚಿಸಿತು ಮತ್ತು ಮುಂದಿನ ವಿಚಾರಣೆಯನ್ನು ಆಗಸ್ಟ್ 5ಕ್ಕೆ ಮುಂದೂಡಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X