Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಕ್ಟೋಬರ್‌ನಿಂದ ರಾಷ್ಟ್ರೀಯ ಶಿಕ್ಷಣ ನೀತಿ...

ಅಕ್ಟೋಬರ್‌ನಿಂದ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ: ಪ್ರೊ. ಯಡಪಡಿತ್ತಾಯ

ವಾರ್ತಾಭಾರತಿವಾರ್ತಾಭಾರತಿ4 Aug 2021 8:01 PM IST
share
ಅಕ್ಟೋಬರ್‌ನಿಂದ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ: ಪ್ರೊ. ಯಡಪಡಿತ್ತಾಯ

ಮಂಗಳೂರು, ಆ.4: ನಾಲ್ಕು ವರ್ಷದ ಪದವಿ ಶಿಕ್ಷಣ ನೀಡುವ ರಾಷ್ಟ್ರೀಯ ಶಿಕ್ಷಣ ನೀತಿಯು ಅಕ್ಟೋಬರ್‌ನಿಂದ ಮಂಗಳೂರು ವಿವಿ ವ್ಯಾಪ್ತಿಯಲ್ಲಿ ಜಾರಿಗೆ ಬರಲಿದ್ದು, ಇದು ವಿದ್ಯಾರ್ಥಿಸ್ನೇಹಿ ಹಾಗೂ ಉದ್ಯೋಗ ಪೂರಕ ಶಿಕ್ಷಣ ಕ್ರಮವಾಗಿರಲಿದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊಪಿ.ಎಸ್.ಯಡಪಡಿತ್ತಾಯ ಹೇಳಿದ್ದಾರೆ.

ಕೊಣಾಜೆಯ ಮಂಗಳೂರು ವಿಶ್ವವಿದ್ಯಾನಿಲಯದ ಆಡಳಿತ ಸೌಧದ ರಾಣಿ ಅಬ್ಬಕ್ಕ ಸಭಾಂಗಣದಲ್ಲಿ ಇಂದು ನಡೆದ ಶೈಕ್ಷಣಿಕ ಮಂಡಳಿಯ 2021-22ನೆ ಸಾಲಿನ ಪ್ರಥಮ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸದ್ಯಕ್ಕೆ ಇದು ಕಡ್ಡಾಯವಾಗಿರುವುದಿಲ್ಲ. ಆದರೆ, ವಿವಿ ಕಾಲೇಜು ಸೇರಿದಂತೆ ವಿವಿಧ ಕಾಲೇಜುಗಳಲ್ಲಿ ಇದು ಈ ವರ್ಷದಿಂದಲೇ ಅನುಷ್ಠಾನವಾಗಲಿದೆ. ಈ ಹೊಸ ಶಿಕ್ಷಣ ನೀತಿಯಡಿ ಒಂದು ವರ್ಷದ ಪದವಿ ಸಂಪೂರ್ಣವಾದಂತೆ ಸರ್ಟಿಫಿಕೇಟ್ ಕೂಡಾ ನೀಡಲಾಗುತ್ತದೆ. ಇದು ಉದ್ಯೋಗದ ಅವಕಾಶಗಳಿಗೆ ಪೂರಕವಾಗಿರಲಿದೆ. ಬಳಿಕ ನೇರವಾಗಿ ಪಿಎಚ್‌ಡಿ ಮಾಡುವ ಸಾಧ್ಯತೆಯ ಬಗ್ಗೆಯೂ ಸದ್ಯ ಚರ್ಚೆಗಳು ನಡೆಯುತ್ತಿವೆ. ಪಿಎಚ್‌ಡಿ ಕುರಿತಂತೆ ಈ ತಿಂಗಳ ಅಂತ್ಯಕ್ಕೆ ಮಾರ್ಗಸೂಚಿ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ಅವರು ಹೇಳಿದರು.

ಕಾಲೇಜುಗಳಲ್ಲಿ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ

ಕೇಂದ್ರ ಸರಕಾರವು ಈ ವರ್ಷದಿಂದ 2023ರವರೆಗೆ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವವನ್ನು ಆಚರಿಸಲು ನಿರ್ಧರಿಸಿದೆ. ಅದರಂತೆ ವಿಶ್ವವಿದ್ಯಾನಿಲಯಕ್ಕೆ ಸಂಯೋಜನೆಗೊಳಪಟ್ಟ ಎಲ್ಲಾ ಕಾಲೇಜುಗಳಲ್ಲಿ ನಡೆಸಲಾಗುವ ಕಾಲರ್ಯಕ್ರಮದಲ್ಲಿ ‘ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ’ಎಂಬ ಬ್ಯಾನರ್ ಅಳವಡಿಸಿಕೊಂಡು ಕಾರ್ಯಕ್ರಮ ನಡೆಸಲು ಸೂಚಿಸಲಾಗುತ್ತಿದೆ. ಈ ಕುರಿತಂತೆ ಪ್ರತಿ ಕಾಲೇಜುಗಳು ವರದಿಯನ್ನು ವಿವಿಗೆ ಕಳುಹಿಸಬೇಕು ಎಂದು ಪ್ರೊ. ಯಡಪಡಿತ್ತಾಯ ಹೇಳಿದರು.

ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕೀಕರಣ ಕಾರ್ಯ ಉತ್ತಮವಾಗಿ ನಡೆಯುತ್ತಿದ್ದು, ಈಗಾಗಲೇ ಶೇ. 76ರಷ್ಟು ಪ್ರಥಮ ಡೋಸ್ ಲಸಿಕೀಕರಣ ನಡೆಸಿದೆ. ಶೇ. 100ರಷ್ಟು ಮಾಡುವಲ್ಲಿ ಎಲ್ಲಾ ರೀತಿಯಲ್ಲಿ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಅವರು ಹೇಳಿದರು.

ಕೋವಿಡ್ ಹಿನ್ನೆಲೆ: ಆನ್‌ಲೈನ್ ಪರೀಕ್ಷೆಗೂ ವಿವಿಯಿಂದ ಸಿದ್ಧತೆ

ಆಗಸ್ಟ್ 2ರಿಂದ ಮತ್ತೆ ಆರಂಭಿಸಲಾಗಿದ್ದ ಪದವಿ ಹಾಗೂ ಸ್ನಾತಕೋತ್ತರ ಪದವಿ ಸೆಮಿಸ್ಟರ್ ಪರೀಕ್ಷೆಯನ್ನು ಕೋವಿಡ್ ಸೋಂಕಿತರ ಸಂಖ್ಯೆ ಏರಿಕೆಯ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ನಿನ್ನೆ ದಿಢೀರನೆ ರದ್ದುಪಡಿಸಿದ್ದಾರೆ. ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯದ ದೃಷ್ಟಿಯಿಂದ ಪರೀಕ್ಷೆ ನಡೆಸುವ ಕುರಿತಂತೆ ಜಿಲ್ಲಾಧಿಕಾರಿಯನ್ನು ಮನವೊಲಿಸಲಾಗುವುದು. ಈಗಾಗಲೇ ವಿಟಿಯು ಪರೀಕ್ಷೆ ನಡೆಯುತ್ತಿದೆ. ಹಾಗಿರುವಾಗ ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಎಲ್ಲಾ ಕೋವಿಡ್ ನಿಯಮಗಳನ್ನು ಪಾಲಿಸಿಕೊಂಡು, ಕೇರಳದ ವಿದ್ಯಾರ್ಥಿಗಳಿಗೆ ಪ್ರತ್ಯೇಕ ವ್ಯವಸ್ಥೆಯೊಂದಿಗೆ ಭೌತಿಕ ಪರೀಕ್ಷೆಗೆ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮುಂದೆ ಪರಿಸ್ಥಿತಿ ಹೀಗೆ ಮುಂದುವರಿದು ಭೌತಿಕ ಪರೀಕ್ಷೆ ಅಸಾಧ್ಯವೆಂದಾದಲ್ಲಿ ವಿವಿ ಆನ್‌ಲೈನ್ ಪರೀಕ್ಷೆ ನಡೆಸಲೂ ಸಿದ್ಧವಿದೆ ಎಂದು ಕುಲಪತಿ ತಿಳಿಸಿದರು.

ಸಭೆಯಲ್ಲಿ ಯುಜಿಸಿ ನ್ಯಾಕ್ ಮಾರ್ಗಸೂಚಿ ಪ್ರಕಾರ ವಿಶ್ವವಿದ್ಯಾನಿಲಯದ ಐಕ್ಯುಎಸಿ ಸಮಿತಿಯನ್ನು ಪುನರ್ ರಚಿಸಲು ಅನುಮೋದನೆ ನೀಡಲಾಯಿತು. ಕುಲಸಚಿವರಾದ ಪ್ರೊ.ಪಿ.ಎಲ್. ಧರ್ಮ, ಪ್ರೊ. ಕಿಶೋರ್ ಕುಮಾರ್, ಪ್ರೊ. ನಾರಾಯಣ ಮೊದಲಾದವರು ಉಪಸ್ಥಿತರಿದ್ದರು.

ಪದವಿಯಲ್ಲಿ ಕೊಡವ ಭಾಷಾ ಕಲಿಕೆ ಆರಂಭ

2021-22ನೆ ಸಾಲಿನಲ್ಲಿ ಪ್ರಥಮ ಪದವಿ ತರಗತಿಗಳಲ್ಲಿ ಕೊಡವ ಭಾಷೆ ವಿಷಯವನ್ನು ಐಚ್ಛಿಕ ಭಾಷೆಯಾಗಿ ಪ್ರಥಮ ಪದವಿ ತರಗತಿಗಳಲ್ಲಿ ಕಲಿಸಲು ಇಂದಿನ ಶೈಕ್ಷಣಿಕ ಸಭೆಯಲ್ಲಿ ಅನುಮೋದಿಸಲಾಯಿತು.

ಕೊಡವ ಭಾಷಾ ಪಠ್ಯಪುಸ್ತಕವನ್ನು ಮಂಗಳೂರು ವಿವಿ ಪ್ರಸಾರಾಂಗದಲ್ಲಿ ಮುದ್ರಿಸಲು ಕ್ರಮ ವಹಿಸಲಾಗಿದ್ದು, ಪಛಠ್ಯಕ್ರಮದ ಬಗ್ಗೆಯೂ ಕಲಾ ನಿಕಾಯದ ಡೀನ್‌ರ ಅಭಿಪ್ರಾಯವನ್ನು ಪಡೆದು ಅಂತಿಮಗೊಳಿಸಲಾಗಿದೆ. ಕಲಾ ನಿಕಾಯದಿಂದ ಅನುಮೋದನೆಯನ್ನು ಪಡೆದು ಕೊಡವ ಭಾಷಾ ಕಲಿಕೆ ಆರಂಭಕ್ಕೆ ಕ್ರಮ ವಹಿಸಲಾಗುವುದು ಎಂದು ಕುಲಪತಿ ಪ್ರೊ. ಪಿ.ಎಸ್. ಯಡಪಡಿತ್ತಾಯ ಸಭೆಯಲ್ಲಿ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X