ಕ್ರೀಡಾಪಟುಗಳಿಗೆ ನಗದು ಬಹುಮಾನಕ್ಕೆ ಅರ್ಜಿ ಆಹ್ವಾನ
ಉಡುಪಿ, ಆ.5: 2020ನೇ ಸಾಲಿನಲ್ಲಿ ರಾಷ್ಟ್ರಮಟ್ಟದ ಕ್ರೀಡಾಕೂಟಗಳಲ್ಲಿ ಕರ್ನಾಟಕವನ್ನು ಅಧಿಕೃತವಾಗಿ ಪ್ರತಿನಿಧಿಸಿ ಪದಕ ಪಡೆದ ಹಾಗೂ ಅಂತಾ ರಾಷ್ಟ್ರೀಯ ಮಟ್ಟದ ವಿವಿಧ ಕ್ರೀಡಾಪಟುಗಳಿಗೆ ನಗದು ಬಹುಮಾನ ನೀಡಲಾಗುತ್ತಿದೆ. ಅರ್ಹ ಕ್ರೀಡಾಪಟುಗಳು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣ ಅಜ್ಜರಕಾಡು ಉಡುಪಿ ಇವರಿಂದ ಅರ್ಜಿ ನಮೂನೆ ಪಡೆದು ಭರ್ತಿ ಮಾಡಿ ದೃಢೀಕೃತ ದಾಖಲೆಗಳೊಂದಿಗೆ ಇದೇ ಆ.25ರೊಳಗೆ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಳಿಗೆ ದೂರವಾಣಿ ಸಂಖ್ಯೆ: 0820-2521324, 9480886467ನ್ನು ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story