Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಸುದೀರ್ಘ ಕೋವಿಡ್ ಸಮಸ್ಯೆ ತೀವ್ರ...

ಸುದೀರ್ಘ ಕೋವಿಡ್ ಸಮಸ್ಯೆ ತೀವ್ರ ಆತಂಕಕಾರಿ: ವಿಶ್ವ ಆರೋಗ್ಯ ಸಂಸ್ಥೆ

ವಾರ್ತಾಭಾರತಿವಾರ್ತಾಭಾರತಿ5 Aug 2021 9:23 PM IST
share
ಸುದೀರ್ಘ ಕೋವಿಡ್ ಸಮಸ್ಯೆ ತೀವ್ರ ಆತಂಕಕಾರಿ: ವಿಶ್ವ ಆರೋಗ್ಯ ಸಂಸ್ಥೆ

ವಿಶ್ವಸಂಸ್ಥೆ, ಆ.5: ದೀರ್ಘಾವಧಿಯ ಕೋವಿಡ್ ಸಮಸ್ಯೆ ತೀವ್ರ ಆತಂಕಕಾರಿಯಾಗಿದೆ ಎಂದಿರುವ ವಿಶ್ವ ಆರೋಗ್ಯ ಸಂಸ್ಥೆ, ಕೊರೋನ ರೋಗದ ನಂತರದ ಆರೋಗ್ಯ ಸಮಸ್ಯೆ ಎದುರಿಸುತ್ತಿರುವವರು ತಕ್ಷಣ ವೈದ್ಯಕೀಯ ನೆರವು ಪಡೆಯುವಂತೆ ಸಲಹೆ ನೀಡಿದೆ.

  ಕೊರೋನ ನಂತರದ ಆರೋಗ್ಯ ಸಮಸ್ಯೆ ನಾಲ್ಕು ಅಥವಾ ಹೆಚ್ಚು ವಾರ ಮುಂದುವರಿದರೆ ಅದು ದೀರ್ಘ ಕೊರೋನದ ಲಕ್ಷಣವಾಗಿದೆ ಎಂದು ಅಮೆರಿಕದ ರೋಗನಿಯಂತ್ರಣ ಮತ್ತು ಪ್ರತಿಬಂಧ ಕೇಂದ್ರ ಹೇಳಿದೆ.

 ದೀರ್ಘ ಕೊರೋನ ಸಮಸ್ಯೆಯ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಆತಂಕಿತವಾಗಿದೆ, ಯಾಕೆಂದರೆ ಇದು ವಾಸ್ತವಿಕ ಸಮಸ್ಯೆಯಾಗಿದೆ. ಇದರ ಪರಿಣಾಮ ಎಷ್ಟು ಸಮಯದವರೆಗೆ ಇರುತ್ತದೆ ಎಂಬುದು ತಿಳಿದಿಲ್ಲ. ಕೊರೋನೋತ್ತರದ ಲಕ್ಷಣದ ಬಗ್ಗೆ ಹೆಚ್ಚು ತಿಳಿದುಕೊಳ್ಳುವ ಉದ್ದೇಶದಿಂದ ಸೋಂಕು ಪ್ರಕರಣದ ಅಧ್ಯಯನ ನಡೆಸಲಾಗುತ್ತಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಕೋವಿಡ್-19 ತಾಂತ್ರಿಕ ವಿಭಾಗದ ಮುಖ್ಯಸ್ಥೆ ಮರಿಯಾ ವಾನ್ ಕೆಖೊರೇವ್ ಸುದ್ದಿಗೋಷ್ಟಿಯಲ್ಲಿ ಹೇಳಿದ್ದಾರೆ.

ದೀರ್ಘ ಕೊರೋನ ಸಮಸ್ಯೆಗೆ ಸಿಲುಕಿದ ರೋಗಿಗಳು ಚೇತರಿಸಿಕೊಳ್ಳಲು 35 ವಾರಕ್ಕೂ ಹೆಚ್ಚು ಸಮಯ ಬೇಕಾಗುತ್ತದೆ ಎಂದು ಲ್ಯಾನ್ಸೆಟ್‌ನ ಇಕ್ಲಿನಿಕಲ್ ಮೆಡಿಸಿನ್ ಪತ್ರಿಕೆಯಲ್ಲಿ ಪ್ರಕಟವಾದ ಅಧ್ಯಯನ ವರದಿ ತಿಳಿಸಿದೆ. ಸುಸ್ತು, ಬಳಲಿಕೆ, ಮೆದುಳು ನಿಷ್ಕ್ರಿಯವಾಗುವುದು, ಮಹಿಳೆಯರಲ್ಲಿ ಮುಟ್ಟಿನ(ಋತುಸ್ರಾವ)ದ ಅವಧಿಯಲ್ಲಿ ವ್ಯತ್ಯಾಸ, ಹೃದಯ ಬಡಿತ ಹೆಚ್ಚುವುದು, ಸ್ಮರಣಶಕ್ತಿ ಕಳೆದುಕೊಳ್ಳುವುದು, ದೃಷ್ಟಿ ಮಂದವಾಗುವುದು ಇತ್ಯಾದಿಗಳು ಕೊರೋನೋತ್ತರ ರೋಗದ ಲಕ್ಷಣಗಳಾಗಿವೆ . ಈ ಲಕ್ಷಣ ಕೊರೋನ ಸೋಂಕಿನ ಪ್ರಾರಂಭದ 1 ಅಥವಾ 3 (ಕೆಲವೊಮ್ಮೆ 6) ತಿಂಗಳ ಬಳಿಕ ಕಾಣಿಸಿೊಳ್ಳುತ್ತದೆ ಎಂದು ವರದಿ ಹೇಳಿದೆ.

 ಈ ಮಧ್ಯೆ, 4 ವಾರದ ಬಳಿಕ ಕೋವಿಡ್-19ರ ಲಕ್ಷಣ ಕಂಡುಬರುವ ಮಕ್ಕಳ ಪ್ರಮಾಣ ಕಡಿಮೆಯಾಗಿದೆ. ಕೋವಿಡ್ ರೋಗಲಕ್ಷಣ ಕಂಡುಬರುವ ಮಕ್ಕಳೂ 6 ದಿನದಲ್ಲಿ ಚೇತರಿಕೆ ಹೊಂದುತ್ತಾರೆ ಎಂದು ‘ಲ್ಯಾನ್ಸೆಟ್ ಚೈಲ್ಡ್ ಆ್ಯಂಡ್ ಅಡೋಲ್ಸೆಂಟ್ ಹೆಲ್ತ್ ’ನಲ್ಲಿ ಪ್ರಕಟವಾದ ವರದಿಯೊಂದರಲ್ಲಿ ಉಲ್ಲೇಖಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X