Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 370ನೇ ವಿಧಿ ರದ್ದುಗೊಂಡು ಎರಡು ವರ್ಷ :...

370ನೇ ವಿಧಿ ರದ್ದುಗೊಂಡು ಎರಡು ವರ್ಷ : ಪರಿಸ್ಥಿತಿ ಶಾಂತಿಯುತವಾಗಿದೆ ; ಅಧಿಕಾರಿಗಳ ಹೇಳಿಕೆ

ವಿಶೇಷ ಸ್ಥಾನಮಾನಕ್ಕೆ ಗುಪ್ಕರ್ ಮೈತ್ರಿಕೂಟದ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ5 Aug 2021 9:37 PM IST
share
370ನೇ ವಿಧಿ ರದ್ದುಗೊಂಡು ಎರಡು ವರ್ಷ : ಪರಿಸ್ಥಿತಿ ಶಾಂತಿಯುತವಾಗಿದೆ ; ಅಧಿಕಾರಿಗಳ ಹೇಳಿಕೆ

ಹೊಸದಿಲ್ಲಿ,ಆ.5: ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಹಿಂದೆಗೆದುಕೊಂಡ 370ನೇ ವಿಧಿಯ ರದ್ದತಿಯ ಎರಡು ವರ್ಷಗಳ ಬಳಿಕ ಕಣಿವೆಯಲ್ಲಿ ಸ್ಥಿತಿ ಶಾಂತಿಯುತವಾಗಿದೆ ಎಂಂದು ಅಧಿಕಾರಿಗಳು ಹೇಳಿದ್ದಾರೆ.

ಶ್ರೀನಗರದ ಹೆಚ್ಚಿನ ಭಾಗಗಳಲ್ಲಿಯ ಅಂಗಡಿಗಳು ಗುರುವಾರ ಮುಚ್ಚಲ್ಪಟ್ಟಿದ್ದವು. ತಮ್ಮ ಮಳಿಗೆಗಳನ್ನು ತೆರೆದಿಡುವಂತೆ ಪೊಲೀಸರು ತಮ್ಮನ್ನು ಬಲವಂತಗೊಳಿಸುತ್ತಿದ್ದಾರೆ ಎಂದು ಹಲವಾರು ಪ್ರದೇಶಗಳಲ್ಲಿಯ ಅಂಗಡಿಕಾರರು ಆರೋಪಿಸಿದ್ದರೆ,ಪೊಲೀಸರು ತಮ್ಮ ಅಂಗಡಿಗಳ ಬೀಗಗಳನ್ನು ಮುರಿದಿದ್ದಾರೆ ಎಂದು ಅವರ ಪೈಕಿ ಹಲವರು ತಿಳಿಸಿದರು.

ಹಲವಾರು ಜಿಲ್ಲೆಗಳಲ್ಲಿ ಸಾರ್ವಜನಿಕ ಸಾರಿಗೆ ವಾಹನಗಳು ರಸ್ತೆಗಿಳಿದಿರಲಿಲ್ಲ. ಆದರೆ ಅನಂತನಾಗ್‌ನಂತಹ ಕೆಲವು ಜಿಲ್ಲೆಗಳು ಹಾಗೂ ಬಡ್ಗಾಮ್,ಗಂಡೇರಬಾಲ್ ಮತ್ತು ಕುಪ್ವಾರಾದ ಕೆಲವು ಭಾಗಗಳಲ್ಲಿ ಅಂಗಡಿಗಳು ತೆರೆದಿದ್ದವು.

ಗುರುವಾರ ವರ್ಚುವಲ್ ಸಂವಾದದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 2020ರ ಆ.5 ಇತಿಹಾಸದಲ್ಲಿ ನೆನಪಿನಲ್ಲಿರುತ್ತದೆ. ಇದೇ ದಿನ 370ನೇ ವಿಧಿಯನ್ನು ರದ್ದುಗೊಳಿಸಲಾಗಿತ್ತು ಮತ್ತು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಮೊದಲ ಹೆಜ್ಜೆಯನ್ನು ಇರಿಸಲಾಗಿತ್ತು ಎಂದು ಹೇಳಿದರು. 370ನೇ ವಿಧಿಯ ರದ್ದತಿಯ ಬಳಿಕ ಪ್ರದೇಶದಲ್ಲಿ ಅಭೂತಪೂರ್ವ ಶಾಂತಿ ನೆಲೆಸಿದೆ ಮತ್ತು ಪ್ರಗತಿಯಾಗಿದೆ ಎಂದು ಮೋದಿಯವರ ಖಾಸಗಿ ವೆಬ್‌ಸೈಟ್‌ನ ಅಧಿಕೃತ ಟ್ವಿಟರ್ ಹ್ಯಾಂಡಲ್ ಕೂಡ ಹೇಳಿದೆ.

ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಹಿಂದೆಗೆದುಕೊಂಡು,ಅದನ್ನು ಎರಡು ಕೇಂದ್ರಾಡಳಿತ ಪ್ರದೇಶಗಳನ್ನಾಗಿ ವಿಭಜಿಸಿದ ಕ್ರಮವನ್ನು ‘ತೀವ್ರ ಅನ್ಯಾಯ’ಎಂದು ಬಣ್ಣಿಸಿರುವ ಪಿಡಿಪಿ ಮುಖ್ಯಸ್ಥೆ ಮತ್ತು ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬ ಮುಫ್ತಿ ಅವರು,ಎರಡು ವರ್ಷಗಳ ಹಿಂದೆ ಈ ದಿನದಂದು ಜಮ್ಮು-ಕಾಶ್ಮೀರಕ್ಕೆ ಉಂಟು ಮಾಡಿದ್ದ ನೋವು,ಹಿಂಸೆ ಮತ್ತು ವಿಪ್ಲವವನ್ನು ಬಣ್ಣಿಸಲು ಶಬ್ದಗಳು ಮತ್ತು ಚಿತ್ರಗಳು ಸಾಲುವುದಿಲ್ಲ. ಅನಿಯಂತ್ರಿತ ದಬ್ಬಾಳಿಕೆಯು ತೆರೆದುಕೊಂಡಾಗ ಮತ್ತು ತೀವ್ರ ಅನ್ಯಾಯಗಳು ನಡೆದಾಗಿ ಅಸ್ತಿತ್ವವನ್ನುಳಿಸಿಕೊಳ್ಳಲು ಪ್ರತಿರೋಧದ ಹೊರತು ಬೇರೆ ಆಯ್ಕೆಯೇ ಇಲ್ಲ ಎಂದು ಟ್ವೀಟಿಸಿದ್ದಾರೆ.

ಇದೇ ಭಾವನೆಗಳನ್ನು ಪ್ರತಿಧ್ವನಿಸಿದ ಜಮ್ಮು ಆ್ಯಂಡ್ ಕಾಶ್ಮೀರ ಪೀಪಲ್ಸ್ ಕಾನ್ಫರೆನ್ಸ್‌ನ ಖುರ್ಷಿದ್ ಆಲಂ ಅವರು,ಆ.5 ಜಮ್ಮು-ಕಾಶ್ಮೀರದ ಇತಿಹಾಸದಲ್ಲಿ ಋಣಾತ್ಮಕ ಹೆಗ್ಗುರುತಾಗಿ ಉಳಿಯಲಿದೆ. ಅದು ಜಮ್ಮು-ಕಾಶ್ಮೀರದ ಜನತೆಗೆ ರಾಜಕೀಯ ಮತ್ತು ಮಾನಸಿಕ ಹಿನ್ನಡೆಯಾಗಿತ್ತು ಎಂದು ಹೇಳಿದರು.

ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನದ ಮರುಸ್ಥಾಪನೆಗೆ ಆಗ್ರಹಿಸಿರುವ ಗುಪ್ಕರ್ ಮೈತ್ರಿಕೂಟವು ಗುರುವಾರ ಎನ್‌ಸಿ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಅವರ ನಿವಾಸದಲ್ಲಿ ಸಭೆ ಸೇರಿದ್ದು,ಮುಫ್ತಿ ಸೇರಿದಂತೆ ಕಾಶ್ಮೀರದ ಪ್ರತಿಪಕ್ಷಗಳ ನಾಯಕರು ಭಾಗವಹಿಸಿದ್ದರು.

ಜಮ್ಮು-ಕಾಶ್ಮೀರವು ಈಗಲೂ ದಿಲ್ಲಿ ಮತ್ತು ಭಾರತದ ದಿಲ್(ಹೃದಯ)ನಿಂದ ಮೊದಲಿದ್ದಷ್ಟೇ ದೂರದಲ್ಲಿ ಉಳಿದಿದೆ ಎಂದು ಬುಧವಾರ ಹೇಳಿಕೆಯಲ್ಲಿ ತಿಳಿಸಿದ್ದ ಗುಪ್ಕರ್ ಮೈತ್ರಿಕೂಟ,‘ನ್ಯಾಯ ಕಾಶ್ಮೀರ ’ಘೋಷಣೆಯು ಒಂದು ತಮಾಷೆಯಾಗಿದೆ ಎಂದು ಬಣ್ಣಿಸಿತ್ತು.

ಈ ಮಧ್ಯೆ ಬಿಜೆಪಿಯ ಜಮ್ಮು-ಕಾಶ್ಮೀರ ಘಟಕವು ಕೇಂದ್ರವು ಕಣಿವೆಯಲ್ಲಿ ಕಾಶ್ಮೀರಿ ಪಂಡಿತರ ಗೌರವಾನ್ವಿತ ಪುನರ್ವಸತಿಯನ್ನು ಖಚಿತಪಡಿಸಲು ಶ್ರಮಿಸುತ್ತಿದೆ ಎಂದು ಬುಧವಾರ ತಿಳಿಸಿತ್ತು.

ಗುರುವಾರ ಜಮ್ಮು-ಕಾಶ್ಮೀರದ ಅಲ್ಲಲ್ಲಿ ಹಿಂಸಾಚಾರದ ಘಟನೆಗಳು ನಡೆದಿವೆ. ಬಾರಾಮುಲ್ಲಾ ಜಿಲ್ಲೆಯ ಸೋಪೋರ್‌ನಲ್ಲಿ ಪೊಲೀಸ್ ತಂಡದ ಮೇಲೆ ಉಗ್ರರು ದಾಳಿಯನ್ನು ನಡೆಸಿದ್ದರೆ,ಶ್ರೀನಗರದ ನೊವಟ್ಟಾ ಪ್ರದೇಶದ ಜಾಮಾ ಮಸೀದಿಯ ಬಳಿ ಸ್ಫೋಟವೊಂದು ಸಂಭವಿಸಿದೆ. ಇವೆರಡೂ ಘಟನೆಗಳಲ್ಲಿ ಯಾವುದೇ ಸಾವುನೋವು ಸಂಭವಿಸಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X