Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಆಸ್ತಿ ಗಳಿಕೆ ವಿಚಾರವಾಗಿ ಈ.ಡಿ. ತನಿಖೆ...

ಆಸ್ತಿ ಗಳಿಕೆ ವಿಚಾರವಾಗಿ ಈ.ಡಿ. ತನಿಖೆ ಆಶ್ಚರ್ಯ ಮೂಡಿಸಿದೆ: ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ6 Aug 2021 6:18 PM IST
share
ಆಸ್ತಿ ಗಳಿಕೆ ವಿಚಾರವಾಗಿ ಈ.ಡಿ. ತನಿಖೆ ಆಶ್ಚರ್ಯ ಮೂಡಿಸಿದೆ: ಡಿ.ಕೆ.ಶಿವಕುಮಾರ್

ಬೆಂಗಳೂರು, ಆ.6: ‘ಈ.ಡಿ. ಅಧಿಕಾರಿಗಳು ಐಎಂಎ ವಿಚಾರಕ್ಕೆ ದಾಳಿ ಮಾಡಿಲ್ಲ, ಆಸ್ತಿ ವಿಚಾರವಾಗಿ ದಾಳಿ ಮಾಡಿದ್ದಾರೆ ಎಂದು ನಮ್ಮ ಶಾಸಕ ಝಮೀರ್ ಅಹ್ಮದ್ ಹೇಳಿದ್ದಾರೆ. ಆಸ್ತಿ ಗಳಿಕೆ ವಿಚಾರವಾಗಿ ಆದಾಯ ಇಲಾಖೆ (ಐಟಿ) ಬದಲು ಜಾರಿ ನಿರ್ದೇಶನಾಲಯ (ಈ.ಡಿ.) ದಾಳಿ ಮಾಡಿರುವುದು ಅಚ್ಚರಿ ಮೂಡಿಸಿದೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಶುಕ್ರವಾರ ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ‘ಈ ದಾಳಿಗೂ ಐಎಂಎ ವಿಚಾರಕ್ಕೂ ಸಂಬಂಧವಿಲ್ಲ. ನನ್ನ ಆಸ್ತಿ ವಿಚಾರವಾಗಿ ಈ.ಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ ಎಂದು ನಮ್ಮ ಶಾಸಕರು ಹೇಳಿದ್ದಾರೆ. ಝಮೀರ್ ಅಹ್ಮದ್ ಖಾನ್ ಅವರು ಹಿಂದೆ ವಿಧಾನಸೌಧದಲ್ಲಿ ಮಾತನಾಡಿ ಐಎಂಎ ಪ್ರಕರಣದಲ್ಲಿ ನಷ್ಟ ಅನುಭವಿಸಿರುವ 40 ಸಾವಿರ ಜನರಿಗೂ ನ್ಯಾಯ ಒದಗಿಸಿಕೊಡಬೇಕು ಎಂದು ಹೇಳಿದ್ದರು. ಇದು ನಮ್ಮ ಪಕ್ಷದ ನಿಲುವೂ ಆಗಿದೆ ಎಂದರು.

ಆದಾಯ, ಆಸ್ತಿ ವಿಚಾರವಾಗಿ ಈ.ಡಿ. ಅಧಿಕಾರಿಗಳು ದಾಳಿ ಮಾಡಿರುವುದು ನನಗೆ ಆಶ್ಚರ್ಯ ಮೂಡಿಸಿದೆ. ಆದಾಯ ತೆರಿಗೆ ಇಲಾಖೆಗೆ ಈ ವಿಚಾರದಲ್ಲಿ ದಾಳಿ ಮಾಡುವ ಅಧಿಕಾರ ಇದೆ. ಈ.ಡಿ.ಗೆ ಹಣದ ಅವ್ಯವಹಾರದ ಬಗ್ಗೆ ತನಿಖೆ ಮಾಡುವ ಅಧಿಕಾರ ಇದೆ ಎಂದು ಅವರು ಹೇಳಿದರು.

ನನಗಿರುವ ಜ್ಞಾನದ ಪ್ರಕಾರ ಆದಾಯ ತೆರಿಗೆ ಇಲಾಖೆ ದಾಳಿ ಮಾಡಿ ಅವರಿಗೆ ಹಣದ ಅವ್ಯವಹಾರ ನಡೆದಿದೆ ಎಂಬ ಮಾಹಿತಿ ಸಿಕ್ಕರೆ ನಂತರ ಜಾರಿ ನಿರ್ದೇಶನಾಲಯ ದಾಳಿ ಮಾಡಿ ವಿಚಾರಣೆ ನಡೆಸಬಹುದು. ಆದರೆ ಈ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಏಕಾಏಕಿ ದಾಳಿ ಮಾಡಿರುವುದು ಗೊಂದಲ ಮೂಡಿಸಿದೆ ಎಂದು ಶಿವಕುಮಾರ್ ಹೇಳಿದರು.

ನನ್ನ ಮನೆ ಮೇಲೂ ಸಿಬಿಐ ದಾಳಿ ಮಾಡಿ ನಂತರ ಆದಾಯ ತೆರಿಗೆ ಇಲಾಖೆ ಹಾಗೂ ಜಾರಿ ನಿರ್ದೇಶನಾಲಯ ಸರಕಾರದಿಂದ ಅನುಮತಿ ಪಡೆದು, ಪ್ರಕರಣ ದಾಖಲಿಸಿ ವಿಚಾರಣೆ ನಡೆಸಿತು. ಇದೆಲ್ಲದಕ್ಕೂ ಒಂದು ಪ್ರಕ್ರಿಯೆ ಇದೆ. ಝಮೀರ್ ಅವರು ಬಿಡುವಾದಾಗ, ನಾನು ಅವರ ಜತೆ ಮಾತಾಡಿ ಮಾಹಿತಿ ಪಡೆಯುತ್ತೇನೆ ಎಂದು ಅವರು ತಿಳಿಸಿದರು.

ಸೋಮಶೇಖರ್ ಮಾತು ಕೇಳಿ ಸಂತೋಷವಾಯ್ತು: ನಮ್ಮ ಸೋಮಶೇಖರ್ ಅವರು, ನನ್ನ ನಿಯಂತ್ರಣದಲ್ಲಿ ಈ.ಡಿ. ಇದೆ ಎಂದು ಹೇಳಿರುವುದನ್ನು ಕೇಳಿ ಸಂತೋಷವಾಗುತ್ತಿದೆ. ಅವರಿಗೆ ಹೆಚ್ಚುವರಿ ಜವಾಬ್ದಾರಿ ಸಿಗುತ್ತಿದೆ. ಅವರಿಗೆ ಒಳ್ಳೆಯದಾಗಲಿ ಎಂದು ಪ್ರಶ್ನೆಯೊಂದಕ್ಕೆ ಶಿವಕುಮಾರ್ ಪ್ರತಿಕ್ರಿಯಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X