Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ನಾವೆಲ್ಲರೂ ದೇಶಕ್ಕಾಗಿ ಆಡುತ್ತೇವೆ, ಜಾತಿ...

ನಾವೆಲ್ಲರೂ ದೇಶಕ್ಕಾಗಿ ಆಡುತ್ತೇವೆ, ಜಾತಿ ನಿಂದನೆ ಮಾಡಬಾರದು: ವಂದನಾ ಕಟಾರಿಯಾ

ವಾರ್ತಾಭಾರತಿವಾರ್ತಾಭಾರತಿ6 Aug 2021 1:14 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ನಾವೆಲ್ಲರೂ ದೇಶಕ್ಕಾಗಿ ಆಡುತ್ತೇವೆ, ಜಾತಿ ನಿಂದನೆ ಮಾಡಬಾರದು: ವಂದನಾ ಕಟಾರಿಯಾ

ಟೋಕಿಯೊ: ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಮಹಿಳಾ ಹಾಕಿ ತಂಡದ ಕನಸಿನ ಓಟದ ಪ್ರಮುಖ ಅಂಶಗಳಲ್ಲಿ ಭಾರತ ಫಾರ್ವರ್ಡ್  ಆಟಗಾರ್ತಿ ವಂದನಾ ಕಟಾರಿಯಾ ಅವರ ವೀರೋಚಿತ ಪ್ರದರ್ಶನವೂ ಪ್ರಮುಖವಾಗಿತ್ತು. ಜಾತಿ ನಿಂದನೆ ಕೊನೆಗೊಳಿಸಬೇಕೆಂದು ಹಾರೈಸಿದ ವಂದನಾ , ಜನರು ತಂಡವನ್ನು ಬೆಂಬಲಿಸುತ್ತಾರೆಂಬ ಆಶಾವಾದ ವ್ಯಕ್ತಪಡಿಸಿದರು.

ಟೋಕಿಯೊ ಒಲಿಂಪಿಕ್ಸ್‌ನ ಸೆಮಿಫೈನಲ್‌ನಲ್ಲಿ ಭಾರತವು ಅರ್ಜೆಂಟೀನ ವಿರುದ್ಧ ಸೋತ ನಂತರ, ಹರಿದ್ವಾರದಲ್ಲಿರುವ ವಂದನಾರ ಮನೆ ಸಮೀಪ  ಯುವಕರ ಗುಂಪೊಂದು ಪಟಾಕಿ ಸಿಡಿಸಿತ್ತು, ಸಂಭ್ರಮದಿಂದ ನೃತ್ಯ ಮಾಡಿತು ಹಾಗೂ ಜಾತಿ ನಿಂದನೆ ಮಾಡಿತ್ತೆಂದು ವಂದನಾರ ಕುಟುಂಬದವರು ದೂರಿದ್ದಾರೆ. ಅವರ  ದೂರಿನ ಮೇರೆಗೆ ಪೊಲೀಸರು ಗುರುವಾರ ಮುಖ್ಯ ಆರೋಪಿ ವಿಜಯಪಾಲ್ ನನ್ನು ಬಂಧಿಸಿದ್ದಾರೆ.

ಹರಿದ್ವಾರ ಪೊಲೀಸರ ಹೇಳಿಕೆಯ ಪ್ರಕಾರ, ಐಪಿಸಿ ಸೆಕ್ಷನ್ 504 ರ ಅಡಿಯಲ್ಲಿ ಎಫ್‌ಐಆರ್ (ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ) ಮತ್ತು ಎಸ್‌ಸಿ/ಎಸ್‌ಟಿ ಕಾಯ್ದೆಯನ್ನು ಮೂವರು ಆರೋಪಿಗಳಾದ ವಿಜಯ್ ಪಾಲ್, ಅಂಕುರ್ ಪಾಲ್  ಹಾಗೂ  ಸುಮಿತ್ ಚೌಹಾಣ್ ,  ಇತರ ಅಪರಿಚಿತ ವ್ಯಕ್ತಿಗಳ ವಿರುದ್ಧ ದಾಖಲಿಸಲಾಗಿದೆ

ಭಾರತ ಕಂಚಿನ ಪದಕದ ಸುತ್ತಿನಲ್ಲಿ ಬ್ರಿಟನ್ ವಿರುದ್ಧ 3-4ರಿಂದ ಸೋತ  ನಂತರ ಮಾತನಾಡಿದ ವಂದನಾ, ನನ್ನ ಮನೆಯಲ್ಲಿ  ಘಟನೆ ನಡೆದಿರುವ ಬಗ್ಗೆ ಕೇಳಿದ್ದೇನೆ.  ಆದರೆ ತನ್ನ ಕುಟುಂಬದೊಂದಿಗೆ ಇನ್ನೂ ಮಾತನಾಡಲಿಲ್ಲ ಎಂದರು.

 ತಮ್ಮ ಕುಟುಂಬಕ್ಕೆ ಏನಾದರೂ ಸಂದೇಶವಿದೆಯೇ ಎಂದು ಕೇಳಿದ್ದಕ್ಕೆ ಉತ್ತರಿಸಿದ  26 ವರ್ಷ ವಯಸ್ಸಿನ ವಂದನಾ: “ನಾವೆಲ್ಲರೂ ದೇಶಕ್ಕಾಗಿ ಆಡುತ್ತಿದ್ದೇವೆ, ಜಾತಿ ನಿಂದನೆಯಂತಹ ಘಟನೆ ಏನು ನಡೆಯುತ್ತಿದೆಯೋ ಅದು ನಡೆಯಲೇಬಾರದು. ನಾನು ಅದರ ಬಗ್ಗೆ ಸ್ವಲ್ಪ ಕೇಳಿದ್ದರೂ ಹಾಗೆ ಆಗಬಾರದು. ಹಾಕಿಯ ಬಗ್ಗೆ ಮಾತ್ರ ಯೋಚಿಸಿ, ನಾವು ದೇಶಕ್ಕಾಗಿ ಆಡುತ್ತಿದ್ದೇವೆ, ನನ್ನ ಪ್ರಕಾರ ಪ್ರತಿಯೊಂದು ಅಂಶದಲ್ಲೂ ನಾವು ಒಂದಾಗಬೇಕು ಎಂದರು.

ಆಟಗಾರ್ತಿಯ ಸಹೋದರ ಚಂದ್ರ ಶೇಖರ್ ಈ ಮೊದಲು The Indian express ನೊಂದಿಗೆ ಮಾತನಾಡುತ್ತಾ: "ಮೇಲ್ಚಾತಿಯ ಯುವಕರು ನನ್ನ ಜಾತಿಯ ಜನರು ರಾಷ್ಟ್ರೀಯ ತಂಡದಲ್ಲಿ ಹೇಗೆ ಆಡಬಹುದು ಎಂದು ಕೇಳಿದರು? ನಮ್ಮ ಕುಟುಂಬವು ಭಯದ ಸ್ಥಿತಿಯಲ್ಲಿದೆ. ಏಕೆಂದರೆ ಯುವಕರು ನಮ್ಮನ್ನು ಕೊಲ್ಲುವ ಬೆದರಿಕೆಯನ್ನೂ ಹಾಕಿದ್ದಾರೆ. ನಾವು ಇಡೀ ಘಟನೆಯನ್ನು ವಿವರಿಸುವ ದೂರು ಸಲ್ಲಿಸಿದ್ದೇವೆ ಎಂದರು.

ವಂದನಾ ಈ ಘಟನೆಗೆ ಸಂಬಂಧಿಸಿ ನಿರ್ದಿಷ್ಟವಾಗಿ ಯಾವುದೇ ಹೇಳಿಕೆ ನೀಡಲಿಲ್ಲ, ಆಕೆ ತನ್ನ ಕುಟುಂಬದವರೊಂದಿಗೆ ಮಾತನಾಡಿದ ನಂತರವೇ ಮಾತನಾಡುತ್ತೇನೆ ಎಂದು ಹೇಳಿದರು.

"ನಾನು ಟೋಕಿಯೊಗೆ ಬಂದಾಗಿನಿಂದ ನನ್ನ ಫೋನ್ ಸ್ವಿಚ್ ಆಫ್ ಮಾಡಿದ್ದೇನೆ. ಹಾಗಾಗಿ ನಾನು ಯಾರೊಂದಿಗೂ ಮಾತನಾಡಲಿಲ್ಲ. ನಾನು ಕುಟುಂಬದವರೊಂದಿಗೆ ಮಾತನಾಡಿದಾಗ, ನಾನು ಈ ಘಟನೆಯ ಬಗ್ಗೆ ಪ್ರತಿಕ್ರಿಯಿಸುತ್ತೇನೆ. ನಾವೆಲ್ಲರೂ ದೇಶಕ್ಕಾಗಿ ಆಡುತ್ತಿದ್ದೇವೆ ಎಂದು ವಂದನಾ ಹೇಳಿದರು.

ವಂದನಾ ಎಲ್ಲಾ ಸವಾಲುಗಳ ನಡುವೆಯೂ ಟೋಕಿಯೊದಲ್ಲಿ ಭಾರತದ ಸ್ಟಾರ್ ಆಟಗಾರ್ತಿಯಾಗಿ ಹೊರಹೊಮ್ಮಿದ್ದಾರೆ., ದಕ್ಷಿಣ ಆಫ್ರಿಕಾ ವಿರುದ್ಧದ ಕೊನೆಯ ಗುಂಪಿನ ಪಂದ್ಯದಲ್ಲಿ ವಂದನಾ ಹ್ಯಾಟ್ರಿಕ್ ಗೋಲುಗಳಿಸಿದ ಕಾರಣ ಭಾರತವು  ಒಲಿಂಪಿಕ್ಸ್  ಇತಿಹಾಸದಲ್ಲಿ ಮೊದಲ ಬಾರಿಗೆ ನಾಕೌಟ್ ಸುತ್ತಿಗೆ ಅರ್ಹತೆ ಪಡೆದಿತ್ತು. ಭಾರತವು  ಸೆಮಿಫೈನಲ್‌ನಲ್ಲಿ ಅರ್ಜೆಂಟೀನ ಮತ್ತು ಕಂಚಿನ ಪದಕದ ಪಂದ್ಯದಲ್ಲಿ ಬ್ರಿಟನ್‌ ಎದುರು ಸೋಲುವ ಮೊದಲು ತನ್ನ ಕ್ವಾರ್ಟರ್ ಫೈನಲ್‌ನಲ್ಲಿ ಮಾಜಿ ಚಾಂಪಿಯನ್ ಆಸ್ಟ್ರೇಲಿಯವನ್ನು ಸೋಲಿಸಿ ದಿಗ್ಭ್ರಮೆಗೊಳಿಸಿತ್ತು. ಭಾರತವು ಅಂತಿಮವಾಗಿ ನಾಲ್ಕನೇ ಸ್ಥಾನ ಪಡೆದಿದ್ದು  ಇದು 41 ವರ್ಷಗಳಲ್ಲಿ ಭಾರತದ  ಅತ್ಯುತ್ತಮ ಸಾಧನೆಯಾಗಿದೆ.

"ಮೊದಲನೆಯದಾಗಿ, ನಮ್ಮ ಇಡೀ ತಂಡವು ಇದಕ್ಕಾಗಿ ತುಂಬಾ ಶ್ರಮಿಸಿದೆ ಹಾಗೂ  ನಾನು ಅವರ ಬಗ್ಗೆ ನಿಜವಾಗಿಯೂ ಹೆಮ್ಮೆಪಡುತ್ತೇನೆ. ಪಂದ್ಯದಿಂದ ಪಂದ್ಯಕ್ಕೆ ಸುಧಾರಿಸಿದ್ದೇವೆ. ಇಲ್ಲಿಯವರೆಗೆ ತಲುಪಲು ತುಂಬಾ ಸಂತೋಷವಾಗಿದೆ, "ಎಂದು ವಂದನಾ ತಂಡದ ಪ್ರಯತ್ನದ ಬಗ್ಗೆ ಹಮ್ಮೆ ವ್ಯಕ್ತಪಡಿಸಿದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X