Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ಕರಾವಳಿಯ ಮೀನುಗಾರರಿಗೆ ಎಚ್ಚರಿಕೆ

​ಕರಾವಳಿಯ ಮೀನುಗಾರರಿಗೆ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ7 Aug 2021 8:24 PM IST
share

ಉಡುಪಿ, ಆ.7: ಕರ್ನಾಟಕ ಪಶ್ಚಿಮ ಕರಾವಳಿಯ ಅರಬಿಸಮುದ್ರದಲ್ಲಿ ನಾಳೆ ಹಾಗೂ ಆ.11ರಂದು ಗಂಟೆಗೆ 40ರಿಂದ 50ಕಿ.ಮೀ. ವೇಗದ ಬಿರುಗಾಳಿ ಬೀಸುವ ಸಾಧ್ಯತೆ ಇದ್ದು, ಇದರಿಂದ 2.5ಮೀ.ನಿಂದ 3.6ಮೀ. ಎತ್ತರದ ಅಲೆಗಳು ಸೆಕೆಂಡ್‌ಗೆ 32ರಿಂದ 49ಮೀ.ವೇಗದಲ್ಲಿ ದಡಕ್ಕೆ ಅಪ್ಪಳಿಸುವ ನಿರೀಕ್ಷೆ ಇದೆ. ಇದರಿಂದ ರಾಜ್ಯ ಕರಾವಳಿಯ ಮೂರು ಜಿಲ್ಲೆಗಳ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಅಲ್ಲದೇ ರವಿವಾರ ಹಾಗೂ ಸೋಮವಾರ ಕರಾವಳಿಯಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆ ಇದೆ ಎಂದೂ ಇಲಾಖೆ ತಿಳಿಸಿದೆ. ಇಂದು ಬೆಳಗ್ಗೆ 8:30ಕ್ಕೆ ಮುಕ್ತಾಯಗೊಂಡಂತೆ ಹಿಂದಿನ 24 ಗಂಟೆಗಳ ಅವಧಿಯಲ್ಲಿ ಉಡುಪಿ ಜಿಲ್ಲೆಯಲ್ಲಿ ಸರಾಸರಿ 41.1ಮಿ.ಮೀ. ಮಳೆಯಾಗಿದೆ. ಉಡುಪಿ-31.4 ಮಿ.ಮೀ., ಬ್ರಹ್ಮಾವರ-29.2, ಕಾಪು-29.1, ಕುಂದಾಪುರ-30.9, ಬೈಂದೂರು-25.8, ಕಾರ್ಕಳ-68.6 ಹಾಗೂ ಹೆಬ್ರಿ-59.2ಮಿ.ಮೀ. ಮಳೆ ಯಾದ ಬಗ್ಗೆ ವರದಿಗಳು ಬಂದಿವೆ.

10 ಮನೆಗಳಿಗೆ ಹಾನಿ: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಜಿಲ್ಲೆಯಾದ್ಯಂತ ಸುಮಾರು 10 ಮನೆಗಳಿಗೆ ಹಾನಿಯಾಗಿರುವ ಬಗ್ಗೆ ವರದಿಗಳಿವೆ. ಕಾರ್ಕಳ ತಾಲೂಕು ಮುಂಡ್ಕೂರಿನ ಗೋಪಾಲ ಸಫಲಿಗರ ಮನೆಗೆ 45ಸಾವಿರ ರೂ., ಕುಂದಾಪುರ ತಾಲೂಕು ಕರ್ಕುಂಜೆ ಲಲಿತ ಮನೆಗೆ 40ಸಾವಿರ ಹಾಗೂ ಹೆಬ್ರಿ ತಾಲೂಕು ಮುದ್ರಾಡಿ ಗ್ರಾಮದ ಗೋಪಾಲ ಪಾಣಾರ ಮನೆಗೆ 30ಸಾವಿರ ರೂ.ಹಾನಿಯಾಗಿದೆ.

ಇನ್ನು ಬ್ರಹ್ಮಾವರ ತಾಲೂಕು ಮಣೂರು ಗ್ರಾಮದ ಗೌರಿ ಎಂಬವರ ಮನೆಗೆ ಒಂದು ಲಕ್ಷ ರೂ ನಷ್ಟವಾಗಿದ್ದರೆ, ಹೆಗ್ಗುಂಜೆ ಗ್ರಾಮದ ರುದ್ರಮ್ಮ ಶೆಡ್ತಿ, ವಡ್ಡರ್ಸೆ ಗ್ರಾಮದ ಎಸ್.ಆರ್.ಫಾತಿಮಾ, ಚಾಂತಾರು ಗ್ರಾಮದ ಸತೀಶ್ ಕುಮಾರ್ ಹಾಗೂ ಹರೀಶ್ ಪೂಜಾರಿ ಮನೆಗೆ ಒಟ್ಟು 1.50ಲಕ್ಷ ರೂ.ಗಳಷ್ಟು ನಷ್ಟ ಸಂಭವಿಸಿರುವ ಅಂದಾಜು ಮಾಡಲಾಗಿದೆ.

ಕಾರ್ಕಳ ತಾಲೂಕು ಎಳ್ಳಾರೆ ಗ್ರಾಮದ ಸುಂದರ ನಾಯ್ಕ, ಕಸಬಾ ಗ್ರಾಮದ ಶೋಭಾ ಅವರ ಮನೆ ಮೇಲೆ ಮರಬಿದ್ದು 40,000ರೂ.ನಷ್ಟ ಸಂಭವಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X