ನೀರಜ್ ಚೋಪ್ರಾಗೆ ಚಿನ್ನ: ಉಡುಪಿಯಲ್ಲಿ ಸಂಭ್ರಮಾಚರಣೆ
![ನೀರಜ್ ಚೋಪ್ರಾಗೆ ಚಿನ್ನ: ಉಡುಪಿಯಲ್ಲಿ ಸಂಭ್ರಮಾಚರಣೆ ನೀರಜ್ ಚೋಪ್ರಾಗೆ ಚಿನ್ನ: ಉಡುಪಿಯಲ್ಲಿ ಸಂಭ್ರಮಾಚರಣೆ](https://www.varthabharati.in/sites/default/files/images/articles/2021/08/8/301866-1628442738.jpeg)
ಉಡುಪಿ: ಟೋಕಿಯೊ ಒಲಿಂಪಿಕ್ಸ್ ಜಾವೆಲಿನ್ ಎಸೆತದಲ್ಲಿ ಸುಬೇದಾರ್ ನೀರಜ್ ಚೋಪ್ರಾ ಚಿನ್ನದ ಪದಕ ಗೆದ್ದು, ಒಲಿಂಪಿಕ್ಸ್ ಅತ್ಲೆಟಿಕ್ಸ್ ನಲ್ಲಿ ಭಾರತಕ್ಕೆ ಮೊದಲ ಪದಕ ನೀಡಿದ ಸಂತೋಷದಲ್ಲಿ ಸ್ವಚ್ಛ ಭಾರತ್ ಫ್ರೆಂಡ್ಸ್ ಸದಸ್ಯರು ಉಡುಪಿಯ ಅಜ್ಜರಕಾಡು ಯುದ್ಧ ಸ್ಮಾರಕದ ಬಳಿ ರವಿವಾರ ತ್ರಿವರ್ಣ ಧ್ವಜ ಹಿಡಿದು, ಘೋಷಣೆಗಳನ್ನು ಕೂಗಿ ಸಂಭ್ರಮಾಚರಣೆ ನಡೆಸಿದರು.
ಕ್ಲೀನ್ ಉಡುಪಿ ಪ್ರಾಜೆಕ್ಟ್ ಸಂಚಾಲಕ ಡಾ. ಆರ್.ಎನ್. ಭಟ್ ಅವರು ನೀರಜ್ ಚೋಪ್ರಾ ಸಾಧನೆಯ ಸವಿನೆನಪಿಗಾಗಿ ಸಸಿಗಳನ್ನು ನೆಟ್ಟರು.
ಜಗದೀಶ್ ಶೆಟ್ಟಿ, ಸಂತೋಷ್ ನಾಯ್ಕ್, ರಾಘವೇಂದ್ರ ಪ್ರಭು ಕರ್ವಾಲು, ನಾಗರಾಜ್ ಕಿದಿಯೂರು, ಉದಯ ನಾಯ್ಕ್, ಗಣೇಶ್ ಪ್ರಸಾದ್ ಜಿ. ನಾಯಕ್ ಉಪಸ್ಥಿತರಿದ್ದರು.
![](https://www.varthabharati.in/sites/default/files/images/galllery/2021/08/8/WhatsApp Image 2021-08-08 at 10.23.17 PM (1).jpeg)
Next Story