Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ : ಅವಧಿ ಮುಗಿದು 2ನೇ ಡೋಸ್‌ಗೆ...

ಉಡುಪಿ : ಅವಧಿ ಮುಗಿದು 2ನೇ ಡೋಸ್‌ಗೆ ಕಾಯುತ್ತಿರುವವರು 34,000 ಮಂದಿ !

ವಾರ್ತಾಭಾರತಿವಾರ್ತಾಭಾರತಿ9 Aug 2021 10:19 PM IST
share
ಉಡುಪಿ : ಅವಧಿ ಮುಗಿದು 2ನೇ ಡೋಸ್‌ಗೆ ಕಾಯುತ್ತಿರುವವರು 34,000 ಮಂದಿ !

ಉಡುಪಿ, ಆ.9: ಜಿಲ್ಲೆಯಲ್ಲಿ 18 ವರ್ಷ ಮೇಲ್ಪಟ್ಟ ಅರ್ಹ 10,01,861 ಮಂದಿ ಕೊರೋನ ಲಸಿಕೆ ನೀಡುವ ಗುರಿಯನ್ನು ಹೊಂದಲಾಗಿದ್ದು, ಇವರ ಪೈಕಿ ಮೊದಲ ಡೋಸ್ ಪಡೆಯಲು 4,70,874 ಹಾಗೂ ಎರಡನೇ ಡೋಸ್ ಪಡೆಯಲು 8,11,507 ಮಂದಿ ಬಾಕಿ ಇದ್ದಾರೆ. ಮೊದಲ ಡೋಸ್ ಪಡೆದು ಕೋವಿಶೀಲ್ಡ್ 86 ಹಾಗೂ ಕೋವ್ಯಾಕ್ಸಿನ್ ಒಂದು ತಿಂಗಳ ಅವಧಿ ಮುಗಿದು ಎರಡನೇ ಡೋಸ್ ಪಡೆಯಲು ಒಟ್ಟು 34 ಸಾವಿರ ಮಂದಿ ಕಾಯುತ್ತಿದ್ದಾರೆ.

ಉಡುಪಿ ಜಿಲ್ಲೆಗೆ ಜು.26ರಿಂದ ಆ.1ರವರೆಗೆ ಪ್ರತಿದಿನ ಸರಾಸರಿ 4757, ಜು.19-25ರವರೆಗೆ 2952, ಅದಕ್ಕಿಂತ ಹಿಂದೆ 6114 ಡೋಸ್‌ಗಳು ಬಂದಿವೆ. ಆ.1ರಂದು ಒಂದೇ ದಿನ ಜಿಲ್ಲೆಯಲ್ಲಿ ಅತ್ಯಂತ ಅಧಿಕ ಅಂದರೆ 28861 ಮಂದಿಗೆ ಲಸಿಕೆ ನೀಡಲಾಗಿದೆ. ಜಿಲ್ಲೆಯಲ್ಲಿ ಈವರೆಗೆ 69ಸಾವಿರ ವಿದ್ಯಾರ್ಥಿ ಗಳಿಗೆ ಲಸಿಕೆ ನೀಡಲಾಗಿದೆ ಎಂದು ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.

43,330 ಹೆಚ್ಚುವರಿ ಡೋಸ್ 

ಜಿಲ್ಲೆಗೆ ಈವರೆಗೆ ಒಟ್ಟು 6,56,850 ಕೊರೋನ ಲಸಿಕೆಯ ಡೋಸ್ ಬಂದಿದ್ದು, ಅದರಲ್ಲಿ ಮೊದಲ ಡೋಸ್ 5,33,950 ಹಾಗೂ ಎರಡನೇ ಡೋಸ್ 1,94,433 ಆಗಿದೆ. ಕೆಲವು ವಯಲ್‌ನಲ್ಲಿ 10ರ ಬದಲು 11 ಬಂದ ಡೋಸ್‌ನ್ನು ಕೂಡ ಬಳಕೆ ನಮ್ಮಲ್ಲಿ ಮಾಡಿಕೊಳ್ಳಲಾಗಿದೆ. ಇದರಿಂದ ಜಿಲ್ಲೆಯಲ್ಲಿ ಲಸಿಕೆ ವ್ಯರ್ಥ ಆಗುವ ಬದಲು ಹೆಚ್ಚುವರಿಯಾಗಿ 43,330 ಡೋಸ್‌ಗಳನ್ನು ವಿತರಿಸಲಾಗಿದೆ ಎಂದು ಡಿಎಚ್‌ಓ ತಿಳಿಸಿದ್ದಾರೆ.

ಖಾಸಗಿಯವರು ಹಣ ಕೊಟ್ಟು ಖರೀದಿಸುವ ಲಸಿಕೆಯ ವಿವರ ನಮ್ಮಲ್ಲಿ ಇರುವುದಿಲ್ಲ. ಆದರೆ ಅವರು ನೀಡಿದ ಲಸಿಕೆಯ ವಿವರ ನಮ್ಮಲ್ಲಿ ಇರುತ್ತದೆ. ಸದ್ಯ ಖಾಸಗಿಯಲ್ಲೂ ಬೇಕಾದಷ್ಟು ಲಸಿಕೆ ಲಭ್ಯತೆ ಇದೆ. ಮಣಿಪಾಲದ ಕೆಎಂಸಿ, ಬ್ರಹ್ಮಾವರ ಮಹೇಶ್ ಆಸ್ಪತ್ರೆ, ಕುಂದಾಪುರ ಚಿನ್ಮಯಿ ಆಸ್ಪತ್ರೆ, ಉಡುಪಿ ಟಿಎಂಎ ಪೈ ಆಸ್ಪತ್ರೆ, ಆದರ್ಶ ಆಸ್ಪತ್ರೆಗಳಲ್ಲಿ ಲಸಿಕೆ ನೀಡಲಾುತ್ತದೆ ಎಂದು ಅವರು ಹೇಳಿದರು.

ಎಚ್‌ಸಿಡಬ್ಲುಗೆ ಶೇ. 99 ಡೋಸ್ 

ಜಿಲ್ಲೆಯ 23889 ಆರೋಗ್ಯ ಕಾರ್ಯಕರ್ತ(ಎಚ್‌ಸಿಡಬ್ಲು)ರ ಪೈಕಿ 23567 ಮಂದಿಗೆ ಮೊದಲ ಡೋಸ್ ನೀಡುವ ಮೂಲಕ ಶೇ.99 ಹಾಗೂ 19606 ಮಂದಿಗೆ ಎರಡನೇ ಡೋಸ್ ನೀಡುವ ಮೂಲಕ ಶೇ.82ರಷ್ಟು ಸಾಧನೆ ಮಾಡಲಾಗಿದೆ. ಜಿಲ್ಲೆಯ 8120 ಫ್ರಂಟ್‌ಲೈನ್ ವಾರಿಯರ್ಸ್‌ಗಳ ಪೈಕಿ 8078 ಮಂದಿಗೆ ಮೊದಲ ಡೋಸ್ ನೀಡುವ ಮೂಲಕ ಶೇ.99 ಹಾಗೂ 4058 ಮಂದಿಗೆ ಎರಡನೇ ಡೋಸ್ ನೀಡುವ ಮೂಲಕ ಶೇ.50ರಷ್ಟು ಸಾಧನೆ ಮಾಡಲಾಗಿದೆ.

18-44 ವರ್ಷದೊಳಗಿನ 5,88,000 ಮಂದಿ ಪೈಕಿ 1,88,139 ಮಂದಿಗೆ ಮೊದಲ ಡೋಸ್ ನೀಡುವ ಮೂಲಕ ಶೇ.28 ಸಾಧನೆ ಮಾಡಲಾಗಿದೆ ಹಾಗೂ 12584 ಮಂದಿಗೆ ಎರಡನೇ ಡೋಸ್ ನೀಡಲಾಗಿದೆ. 45 ವರ್ಷ ಮೇಲ್ಪಟ್ಟ 4,13,861 ಮಂದಿಯ ಪೈರಿ 3,18,217 ಮಂದಿಗೆ ಮೊದಲ ಡೋಸ್ ನೀಡುವ ಮೂಲಕ ಶೇ.75 ಹಾಗೂ 1,57,555 ಮಂದಿಗೆ ಎರಡನೇ ಡೋಸ್ ನೀಡುವ ಮೂಲಕ ಶೇ.37ರಷ್ಟು ಸಾಧನೆ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X