Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ನಾಗಾಸಾಕಿ ಮೇಲೆ ಪರಮಾಣು ಬಾಂಬ್ ದಾಳಿಗೆ...

ನಾಗಾಸಾಕಿ ಮೇಲೆ ಪರಮಾಣು ಬಾಂಬ್ ದಾಳಿಗೆ 76 ವರ್ಷ:ಈಶಾನ್ಯ ಏಶ್ಯಾ ವಲಯ ಪರಮಾಣು ಮುಕ್ತವಾಗಲು ಜಪಾನ್ ಮುಂದಾಳತ್ವಕ್ಕೆ ಕರೆ

ವಾರ್ತಾಭಾರತಿವಾರ್ತಾಭಾರತಿ9 Aug 2021 11:24 PM IST
share

ಟೋಕಿಯೊ, ಆ.9: ಪರಮಾಣು ಶಸ್ತ್ರಾಸ್ತ್ರಗಳನ್ನು ತೊಡೆದುಹಾಕುವ ನಿಟ್ಟಿನಲ್ಲಿ ಅಮೆರಿಕ ಮತ್ತು ರಶ್ಯ ಹೆಚ್ಚಿನ ಉಪಕ್ರಮ ಕೈಗೊಳ್ಳಬೇಕಾಗಿದೆ ಎಂದು ಜಪಾನಿನ ನಾಗಾಸಾಕಿ ನಗರದ ಮೇಯರ್ ಒತ್ತಾಯಿಸಿದ್ದಾರೆ. ನಾಗಾಸಾಕಿ ಮೇಲೆ ಅಮೆರಿಕದ ಪರಮಾಣು ಬಾಂಬ್ ದಾಳಿ ನಡೆದು 76 ವರ್ಷವಾದ ಹಿನ್ನೆಲೆಯಲ್ಲಿ ನಾಗಾಸಾಕಿ ಶಾಂತಿ ಉದ್ಯಾನವನದಲ್ಲಿ ಸೋಮವಾರ ಆಯೋಜಿಸಿದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. 

ಈಶಾನ್ಯ ಏಶ್ಯಾ ವಲಯವನ್ನು ಪರಮಾಣು ಮುಕ್ತವಾಗಿಸಲು ಜಪಾನ್ ಮುಂದಾಳತ್ವ ವಹಿಸಬೇಕು ಮತ್ತು ಈ ಮೂಲಕ ಜಪಾನನ್ನು ಅಮೆರಿಕದ ಅಣ್ವಸ್ತ್ರ ವ್ಯಾಪ್ತಿಯಿಂದ ಹೊರತರಲು ಕ್ರಮಕೈಗೊಳ್ಳಬೇಕು. ಪರಮಾಣು ಶಸ್ತ್ರಾಸ್ತ್ರ ನಿಷೇಧಿಸುವ 2017ರ ಪರಮಾಣು ಒಪ್ಪಂದಕ್ಕೆ ಜಪಾನ್ ತಕ್ಷಣ ಸಹಿಹಾಕಬೇಕು ಎಂದು ನಾಗಾಸಾಕಿ ಮೇಯರ್ ಟೊಮಿಹಿಸಾ ತೌ ಆಗ್ರಹಿಸಿದರು. 

ಪರಮಾಣು ನಿಶಸ್ತ್ರೀಕರಣದ ನಿಟ್ಟಿನಲ್ಲಿ ನಡೆಯುವ ಪ್ರಯತ್ನಗಳಿಂದ ಹಿಂದಡಿ ಇಟ್ಟಿರುವ ಪರಮಾಣು ಸಶಕ್ತ ರಾಷ್ಟ್ರಗಳಾದ ಅಮೆರಿಕ ಮತ್ತು ರಶ್ಯಾಗಳ ಉಪಕ್ರಮದ ಆತಂಕ ವ್ಯಕ್ತಪಡಿಸಿದ ಅವರು, ಪರಮಾಣು ಶಸ್ತ್ರಾಸ್ತ್ರ ಮುಕ್ತ ವಿಶ್ವನಿರ್ಮಾಣದತ್ತ ಸಾಗಬೇಕಿದೆ ಎಂದರು. ನಾಗಾಸಾಕಿ ಮೇಲಿನ ಪರಮಾಣು ದಾಳಿಯಲ್ಲಿ ಬದುಕುಳಿದ, ಈಗ ವೃದ್ಧಾಪ್ಯದ ಹಂತದಲ್ಲಿರುವರಿಗೆ ವೈದ್ಯಕೀಯ ಮತ್ತಿತರ ನೆರವು ಒದಗಿಸುವ ಪ್ರಕ್ರಿಯೆ ತ್ವರಿತಗತಿಯಲ್ಲಿ ಸಾಗುವಂತೆ ಸರಕಾರ ಕ್ರಮ ಕೈಗೊಳ್ಳಬೇಕು ಎಂದು ಟೊಮಿಹಿಸಾ ತೌ ಒತ್ತಾಯಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಜಪಾನ್ ಪ್ರಧಾನಿ ಯೊಶಿಹಿಡೆ ಸುಗಾ, ಪರಮಾಣು ನಿರಸ್ತ್ರೀಕರಣದ ವಿಷಯದಲ್ಲಿ ವಿಶ್ವದ ರಾಷ್ಟ್ರಗಳು ವಿಭಿನ್ನ ನಿಲುವು ಹೊಂದಿದ್ದು ಮಾತುಕತೆಯ ಮೂಲಕ ಪರಸ್ಪರ ವಿಶ್ವಾಸವೃದ್ಧಿಗೆ ಕ್ರಮ ಕೈಗೊಳ್ಳುವ ಅಗತ್ಯವಿದೆ. ಮುಂದಿನ ವರ್ಷದ ಪರಮಾಣು ಪ್ರಸರಣ ತಡೆ ಒಪ್ಪಂದದ ಸಮಾವೇಶದಲ್ಲಿ ಪರಮಾಣು ನಿಶಸ್ತ್ರೀಕರಣದ ನಿಟ್ಟಿನಲ್ಲಿ ಗಮನಾರ್ಹ ಪ್ರಗತಿಯಾಗಬೇಕಿದೆ ಎಂದರು.

 ಬೆಳಿಗ್ಗೆ 11:02 ಗಂಟೆಗೆ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದವರೆಲ್ಲರೂ ಒಂದು ನಿಮಿಷ ಮೌನ ಆಚರಿಸುವ ಮೂಲಕ, 1945ರ ಆಗಸ್ಟ್ 9ರಂದು ಅಮೆರಿಕದ ಬಿ-29 ಬಾಂಬರ್ ವಿಮಾನ ಉದುರಿಸಿದ ಪರಮಾಣು ಬಾಂಬ್ ಸ್ಫೋಟದಿಂದ ಮೃತಪಟ್ಟ 70,000ಕ್ಕೂ ಅಧಿಕ ಮಂದಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಇದಕ್ಕೂ 3 ದಿನದ ಮೊದಲು ಜಪಾನ್ನ ಮತ್ತೊಂದು ನಗರ ಹಿರೋಶಿಮಾದ ಮೇಲೆ ಅಮೆರಿಕ ನಡೆಸಿದ್ದ ಬಾಂಬ್ದಾಳಿಯಲ್ಲಿ 1,40,000 ಮಂದಿ ಮೃತಪಟ್ಟಿದ್ದರು. ಆಗಸ್ಟ್ 15ರಂದು ಜಪಾನ್ ಶರಣಾಗತಿ ಘೋಷಿಸುವುದರೊಂದಿಗೆ ದ್ವಿತೀಯ ವಿಶ್ವಯುದ್ಧ ಸಮಾಪ್ತಿಯಾಗಿತ್ತು.

  
ಪರಮಾಣು ಶಸ್ತ್ರಾಸ್ತ್ರ ಹೊಂದುವುದು, ಉತ್ಪಾದಿಸುವುದು ಅಥವಾ ಇವುಗಳ ದಾಸ್ತಾನಿಗೆ ಅವಕಾಶ ನೀಡದಿರುವ ಕಾರ್ಯನೀತಿಯನ್ನು ಜಪಾನ್ ಹೊಂದಿದೆ. ಆದರೆ ಅಮೆರಿಕದ ಮಿತ್ರರಾಷ್ಟ್ರವಾಗಿರುವ ಜಪಾನ್ನಲ್ಲಿ ಅಮೆರಿಕದ 50,000 ಪಡೆಗಳ ಸೇನಾನೆಲೆ ಇದೆ ಮತ್ತು ಅಮೆರಿಕದ ಪರಮಾಣು ವ್ಯಾಪ್ತಿಯಡಿ ಜಪಾನ್ ಸೇರಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X