ಆ.12: ಸಿಎಂ ಬಸವರಾಜ ಬೊಮ್ಮಾಮಿ ಮಂಗಳೂರಿಗೆ ಭೇಟಿ
ಮಂಗಳೂರು, ಆ.10: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆ.12ರಂದು ದ.ಕ. ಜಿಲ್ಲಾ ಕೈಗೊಳ್ಳಲಿದ್ದಾರೆ. ಅಂದು ಬೆಳಗ್ಗೆ 10:50ಕ್ಕೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. 11:30ಕ್ಕೆ ಜಿಪಂ ಸಭಾಂಗಣದಲ್ಲಿ ನಡೆಯುವ ಕೋವಿಡ್ ಕುರಿತಂತೆ ಜಿಲ್ಲಾಡಳಿತದೊಂದಿಗೆ ಪರಿಶೀಲನಾ ಸಭೆ ನಡೆಸಲಿದ್ದಾರೆ. ಬಳಿಕ ಉಡುಪಿಗೆ ತೆರಳಿದ್ದಾರೆ.
ಸಂಜೆ ಮಂಗಳೂರಿಗೆ ವಾಪಸಾಗಿ ನಗರದಲ್ಲೇ ವಾಸ್ತವ್ಯ ಹೂಡಲಿದ್ದಾರೆ.ಆ.13ರಂದು ಬೆಳಗ್ಗೆ 8ಕ್ಕೆ ಗಡಿಭಾಗದ ಚೆಕ್ಪೋಸ್ಟ್ಗಳಿಗೆ ಭೇಟಿ ನೀಡಲಿದ್ದಾರೆ ಎಂದು ಸಿಎಂ ಆಪ್ತ ಕಾರ್ಯದರ್ಶಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story