Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಬೇಹುಗಾರಿಕೆ ಆರೋಪ: ಕೆನಡ ಉದ್ಯಮಿಗೆ 11...

ಬೇಹುಗಾರಿಕೆ ಆರೋಪ: ಕೆನಡ ಉದ್ಯಮಿಗೆ 11 ವರ್ಷ ಜೈಲು ಶಿಕ್ಷೆ ವಿಧಿಸಿದ ಚೀನಾ ಕೋರ್ಟ್

ವಾರ್ತಾಭಾರತಿವಾರ್ತಾಭಾರತಿ11 Aug 2021 11:18 PM IST
share

ಟೊರಾಂಟೊ, ಆ.11: ಬೇಹುಗಾರಿಕೆಯ ಆರೋಪದಲ್ಲಿ ಚೀನಾದ ನ್ಯಾಯಾಲಯ ವೊಂದು ಕೆನಡದ ಉದ್ಯಮಿ ಮೈಕೆಲ್ ಸ್ಪೆವೊರ್ ಅವರನ್ನು ದೋಷಿಯೆಂದು ಪರಿಗಣಿಸಿ ತೀರ್ಪು ನೀಡಿದ್ದು, ಅವರಿಗೆ 11 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.
   ‌
2018ರಲ್ಲಿ ಮೈಕೆಲ್ ಸ್ಪೆವೊರ್ ಅವರನ್ನು ಕೆನಡದ ಮಾಜಿ ರಾಜತಾಂತ್ರಿಕ ಮೈಕೆಲ್ ಕೊವ್ರಿಗ್ ಜೊತೆ ಚೀನಾ ಬಂಧಿಸಿತ್ತು. ಚೀನಾ ನ್ಯಾಯಾಲಯದ ಇಂದಿನ ತೀರ್ಪಿನಿಂದಾಗಿ ಕೆನಡ ಹಾಗೂ ಚೀನಿ ಸರಕಾರಗಳ ನಡುವೆ ಬಾಂಧವ್ಯ ಇನ್ನಷ್ಟು ಹದಗೆಡುವ ಸಾಧ್ಯತೆಯಿದೆಯೆಂದು ಅಂತಾರಾಷ್ಟ್ರೀಯ ವಿಶ್ಲೇಷಕರು ಬಣ್ಣಿಸಿದ್ದಾರೆ.
   
ಚೀನಾದ ಬೃಹತ್ ತಂತ್ರಜ್ಞಾನ ಉದ್ಯಮಸಂಸ್ಥೆ ಹುವೈನ ಹಿರಿಯ ಕಾರ್ಯನಿ ರ್ವಹಣಾಧಿಕಾರಿ ಮೆಂಗ್ ವಾಂಝೌ ಅವರ ಗಡಿಪಾರಿಗೆ ಚೀನಾ ಆಡಳಿತವು ಕೆನಡದ ಮೇಲೆ ಒತ್ತಡ ಹೇರುತ್ತಿರುವ ನಡುವೆಯೇ, ಚೀನಾದ ನ್ಯಾಯಾಲಯ ಈ ತೀರ್ಪನ್ನು ನೀಡಿದೆ.
   
ಬೇಹುಗಾರಿಕೆ ಹಾಗೂ ದೇಶದ ರಹಸ್ಯಗಳನ್ನು ಕಾನೂನುಬಾಹಿರವಾಗಿ ವಿದೇಶಕ್ಕೆ ಒದಗಿಸಿದ ಅಪರಾಧಕ್ಕಾಗಿ ಸ್ಪೆವೊರ್ಗೆ 11 ವರ್ಷಗಳ ಜೈಲು ಶಿಕ್ಷೆಯನ್ನು ಘೋಷಿಸಲಾಗಿದೆ ಹಾಗೂ 50 ಸಾವಿರ ಯುವಾನ್ (5,73,793 ರೂ. ) ವೌಲ್ಯದ ವೈಯಕ್ತಿಕ ಆಸ್ತಿಯನ್ನು ವಶಪಡಿಸಿಕೊಳಬೇಕು ಹಾಗೂ ಗಡಿಪಾರುಗೊಳಿಸಬೇಕೆಂದು ಡಾಂಡೊಂಗ್ನ ನ್ಯಾಯಾಲಯವು ತೀರ್ಪಿನಲ್ಲಿ ಘೋಷಿಸಿದೆ.
   
ಆದರೆ ತೀರ್ಪಿನಲ್ಲಿ ಸ್ಪೆವೊರ್ ಅವರನ್ನು ಯಾವಾಗ ಗಡಿಪಾರುಗೊಳಿಸಬೇಕು ಎಂದು ಸ್ಪಷ್ಟವಾಗಿ ತಿಳಿಸಲಾಗಿಲ್ಲ. ಆದರೆ ಚೀನಾದಲ್ಲಿ ಸಾಮಾನ್ಯವಾಗಿ ಅಪರಾಧಿಗಳು ಶಿಕ್ಷೆಯನ್ನು ಪೂರ್ಣಗೊಳಿಸಿದ ಬಳಿಕ ಅವರನ್ನು ಗಡಿಪಾರುಗೊಳಿಸಲಾಗುತ್ತಿದೆ.

ಸ್ಪೆವೊರ್ ಹಾಗೂ ಕೊವ್ರಿಗ್ ಇಬ್ಬರೂ ರಾಜಕೀಯ ಚೌಕಾಶಿಯ ದಾಳಗಳನ್ನಾಗಿ ಚೀನಾ ಬಳಸಿಕೊಳ್ಳುತ್ತಿದೆಯೆಂದು ಬೀಜಿಂಗ್ ನ ಟೀಕಾಕಾರರು ಆರೋಪಿಸಿದ್ದು, ಇದು ಒತ್ತೆಯಾಳು ರಾಜತಾಂತ್ರಿಕತೆಯ ಒಂದು ಭಾಗವಾಗಿದೆ ಎಂದವರು ಹೇಳಿದ್ದರು.
 
ಚೀನಾ ನ್ಯಾಯಾಲಯದ ತೀರ್ಪನ್ನು ಕೆನಡ ಪ್ರಧಾನಿ ಜಸ್ಟಿನ್ ಟ್ರೆಡೊವ್ ಖಂಡಿಸಿದ್ದು, ಸ್ಪೆವೊರ್ ಅವರನ್ನು ಅಪರಾಧಿಯೆಂದು ಪರಿಗಣಿಸಿರುವುದು ಸಂಪೂರ್ಣವಾಗಿ ಅಸ್ವೀಕಾರಾರ್ಹ ಹಾಗೂ ಅನ್ಯಾಯದಿಂದ ಕೂಡಿದ್ದಾಗಿದೆ ಎಂದು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X