Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರಜಾಪ್ರಭುತ್ವದ ಕಗ್ಗೊಲೆ: ಸಂಸತ್...

ಪ್ರಜಾಪ್ರಭುತ್ವದ ಕಗ್ಗೊಲೆ: ಸಂಸತ್ ಅಧಿವೇಶನದ ಹಠಾತ್ ಅಂತ್ಯ ಕುರಿತು ರಾಹುಲ್ ಪ್ರತಿಕ್ರಿಯೆ

ವಾರ್ತಾಭಾರತಿವಾರ್ತಾಭಾರತಿ12 Aug 2021 12:36 PM IST
share
ಪ್ರಜಾಪ್ರಭುತ್ವದ ಕಗ್ಗೊಲೆ: ಸಂಸತ್ ಅಧಿವೇಶನದ ಹಠಾತ್ ಅಂತ್ಯ ಕುರಿತು ರಾಹುಲ್ ಪ್ರತಿಕ್ರಿಯೆ

ಹೊಸದಿಲ್ಲಿ: ಸಂಸತ್ತಿನ ಮಳೆಗಾಲದ ಅಧಿವೇಶನವನ್ನು ಅರ್ಧದಲ್ಲಿಯೇ ಹಠಾತ್ ಆಗಿ ಮುಕ್ತಾಯಗೊಳಿಸಿದ್ದನ್ನು  ಹಾಗೂ ಬುಧವಾರ ರಾಜ್ಯಸಭೆಯ ಮಹಿಳಾ ಸದಸ್ಯರ ಮೇಲೆ ನಡೆದಿದೆಯೆನ್ನಲಾದ ಹಲ್ಲೆಯನ್ನು ಖಂಡಿಸಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಹಾಗೂ ಇತರ ವಿಪಕ್ಷ ನಾಯಕರು ಇಂದು ಸಂಸತ್ತಿನ ಹೊರಗೆ ಪ್ರತಿಭಟನೆ ನಡೆಸಿದ್ದಾರೆ.

"ನಮಗೆ ಸಂಸತ್ತಿನಲ್ಲಿ ಮಾತನಾಡಲು ಅನುಮತಿಸದೇ ಇರುವುದರಿಂದ ಇಂದು ನಾವು ನಿಮ್ಮೊಂದಿಗೆ (ಮಾಧ್ಯಮ) ಮಾತನಾಡಲು ಬಂದಿದ್ದೇವೆ, ಇದು ಪ್ರಜಾಪ್ರಭುತ್ವದ ಕಗ್ಗೊಲೆ" ಎಂದು ರಾಹುಲ್ ಗಾಂಧಿ ಹೇಳಿದರು.

"ಸಂಸತ್ ಅಧಿವೇಶನವನ್ನು ಅಂತ್ಯಗೊಳಿಸಲಾಗಿದೆ. ದೇಶದ ಶೇ60ರಷ್ಟು ಭಾಗದ ದನಿಯನ್ನು ಅಮುಕಲಾಗಿದೆ, ಅವಮಾನಿಸಲಾಗಿದೆ ಹಾಗೂ ನಿನ್ನೆ ರಾಜ್ಯಸಭೆಯಲ್ಲಿ ಅವರ ಮೇಲೆ ಹಲ್ಲೆ ನಡೆಸಲಾಗಿದೆ" ಎಂದು ಅವರು ಹೇಳಿದರು.

"ಶಿವಸೇನೆ ಸಂಸದ ಸಂಜಯ್ ರಾವತ್ ಮಾತನಾಡಿ, ಮಹಿಳೆಯರು ಸೇರಿದಂತೆ ಸಂಸದರ ಮೇಲೆ ದೈಹಿಕ ಹಲ್ಲೆ ನೋಡಿ ನಾವು ಪಾಕಿಸ್ತಾನದ ಗಡಿಯಲ್ಲಿರುವಂತೆ ಭಾಸವಾಯಿತು. ವಿಪಕ್ಷಕ್ಕೆ ತಮ್ಮ ಅಭಿಪ್ರಾಯಗಳನ್ನು ಸಂಸತ್ತಿನಲ್ಲಿ ವ್ಯಕ್ತಪಡಿಸಲು ಅವಕಾಶ ದೊರಕಿಲ್ಲ" ಎಂದು ಹೇಳಿದರು.

ಬುಧವಾರ ರಾಜ್ಯಸಭೆಯಲ್ಲಿ ವಿಮಾ ಮಸೂದೆಯೊಂದರ ತಿದ್ದುಪಡಿ ಅಂಗೀಕರಿಸುವ ವೇಳೆ ಭಾರೀ ಗೊಂದಲದ ವಾತಾವರಣ ಮೂಡಿತಲ್ಲದೆ ತಾವು ಸದನದ ಅಂಗಳದಲ್ಲಿ ಪ್ರತಿಭಟಿಸುತ್ತಿರುವ ವೇಳೆ ತಮ್ಮ ಮೇಲೆ ಪುರುಷ ಮಾರ್ಷಲ್‍ಗಳು ಹಲ್ಲೆ ನಡೆಸಿದ್ದಾರೆಂದು ಕಾಂಗ್ರೆಸ್‍ನ ಸಂಸದೆಯರು ಆರೋಪಿಸಿದ್ದರು.

ಈ ರೀತಿ ಮಹಿಳಾ ಸಹೋದ್ಯೋಗಿಗಳ ಮೇಲೆ ಹಲ್ಲೆ ನಡೆಸಿರುವುದು ತಮ್ಮ 55 ವರ್ಷಗಳ ಸಂಸದೀಯ ಅನುಭವದಲ್ಲಿ ಹಿಂದೆಂದೂ ನೋಡಿಲ್ಲ ಎಂದು ಎನ್‍ಸಿಪಿ ಮುಖ್ಯಸ್ಥ ಶರದ್ ಪವಾರ್  ನಂತರ ಹೇಳಿದ್ದರು.

"ಈ ಮಸೂದೆಯನ್ನು ಆಯ್ಕೆ ಸಮಿತಿಗೆ ಕಳುಹಿಸಲು ಸರಕಾರ ನಿರಾಕರಿಸಿತ್ತು, ಈ ಬೇಡಿಕೆಯನ್ನು ವಿಪಕ್ಷ ಸದಸ್ಯರು ಸೇರಿದಂತೆ ಬಿಜೆಪಿಗೆ ಹತ್ತಿರದ ಸಂಸದರೂ ಮುಂದಿಟ್ಟಿದ್ದರು, ಆದರೆ ಸಂಸತ್ತಿನಲ್ಲಿ ನಡೆದ ಘಟನೆ ಆಘಾತಕರ" ಎಂದು ಕಾಂಗ್ರೆಸ್ ಮುಖ್ಯ ಸಚೇತಕ ಜೈರಾಂ ರಮೇಶ್ ಹೇಳಿದರು.

#WATCH CCTV visuals of Opposition MPs jostling with marshals in Parliament yesterday pic.twitter.com/yfJsbCzrhl

— ANI (@ANI) August 12, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X