Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಂವಿಧಾನದ ಆಶಯಗಳನ್ನು ಈಡೇರಿಸುವ ಶಪಥ...

ಸಂವಿಧಾನದ ಆಶಯಗಳನ್ನು ಈಡೇರಿಸುವ ಶಪಥ ಮಾಡಬೇಕು: ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ12 Aug 2021 8:38 PM IST
share
ಸಂವಿಧಾನದ ಆಶಯಗಳನ್ನು ಈಡೇರಿಸುವ ಶಪಥ ಮಾಡಬೇಕು: ಸಿದ್ದರಾಮಯ್ಯ

ಬೆಂಗಳೂರು, ಆ.12: ನಾನು ಯಾವತ್ತೂ ಜನ್ಮದಿನ ಆಚರಿಸಿಕೊಂಡವನಲ್ಲ, ನನ್ನ ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು ಪ್ರೀತಿಯಿಂದ ಶುಭ ಹಾರೈಸಲು ನನ್ನ ಮನೆಗೆ ಬರುತ್ತಾರೆ. ಅವರನ್ನು ಭೇಟಿ ಮಾಡುತ್ತಿದ್ದೇನೆ. ನಾನು ಐದನೇ ತರಗತಿಗೆ ನೇರವಾಗಿ ದಾಖಲಾತಿ ಆದ ಸಂದರ್ಭದಲ್ಲಿ ಶಾಲೆಯ ಶಿಕ್ಷಕರು ಬರೆದುಕೊಂಡ ಪ್ರಕಾರ ನನಗೀಗ 74 ವರ್ಷ ತುಂಬಿ 75 ನೇ ವರ್ಷಕ್ಕೆ ಕಾಲಿಟ್ಟಿದ್ದೇನೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಗುರುವಾರ ನಗರದ ಕುಮಾರಪಾರ್ಕ್ ಬಳಿಯಿರುವ ತಮ್ಮ ನಿವಾಸದಲ್ಲಿ ಹುಟ್ಟುಹಬ್ಬದ ಪ್ರಯುಕ್ತ ಅಭಿಮಾನಿಗಳು, ಕಾರ್ಯಕರ್ತರು, ರಾಜಕೀಯ ಮುಖಂಡರಿಂದ ಶುಭಾಶಯ ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳಾಗುತ್ತಿದೆ. ಈ ಸಂದರ್ಭದಲ್ಲಿ ನಾವು ಹಿಂದಿನ 74 ವರ್ಷಗಳ ಇತಿಹಾಸವನ್ನು ಹಿಂತಿರುಗಿ ನೋಡಬೇಕು. ಸಂವಿಧಾನದ ಆಶಯಗಳು ಈಡೇರಿವೆಯೋ ಇಲ್ಲವೋ ಎಂಬುದನ್ನು ಗಮನಿಸಿ, ಈಡೇರದೇ ಇದ್ದರೆ ಅದನ್ನು ಈಡೇರಿಸುವ ಶಪಥ ಮಾಡಬೇಕು. ದೇಶದಲ್ಲಿ ಪ್ರಮುಖ ದಿನಗಳ ಆಚರಣೆಯ ಉದ್ದೇಶ ಸಾಮಾಜಿಕ, ಆರ್ಥಿಕ ಬದಲಾವಣೆ ಮಾಡುವ ಸಂಕಲ್ಪ ಮಾಡಬೇಕೆಂಬುದು ಎಂದು ಅವರು ಹೇಳಿದರು.

ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟದಲ್ಲಿ ಪಾಲ್ಗೊಂಡವರು ತಮ್ಮ ವೈಯಕ್ತಿಕ ಹಿತಾಸಕ್ತಿಗಾಗಿಯಾಗಲೀ, ಅಧಿಕಾರ ಪಡೆಯಬೇಕೆಂಬ ಉದ್ದೇಶದಿಂದಾಗಲೀ ಹೋರಾಟ ಮಾಡಿಲ್ಲ. ಬ್ರಿಟಿಷರು ದೇಶದಿಂದ ತೊಲಗಬೇಕು, ನಮ್ಮ ಭವಿಷ್ಯವನ್ನು ರೂಪಿಸುವ ಸ್ವಾತಂತ್ರ್ಯ ನಮಗೆ ಸಿಗಬೇಕು ಎಂಬ ಧ್ಯೇಯದೊಂದಿಗೆ ತ್ಯಾಗ, ಬಲಿದಾನ ಮಾಡಿದ್ದಾರೆ. 75ನೇ ಸ್ವಾತಂತ್ರ್ಯೋತ್ಸವದಂದು ನಾವೆಲ್ಲ ದೇಶ ಕಟ್ಟುವ, ಸಮಾಜದಲ್ಲಿ ಸೌಹಾರ್ದತೆ, ಸಾಮರಸ್ಯ, ಬ್ರಾತೃತ್ವ ಭಾವನೆಯನ್ನು ಬೆಳೆಸುವ ಸಂಕಲ್ಪ ಮಾಡಬೇಕು ಎಂದು ಸಿದ್ದರಾಮಯ್ಯ ಕರೆ ನೀಡಿದರು.

ನಾವು ಸ್ವಾತಂತ್ರ್ಯ ಹೋರಾಟಗಾರರಲ್ಲ, ನಾವೆಲ್ಲಾ ಸ್ವಾತಂತ್ರ್ಯದ ಫಲಾನುಭವಿಗಳು. ಆದರೆ ಸ್ವಾತಂತ್ರ್ಯ ಹೋರಾಟದಲ್ಲಿ ನಿಸ್ವಾರ್ಥವಾಗಿ ಪಾಲ್ಗೊಂಡವರ ಹೆಜ್ಜೆ ಗುರುತುಗಳನ್ನು ನಾವು ಅರ್ಥಮಾಡಿಕೊಂಡು, ಅವರ ದಾರಿಯಲ್ಲಿ ಸಾಗುವ ಪ್ರಯತ್ನ ಮಾಡಬೇಕು ಎಂದು ಅವರು ಕೋರಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X