Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಪಶ್ಚಿಮಘಟ್ಟದೊಂದಿಗೇ ನಮ್ಮ ಸರ್ವನಾಶದ...

ಪಶ್ಚಿಮಘಟ್ಟದೊಂದಿಗೇ ನಮ್ಮ ಸರ್ವನಾಶದ ಹಾದಿಯಲ್ಲಿ...

-ರೂಪ ಹಾಸನ, ಹಾಸನ-ರೂಪ ಹಾಸನ, ಹಾಸನ12 Aug 2021 11:39 PM IST
share

ಮಾನ್ಯರೇ,

ಈಗಾಗಲೇ ಪಶ್ಚಿಮಘಟ್ಟದ ಒಡಲಿನಲ್ಲಿ ಕಾರ್ಯಗತಗೊಂಡಿರುವ ಹಲವಾರು ಅವೈಜ್ಞಾನಿಕ ಬೃಹತ್, ಮಧ್ಯಮ ಮತ್ತು ಸಣ್ಣ ಪ್ರಮಾಣದ ಯೋಜನೆಗಳಿಂದಾಗಿ ಅಗಾಧ ಪ್ರಮಾಣದ ಅರಣ್ಯ ಸಂಪತ್ತು ನಾಶವಾಗಿದೆ. ಯೋಜನೆಗಳ ಅನುಷ್ಠಾನಕ್ಕೆ ದೊಡ್ಡ ಪ್ರಮಾಣದ ಯಂತ್ರಗಳ ಬಳಕೆಯಿಂದ, ವಾಹನಗಳ ಭರದ ಓಡಾಟದಿಂದ ಇಡೀ ಅರಣ್ಯ ಬುಡ ಮೇಲಾಗಿದೆ. ವನ್ಯಮೃಗಗಳ ಬದುಕು ಅಸ್ತವ್ಯಸ್ತವಾಗಿದೆ. ಹೀಗಾಗಿ ಇತ್ತೀಚಿನ ವರ್ಷಗಳಲ್ಲಿ ಬೀಳುತ್ತಿರುವ ಮಳೆಯ ತೀವ್ರತೆಗೆ ಹಿಂದೆಂದೂ ಕಂಡು ಕೇಳರಿಯದಷ್ಟು ಅಪಾರ ಪ್ರಮಾಣದಲ್ಲಿ ಗುಡ್ಡ ಕುಸಿತ, ಭೂಕುಸಿತಗಳು ಉಂಟಾಗುತ್ತಿವೆ. ಇದೆಲ್ಲ ಅವಘಡಗಳಿಂದಾಗಿ ಅರಣ್ಯದಲ್ಲಿ ಸಹಜ ಬದುಕು ಸಾಗಿಸುತ್ತಿದ್ದ ಆನೆ, ಚಿರತೆ, ಮಂಗ, ನವಿಲು ಇನ್ನಿತರ ವನ್ಯಮೃಗಗಳು ದಿಕ್ಕು ಕಾಣದೆ ಕಾಡಿನ ಪಕ್ಕದ ಹಳ್ಳಿ-ಪಟ್ಟಣಗಳಿಗೆ ನುಗ್ಗಿ ಅವ್ಯಾಹತವಾಗಿ ಪ್ರಾಣಹಾನಿ ಹಾಗೂ ಬೆಳೆಹಾನಿ ಮಾಡಿವೆ. ಮಾಡುತ್ತಿವೆ. ತಮ್ಮ ರಕ್ಷಣೆಯ ಅನಿವಾರ್ಯತೆಗಾಗಿ, ಮನುಷ್ಯರಿಂದ ಪ್ರಾಣಿಗಳ ಕೊಲೆಯೂ ಅವ್ಯಾಹತವಾಗಿ ನಡೆದೇ ಇದೆ. ಪಶ್ಚಿಮಘಟ್ಟದ ಮತ್ತು ಸುತ್ತಮುತ್ತಲ ಜನರ ಬದುಕು ಇತ್ತೀಚಿನ ವರ್ಷಗಳಲ್ಲಿ ತೀರಾ ದುಸ್ತರವಾಗಿದೆ. ಜೊತೆಗೆ ಅಲ್ಲಿ ವಾಸಿಸುತ್ತಿರುವ ಪ್ರಾಣಿಗಳದ್ದು ಕೂಡ! ಆಡಳಿತಕ್ಕೆ ಕೂಡ ಇದೊಂದು ದಿನನಿತ್ಯದ ಗಂಭೀರ ಸಮಸ್ಯೆಯಾಗಿ ಪರಿಣಮಿಸಿದೆ. ಆದರೆ ನಮ್ಮ ಜನಪ್ರತಿನಿಧಿಗಳು ಮಾತ್ರ ಇಂದಿಗೂ ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿಯೇ ಇಲ್ಲ! ಸಂದರ್ಭಾನುಸಾರ ಒಂದಿಷ್ಟು ಪರಿಹಾರ ಮೊತ್ತ ನೀಡಿ ಕೈತೊಳೆದುಕೊಳ್ಳುತ್ತಿದ್ದಾರೆ. ಜನ-ಪ್ರಾಣಿ-ಅರಣ್ಯದ ಪುನರ್ವಸತಿ ಬಗೆಗೆ, ಸಮಸ್ಯೆಗೆ ಶಾಶ್ವತ ಪರಿಹಾರದ ಬಗೆಗೆ ಯೋಚಿಸುತ್ತಲೇ ಇಲ್ಲ. ಆದರೆ ಇದಿಷ್ಟೇ ಸಾಲದೆಂಬಂತೆ ಮತ್ತೆ ಪಶ್ಚಿಮಘಟ್ಟದ ಒಡಲೊಳಗೆ 1,400 ಚಿಕ್ಕ ಚಿಕ್ಕ ಡ್ಯಾಂಗಳ ನಿರ್ಮಾಣಕ್ಕೆ ಸ್ಥಳ ಗುರುತಿಸಲಾಗಿದ್ದು, ಅದಕ್ಕೆ ನೆರವು ನೀಡುವಂತೆ ಕೇಂದ್ರ ಜಲಶಕ್ತಿ ಸಚಿವರೊಂದಿಗೆ ಚರ್ಚಿಸಿ, ಪ್ರಸ್ತಾವ ಸಲ್ಲಿಸಲಾಗಿದೆಯೆಂದು ರಾಜ್ಯದ ಸಣ್ಣ ನೀರಾವರಿ ಸಚಿವರು ನೀಡಿರುವ ಮಾಹಿತಿ ಪತ್ರಿಕೆಗಳಲ್ಲಿ ವರದಿಯಾಗಿದೆ. ಅರಣ್ಯದಲ್ಲಿ ನಡೆಯುವ ಇಂತಹ ಯೋಜನೆಗಳಿಂದ ಶಾಶ್ವತ ಹಾನಿಗೀಡಾಗುವ ಒಟ್ಟು ಪರಿಸರ, ಅರಣ್ಯ, ಜನಜೀವನವನ್ನು ಕುರಿತು ಮೊದಲು ಸರಕಾರ ವಿಜ್ಞಾನಿಗಳು, ತಜ್ಞರೊಂದಿಗೆ ಚರ್ಚೆ ಮಾಡಲಿ. ಈಗಾಗಲೇ ಪ್ರಕೃತಿಯ ಮೇಲಿನ ಅವ್ಯಾಹತ ಪ್ರಹಾರದಿಂದ ಅವನತಿಯ ಹಾದಿ ಹಿಡಿದಿರುವ ಮನುಕುಲ, ವಿವೇಚನೆ ಇಲ್ಲದೆ ಮತ್ತಷ್ಟು ಇಂತಹ ಯೋಜನೆಗಳನ್ನು ಅನುಷ್ಠಾನಗೊಳಿಸಲು ಮುಂದಾದರೆ, ವಿಜ್ಞಾನಿಗಳು ಆತಂಕಿಸುತ್ತಿರುವ ಭೂಮಿಯ ಸರ್ವನಾಶ ಮತ್ತಷ್ಟು ಹತ್ತಿರವಾಗಬಹುದೆನಿಸುತ್ತದೆ!
 

share
-ರೂಪ ಹಾಸನ, ಹಾಸನ
-ರೂಪ ಹಾಸನ, ಹಾಸನ
Next Story
X