Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹಿಂದುತ್ವ ಗುಂಪುಗಳ ಹಲ್ಲೆಯಿಂದ...

ಹಿಂದುತ್ವ ಗುಂಪುಗಳ ಹಲ್ಲೆಯಿಂದ ಮೌಲ್ವಿಯನ್ನು ರಕ್ಷಿಸಿದ್ದ ಠಾಣಾಧಿಕಾರಿ ಸೇವೆಯಿಂದ ಅಮಾನತು

ವಾರ್ತಾಭಾರತಿವಾರ್ತಾಭಾರತಿ12 Aug 2021 11:57 PM IST
share
ಹಿಂದುತ್ವ ಗುಂಪುಗಳ ಹಲ್ಲೆಯಿಂದ ಮೌಲ್ವಿಯನ್ನು ರಕ್ಷಿಸಿದ್ದ ಠಾಣಾಧಿಕಾರಿ ಸೇವೆಯಿಂದ ಅಮಾನತು

ಹೊಸದಿಲ್ಲಿ, ಆ.12: ಕಳೆದ ವಾರ ದಿಲ್ಲಿಯ ಫ್ಲೈಓವರ್ ಒಂದರ ಮೇಲೆ ಮೌಲ್ವಿಯೋರ್ವರಿಗೆ ಕಿರುಕುಳ ನೀಡುತ್ತಿದ್ದ ಹಿಂದುತ್ವ ಗುಂಪನ್ನು ತಡೆದಿದ್ದ ಇಲ್ಲಿಯ ಆದರ್ಶ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಘಟನೆಯ ವೀಡಿಯೊ ಆ.4ರಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಬಗ್ಗೆ ವ್ಯಾಪಕ ಟೀಕೆಗಳು ವ್ಯಕ್ತವಾಗಿವೆ.

ಕರ್ತವ್ಯಲೋಪದ ಆರೋಪದಲ್ಲಿ ಠಾಣಾಧಿಕಾರಿ ಸಿ.ಪಿ.ಭಾರದ್ವಾಜ್ ರನ್ನು ಅಮಾನತುಗೊಳಿಸಲಾಗಿದೆ ಮತ್ತು ಅವರ ವಿರುದ್ಧ ಹಲವಾರು ದೂರುಗಳಿದ್ದವು ಎಂದು ದಿಲ್ಲಿ ಪೊಲೀಸರು ಹೇಳಿಕೊಂಡಿದ್ದಾರಾದರೂ ಅಮಾನತು ಆದೇಶವು ‘ಅನಧಿಕೃತ’ ಆರಾಧನಾ ತಾಣವೊಂದರ ಕುರಿತು ಮೌಲ್ವಿಯನ್ನು ತರಾಟೆಗೆತ್ತಿಕೊಂಡಿದ್ದ ಹಿಂದುತ್ವ ಕಾರ್ಯಕರ್ತರು ಭಾರದ್ವಾಜ್ ರೊಂದಿಗೆ ವಾಗ್ವಾದದಲ್ಲಿ ತೊಡಗಿರುವುದನ್ನು ತೋರಿಸಿರುವ ವೈರಲ್ ವೀಡಿಯೊಕ್ಕೆ ಸಂಬಂಧಿಸಿರುವಂತೆ ಕಂಡುಬರುತ್ತಿದೆ ಎಂದು thewire.in ವರದಿ ಮಾಡಿದೆ.

ಮೌಲ್ವಿಗೆ ಕಿರುಕುಳ ನೀಡದಂತೆ ಹಿಂದುತ್ವ ಕಾರ್ಯಕರ್ತರಿಗೆ ಕಠಿಣ ಶಬ್ದಗಳಲ್ಲಿ ಎಚ್ಚರಿಕೆ ನೀಡಿದ್ದ ಭಾರದ್ವಾಜ್, ಅನಧಿಕೃತ ಧಾರ್ಮಿಕ ಸ್ಥಳಗಳ ಬಗ್ಗೆ ಯಾವುದೇ ದೂರುಗಳಿದ್ದರೆ ಸರ್ವೋಚ್ಚ ನ್ಯಾಯಾಲಯದ ನಿರ್ದೇಶದ ಮೇರೆಗೆ ದಿಲ್ಲಿ ಸರಕಾರವು ರಚಿಸಿರುವ ಸಮಿತಿಯನ್ನು ಸಂಪರ್ಕಿಸಬಹುದು, ಹೀಗೆ ಸಾರ್ವಜನಿಕವಾಗಿ ಗಲಾಟೆಯನ್ನು ನಡೆಸುವುದಲ್ಲ ಎಂದು ಬುದ್ಧಿಮಾತು ಹೇಳಿದ್ದರು.

ಫ್ಲೈಓವರ್ ನಲ್ಲಿಯ ಮಝಾರ್ ಒಂದರ ಕುರಿತು ಇಬ್ಬರು ಹಿಂದುತ್ವ ಕಾರ್ಯಕರ್ತರು ಮೌಲ್ವಿಯೊಂದಿಗೆ ವಾಗ್ವಾದಕ್ಕಿಳಿದಿದ್ದು, ಮೂರನೇ ಕಾರ್ಯಕರ್ತ ಘಟನೆಯನ್ನು ವೀಡಿಯೊ ಚಿತ್ರೀಕರಿಸುತ್ತಿದ್ದ. ಮೌಲ್ವಿಗೆ ಒಂದರ ನಂತರ ಒಂದರಂತೆ ಪ್ರಶ್ನೆಗಳನ್ನು ಕೇಳುತ್ತಿದ್ದ ಕುತ್ತಿಗೆಗೆ ಕೇಸರಿ ಶಾಲು ಸುತ್ತಿಕೊಂಡಿದ್ದ ಯುವಕ, ಇಂತಹ ಎಷ್ಟು ಮಝಾರ್ ಗಳನ್ನು ನೀವು ಅನಧಿಕೃತವಾಗಿ ನಡೆಸುತ್ತಿದ್ದೀರಿ ಎಂದು ಪ್ರಶ್ನಿಸಿದ ವೇಳೆ ಸ್ಥಳಕ್ಕೆ ತಲುಪಿದ ಭಾರದ್ವಾಜ್, ಭಾರತೀಯ ಪ್ರಜೆಗೆ ಹೀಗೆ ಸಾರ್ವಜನಿಕವಾಗಿ ತೊಂದರೆ ನೀಡುವ ಹಕ್ಕನ್ನು ನಿಮಗೆ ಯಾರು ನೀಡಿದ್ದಾರೆ ಎಂದು ಕೇಳಿದ್ದನ್ನು ವೀಡಿಯೊ ತೋರಿಸಿದೆ.
   
ಭಾರದ್ವಾಜ್ ಅವರೊಂದಿಗೆ ವಾದಕ್ಕಿಳಿದಿದ್ದ ಯುವಕ, ಪೊಲೀಸರು ಮತ್ತು ಆಡಳಿತ ರಾತ್ರೋರಾತ್ರಿ ಚಾಂದನಿ ಚೌಕ್ನಲ್ಲಿಯ ದೇವಸ್ಥಾವೊಂದನ್ನು ನೆಲಸಮಗೊಳಿಸಿರುವ ಬಗ್ಗೆ ಏನು ಹೇಳುತ್ತೀರಿ ಎಂದು ಪ್ರಶ್ನಿಸಿದ್ದ. ಇದಕ್ಕೆ ಅಧಿಕಾರಯುತವಾಗಿ ಉತ್ತರಿಸಿದ್ದ ಭಾರದ್ವಾಜ್, ‘ನೀವು ನನ್ನೊಂದಿಗೆ ಸಾಂವಿಧಾನಿಕ ಹಕ್ಕುಗಳ ಬಗ್ಗೆ ಮಾತನಾಡಿ. ನೀವು ಹೀಗೆ ಯಾವುದೇ ಪ್ರಜೆಗೆ ಅಥವಾ ಧಾರ್ಮಿಕ ವ್ಯಕ್ತಿಗೆ ಕಿರುಕುಳ ನೀಡುವಂತಿಲ್ಲ. ನಿಮಗೆ ಆ ಹಕ್ಕು ಇಲ್ಲ’ ಎಂದು ಹೇಳಿದ್ದರು. ಕಾರ್ಯಕರ್ತರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಭಾರದ್ವಾಜ್ ಎಚ್ಚರಿಕೆ ನೀಡಿದ್ದರೂ ಯುವಕ ತನ್ನ ವಾದವನ್ನು ಮುಂದುವರಿಸಿದಾಗ ಆತನನ್ನು ಅಲ್ಲಿಂದ ಕರೆದೊಯ್ಯುವಂತೆ ತನ್ನ ಸಿಬ್ಬಂದಿಗಳಿಗೆ ಆದೇಶಿಸಿದ್ದರು.

ಭಾರದ್ವಾಜ್ ರನ್ನು ಅಮಾನತುಗೊಳಿಸಿರುವ ದಿಲ್ಲಿ ಪೊಲೀಸರ ಕ್ರಮಕ್ಕೆ ತೀಕ್ಷ್ಣ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸರಿಯಾದ ನಿಲುವು ತೆಗೆದುಕೊಂಡಿದ್ದಕ್ಕಾಗಿ ಇಲಾಖೆಯು ಭಾರದ್ವಾಜರಿಗೆ ಕಿರುಕುಳ ನೀಡುತ್ತಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಆರೋಪಿಸಲಾಗಿದೆ. ಇದು ಭಾರತದಲ್ಲಿ ಕಾನೂನಿನ ಆಡಳಿತವನ್ನು ಸ್ಥಾಪಿಸುವ ಕ್ರಮವೇ ಎಂದು ಪತ್ರಕರ್ತ ಹಾಗೂ ‘ಜನತಾ ಕಿ ರಿಪೋರ್ಟರ್’ನ ಸ್ಥಾಪಕ ರಿಫಾತ್ ಜಾವೇದ್ ಟ್ವಿಟರ್ ನಲ್ಲಿ ಪ್ರಶ್ನಿಸಿದ್ದಾರೆ.

ಕೃಪೆ: thewire.in

A few days ago, Adarsh Nagar SHO CP Bhardwaj stopped a Hindutva bully who was trying to intimidate a Muslim man.
Today, Delhi police suspended the officer for "lack of duty compliance." pic.twitter.com/vVThpjk09s

— Ravi Nair (@t_d_h_nair) August 11, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X