Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ ಮನೆ ನಿವೇಶನ ಹಗರಣದ ಸಂತ್ರಸ್ಥರಿಂದ...

ಉಡುಪಿ ಮನೆ ನಿವೇಶನ ಹಗರಣದ ಸಂತ್ರಸ್ಥರಿಂದ ಆ.15ರಂದು ‘ನಮ್ಮ ನಡೆ ಬೆಣಗಲ್ ಕಡೆಗೆ’ ಪಾದಯಾತ್ರೆ

ವಾರ್ತಾಭಾರತಿವಾರ್ತಾಭಾರತಿ13 Aug 2021 9:04 PM IST
share

ಉಡುಪಿ, ಆ.13: ಉಡುಪಿಯ ಮನೆ ನಿವೇಶನ ಹಗರಣದ ಸಂತ್ರಸ್ಥರು ಆ.15ರಂದು ಬೆಳಗ್ಗೆ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಯಿಂದ ಬ್ರಹ್ಮಾವರ ತಾಲೂಕು ಬೆಣಗಲ್‌ವರೆಗೆ ‘ನಮ್ಮ ನಡೆ ಬೆಣಗಲ್ ಕಡೆಗೆ’ ಹಮ್ಮಿಕೊಂಡಿದ್ದಾರೆ.

ಬೆಣಗಲ್ ಎಂಬುದು ದೇಶದ ರಾಜನೀತಿಜ್ಞ, ಸಂವಿಧಾನತಜ್ಞ, ವಿದ್ವಾಂಸ ಬೆಣಗಲ್ ನರಸಿಂಗರಾಯರ ಹುಟ್ಟೂರು. ಡಾ.ಬಿ.ಆರ್.ಅಂಬೇಡ್ಕರ್ ನೇತೃತ್ವದಲ್ಲಿ ಭಾರತದ ಸಂವಿಧಾನ ರೂಪಿಸಿದ ಭಾರತ ಸಂವಿಧಾನ ಸಂರಚನಾ ಸಮಿತಿಯ ಸಲಹೆಗಾರರಾಗಿದ್ದವರು ಬೆಣಗಲ್ ನರಸಿಂಹರಾಯರು.

ಸಂವಿಧಾನ ರೂಪಿಸಿದ ದೇಶದ ಧೀಮಂತರು ಕಂಡ ‘ಸರ್ವರಿಗೂ ಸಮಪಾಲು, ಸಮಬಾಳು’ ಕನಸು ಇಂದು ಛಿದ್ರವಾಗಿದೆ. ಒಂದು ಕಾಲದಲ್ಲಿ ವಿದ್ಯೆ, ಶಿಕ್ಷಣ, ಸಂಸ್ಕೃತಿ, ಮಾನವೀಯ ವೌಲ್ಯ, ನ್ಯಾಯಪರತೆಯ ಸಾಕಾರರೂಪ ದಂತಿದ್ದ ಬೆಣಗಲ್ ಮನೆ ಇಂದು ಇಲ್ಲವಾಗಿ ಆ ಜಾಗವೀಗ ‘ಸಾರಸ್ವತರಡಿ’ ಎಂಬ ಹಾಳುದಿಬ್ಬವಾಗಿ ನಾಡಿನ ಅವನತಿಗೆ ಸಂಕೇತದಂತಿದೆ. ಈ ಬಗ್ಗೆ ನಾವಿಂದು ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ. ಇಂಥ ಆತ್ಮಶೋಧನೆಯ ಮೊದಲ ಹೆಜ್ಜೆ ‘ನಮ್ಮ ನಡೆ ಬೆಣಗಲ್ ಕಡೆಗೆ’ ಎಂದು ಪಾದಯಾತ್ರೆಯ ಸಂಘಟಕರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಆ.15ರ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಬೆಳಗ್ಗೆ 7 ಕ್ಕೆ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಮುಂಭಾಗದ ಡಾ.ಅಂಬೇಡ್ಕರ್ ಪ್ರತಿಮೆಯ ಎದುರು ರಾಷ್ಟ್ರಧ್ವಜ ಅರಳಿಸಿ ಬೆಣಗಲ್‌ಗೆ ಪಾದಯಾತ್ರೆ ಪ್ರಾರಂಭಗೊಳ್ಳಲಿದೆ. ಒಟ್ಟು 26 ಕಿ.ಮೀ. ದೂರದ ಪಾದಯಾತ್ರೆ ಸಂಜೆ 4 ಕ್ಕೆ ಸಾರಸ್ವತರಡಿಯಲ್ಲಿ ಮುಕ್ತಾಯಗೊಳ್ಳಲಿದೆ ಎಂದು ಹೇಳಿಕೆ ತಿಳಿಸಿದೆ.

ಪಾದಯಾತ್ರೆಯ ವೇಳೆ ಯಾವುದೇ ಸಭೆ, ಭಾಷಣ, ಘೋಷಣೆ, ಬ್ಯಾನರ್ ಇರುವುದಿಲ್ಲ. ದೇಶದ ಇಂದಿನ ದುಸ್ಥಿತಿ ಬಗ್ಗೆ ಆತಂಕಗೊಂಡಿರುವ ಯಾವುದೇ ನಾಗರಿಕ ಇದರಲ್ಲಿ ಭಾಗವಹಿಸಬಹುದು. ಯಾವುದೇ ಪಕ್ಷ, ಧರ್ಮ, ಅಜೆಂಡಾಗಳಿಗೆ ಅವಕಾಶವಿಲ್ಲ. ಇದು ರಾಜಕೀಯ ಶುದ್ಧೀಕರಣಕ್ಕಾಗಿ ರಾಜಕೀಯೇತರ ಪಾದಯಾತ್ರೆ ಇದಾಗಿದೆ ಎಂದು ಸಂಘಟಕರು ಹೇಳಿದ್ದಾರೆ.

ಉಡುಪಿಯಲ್ಲಿ ನ್ಯಾಯಯುತವಾಗಿ ಮನೆ ನಿವೇಶನಗಳನ್ನು ಖರೀಸಿದರೂ, ಕಂದಾಯ ಇಲಾಖೆ ಹಾಗೂ ಭೂಮಾಫಿಯಾ ಮಾಡಿದ ವಂಚನೆ ಯಿಂದ ಹಾಗೂ ನ್ಯಾಯಾಲಯದ ವೌನದಿಂದ ನೊಂದ ಸಾಮಾನ್ಯ ಪ್ರಜೆಗಳೇ ನಿವೇಶನ ಹಗರಣದ ಸಂತ್ರಸ್ಥರಾಗಿದ್ದು, ಈ ಪಾದಯಾತ್ರೆ ಸಂಘಟಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X