Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಟೆಹ್ರಾನ್ ಅಧಿವೇಶನದ ಬಗ್ಗೆ ಟ್ವೀಟ್:‌...

ಟೆಹ್ರಾನ್ ಅಧಿವೇಶನದ ಬಗ್ಗೆ ಟ್ವೀಟ್:‌ ರಶ್ಯಾ, ಬ್ರಿಟನ್ ರಾಯಭಾರಿಗಳಿಗೆ ಇರಾನ್ ಸಮನ್ಸ್

ವಾರ್ತಾಭಾರತಿವಾರ್ತಾಭಾರತಿ13 Aug 2021 11:25 PM IST
share

  ಟೆಹ್ರಾನ್, ಆ.13: ಮಿತ್ರರಾಷ್ಟ್ರಗಳ ನಿಯಂತ್ರಣದಲ್ಲಿದ್ದ ಸಂದರ್ಭ ಇರಾನ್ನ ಟೆಹ್ರಾನ್ನಲ್ಲಿ 1943ರಲ್ಲಿ ನಡೆದಿದ್ದ ಅಧಿವೇಶನದ ಫೋಟೋವನ್ನು ರಶ್ಯಾ ರಾಯಭಾರ ಕಚೇರಿಯ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ರಶ್ಯಾ ಮತ್ತು ಬ್ರಿಟನ್ ರಾಯಭಾರಿಗಳಿಗೆ ಗುರುವಾರ ಸಮನ್ಸ್ ನೀಡಲಾಗಿದೆ ಎಂದು ಇರಾನ್ನ ಸರಕಾರಿ ಮಾಧ್ಯಮ ವರದಿ ಮಾಡಿದೆ.

ಈ ಫೊಟೋ ಅತ್ಯಂತ ಅಪ್ರಸ್ತುತ ಎಂದು ಇರಾನ್ನ ನಿರ್ಗಮಿತ ವಿದೇಶ ಸಚಿವ ಮುಹಮ್ಮದ್ ಜವಾದ್ ಝರೀಫ್ ಬಣ್ಣಿಸಿದ್ದಾರೆ. ತಮ್ಮ ದೇಶ ವಿದೇಶೀಯರ ನಿಯಂತ್ರಣದಲ್ಲಿ ಇತ್ತು ಎಂಬುದನ್ನು ದೇಶದ ಜನತೆಗೆ ನೆನಪಿಸುವ ಉದ್ದೇಶ ಈ ಫೋಟೋದ ಹಿಂದೆ ಇರಬಹುದು ಎಂದು ಹಲವರು ಟ್ವಿಟರ್ ಗೆ ಪತ್ರ ಬರೆದು ಆಕ್ರೋಶ ಸೂಚಿಸಿರುವುದಾಗಿ ವರದಿ ಹೇಳಿದೆ.

 1943ರಲ್ಲಿ ಟೆಹ್ರಾನ್ ನಲ್ಲಿನ ರಶ್ಯಾದ ರಾಯಭಾರ ಕಚೇರಿಯಲ್ಲಿ ಅಮೆರಿಕದ ಅಧ್ಯಕ್ಷ ಫ್ರ್ಯಾಂಕ್ಲಿನ್ ರೂಸ್ವೆಲ್ಟ್, ಬ್ರಿಟನ್ ಪ್ರಧಾನಿ ವಿನ್ಸ್ಟನ್ ಚರ್ಚಿಲ್, ಸೋವಿಯತ್ ಮುಖಂಡ ಜೋಸೆಫ್ ಸ್ಟಾಲಿನ್ ಮುಂದಿನ ಕಾರ್ಯತಂತ್ರದ ಬಗ್ಗೆ ಚರ್ಚೆ ನಡೆಸುತ್ತಿರುವುದು ಮತ್ತು ಈ ಸಂದರ್ಭ ರಶ್ಯಾದ ರಾಯಭಾರಿ ಲೆವಾನ್ ಝಗರ್ಯಾನ್, ಬ್ರಿಟನ್ ನ ರಾಯಭಾರಿ ಸೈಮನ್ ಶೆರ್ಕ್ಲಿಫ್ ಉಪಸ್ಥಿತರಿರುವ ಫೋಟೋ ಇದಾಗಿದೆ. ಇದು ರಾಜತಾಂತ್ರಿಕ ಶಿಷ್ಟಾಚಾರ ಮತ್ತು ಇರಾನ್ ಜನತೆಯ ರಾಷ್ಟ್ರೀಯ ಹೆಮ್ಮೆಗೆ ತೋರಿದ ಅಗೌರವವಾಗಿದೆ ಎಂದು ಇರಾನ್ನ ನಿಯೋಜಿತ ವಿದೇಶ ಸಚಿವ ಹೊಸೈನ್ ಅಮೀರಬ್ದುಲ್ಲಾಹಿಯನ್ ಪ್ರತಿಕ್ರಿಯಿಸಿದ್ದಾರೆ.

  2ನೇ ವಿಶ್ವಯುದ್ಧದ ಸಂದರ್ಭ ನಾಝಿಗಳ ವಿರುದ್ಧ ಬ್ರಿಟನ್ ಮತ್ತು ರಶ್ಯಾ ಜತೆಯಾಗಿದ್ದವು ಎಂಬುದನ್ನು ನೆನಪಿಸುವ ಉದ್ದೇಶದಿಂದ ಮಾತ್ರ ಈ ಫೋಟೋ ಅಪ್ಲೋಡ್ ಮಾಡಿರುವುದಾಗಿ ರಶ್ಯಾ ರಾಯಭಾರಿ ಸ್ಪಷ್ಟಪಡಿಸಿದ್ದಾರೆ ಎಂದು ಇರಾನ್ನ ವಿದೇಶ ವ್ಯವಹಾರ ಇಲಾಖೆ ಹೇಳಿದೆ. ರಶ್ಯಾದೊಂದಿಗೆ ನಾವು ಸ್ನೇಹ ಸಂಬಂಧ ಹೊಂದಿದ್ದರೂ, ಫೋಟೋ ಪ್ರಕಟಿಸಿರುವ ಕ್ರಮ ಸ್ವೀಕಾರಾರ್ಹವಲ್ಲ ಎಂದು ವಿದೇಶ ವ್ಯವಹಾರ ಇಲಾಖೆ ಹೇಳಿದೆ. ಪೋಟೋ ಪ್ರಕಟಿಸಿದ್ದರ ಹಿಂದೆ ಯಾವುದೇ ದುರುದ್ದೇಶವಿಲ್ಲ ಎಂದು ಬ್ರಿಟನ್ ರಾಯಭಾರಿ ಕೂಡಾ ಸ್ಪ್ಟಪಡಿಸಿದ್ದಾರೆ ಎಂದು ಇಲಾಖೆ ಹೇಳಿದೆ.

ಈ ಫೋಟೋದ ಹಿಂದೆ ಇರಾನ್ ವಿರೋಧಿ ಉದ್ದೇಶವೇನೂ ಇಲ್ಲ. ನಮ್ಮ ಮಿತ್ರರಾಗಿರುವ ಇರಾನ್ನ ಜನತೆಯ ಭಾವನೆಗೆ ಘಾಸಿ ಮಾಡುವ ಉದ್ದೇಶ ನಮಗಿಲ್ಲ ಎಂದು ರಶ್ಯಾ ರಾಯಭಾರ ಕಚೇರಿ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X