Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೂತನ ಐಟಿ ನಿಯಮ-2021ರ ಕೆಲವು...

ನೂತನ ಐಟಿ ನಿಯಮ-2021ರ ಕೆಲವು ನಿಬಂಧನೆಗಳಿಗೆ ಬಾಂಬೆ ಹೈಕೋರ್ಟ್ ತಡೆ

ವಾರ್ತಾಭಾರತಿವಾರ್ತಾಭಾರತಿ14 Aug 2021 7:01 PM IST
share
ನೂತನ ಐಟಿ ನಿಯಮ-2021ರ ಕೆಲವು ನಿಬಂಧನೆಗಳಿಗೆ ಬಾಂಬೆ ಹೈಕೋರ್ಟ್ ತಡೆ

ಮುಂಬೈ,ಆ.14: ನೂತನ ಮಾಹಿತಿ ಮತ್ತು ತಂತ್ರಜ್ಞಾನ (ಐಟಿ) ನಿಯಮಾವಳಿಯಲ್ಲಿ ವಿಧಿಸಲಾಗಿರುವ ‘ನೀತಿ ಸಂಹಿತೆ’ಯನ್ನು ಡಿಜಿಟಲ್ ಸುದ್ದಿ ಮಾಧ್ಯಮಗಳು ಮತ್ತು ಪ್ರಕಾಶಕರು ಪಾಲಿಸುವುದನ್ನು ಕಡ್ಡಾಯಗೊಳಿಸಿರುವ 9(1) ಮತ್ತು 9(3) ನಿಬಂಧನೆಗಳಿಗೆ ಬಾಂಬೆ ಉಚ್ಚ ನ್ಯಾಯಾಲಯವು ಶನಿವಾರ ತಡೆಯನ್ನು ನೀಡಿದೆ.
ಕಾನೂನು ಸುದ್ದಿ ಜಾಲತಾಣ ‘ದಿ ಲೀಫ್ಲೆಟ್’ ಮತ್ತು ಪತ್ರಕರ್ತ ನಿಖಿಲ್ ವಾಗ್ಳೆ ಅವರು ನೂತನ ಐಟಿ ನಿಯಮಗಳ ವಿರುದ್ಧ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ನ್ಯಾಯಾಲಯವು ಕೈಗೆತ್ತಿಕೊಂಡಿತ್ತು. ಈ ತಡೆಯು ಈ ಇಬ್ಬರು ಅರ್ಜಿದಾರರಿಗೆ ಮಾತ್ರ ಸೀಮಿತವಾಗಿದೆ ಎಂದು ಮುಖ್ಯ ನ್ಯಾಯಾಧೀಶ ದೀಪಂಕರ್ ದತ್ತಾ ಮತ್ತು ನ್ಯಾ,ಜಿ.ಎಸ್.ಕುಲಕರ್ಣಿ ಅವರ ಪೀಠವು ಸ್ಪಷ್ಟಪಡಿಸಿತು.

ತಡೆ ಹಿಡಿಯಲಾಗಿರುವ ನಿಬಂಧನೆಗಳು ಮೇಲ್ನೋಟಕ್ಕೆ ಸಂವಿಧಾನದ ವಿಧಿ 19ರಡಿ ಖಾತರಿಪಡಿಸಲಾಗಿರುವ ವಾಕ್ ಸ್ವಾತಂತ್ರದ ಹಕ್ಕುಗಳನ್ನು ಉಲ್ಲಂಘಿಸಿವೆ ಮತ್ತು ಐಟಿ ಕಾಯ್ದೆಗೂ ವಿರುದ್ಧವಾಗಿವೆ ಎಂದು ಪೀಠವು ಬೆಟ್ಟು ಮಾಡಿತು. ಸಮಗ್ರ ನಿಯಮಾವಳಿಗೆ ತಡೆಯನ್ನು ನೀಡಿಲ್ಲ ಎಂದು ಅದು ತಿಳಿಸಿತು. ನೂತನ ನಿಯಮಾವಳಿಗಳನ್ನು ಐಟಿ ಕಾಯ್ದೆಯಡಿ ರೂಪಿಸಲಾಗಿದೆ. ಆದರೆ ಅರ್ಜಿದಾರರು ತಕರಾರು ಎತ್ತಿದ್ದ 14 ಮತ್ತು 16ನೇ ನಿಬಂಧನೆಗಳಿಗೆ ತಡೆಯಾಜ್ಞೆಯನ್ನು ನೀಡಲು ಪೀಠವು ನಿರಾಕರಿಸಿತು.

ನಿಬಂಧನೆ 14 ಡಿಜಿಟಲ್ ಮಾಧ್ಯಮಗಳ ಮೇಲ್ವಿಚಾರಣೆ ವ್ಯವಸ್ಥೆಯಾಗಿ ಅಂತರ್-ಇಲಾಖಾ ಸಮಿತಿಯ ರಚನೆಯನ್ನು ಅಗತ್ಯವಾಗಿಸಿದೆ, ಆದರ ಇಂತಹ ಸಮಿತಿ ಈವರೆಗೂ ರಚನೆಯಾಗಿಲ್ಲ ಎಂದ ನ್ಯಾಯಾಲಯವು,ಈ ವಿಷಯವನ್ನು ತಕ್ಷಣವೇ ಕೈಗೆತ್ತಿಕೊಳ್ಳುವ ತುರ್ತು ಅಗತ್ಯ ಸದ್ಯಕ್ಕಿಲ್ಲ. ನಿಬಂಧನೆ 16 ಪ್ರಕಟಿತ ವಿಷಯವನ್ನು ತಡೆಹಿಡಿಯುವ ಅಧಿಕಾರವನ್ನು ಕೇಂದ್ರ ಸರಕಾರಕ್ಕೆ ನೀಡಿದೆ ಮತ್ತು ಇಂತಹುದೇ ನಿಬಂಧನೆಗಳು 2009ರ ಮಧ್ಯಂತರ ನಿಯಮಾವಳಿಯಲ್ಲಿಯೂ ಇದ್ದವು,ಆದರೆ ಆಗ ಅರ್ಜಿದಾರರು ಅವುಗಳನ್ನು ಪ್ರಶ್ನಿಸಿರಲಿಲ್ಲ ಎಂದು ಹೇಳಿತು.

ಪೀಠವು ಶುಕ್ರವಾರ ಈ ವಿಷಯದಲ್ಲಿ ತನ್ನ ಆದೇಶವನ್ನು ಕಾಯ್ದಿರಿಸಿತ್ತು,ಆದರೆ ನೂತನ ನಿಯಮಾವಳಿಯನ್ನು ಹೊರಡಿಸುವ ಅಗತ್ಯವೇನಿತ್ತು ಎಂದು ಸರಕಾರವನ್ನು ಪ್ರಶ್ನಿಸಿತ್ತು.
ನೂತನ ನಿಯಮಾವಳಿಯಲ್ಲಿನ ಹಲವಾರು ನಿಬಂಧನೆಗಳಿಗೆ ಆಕ್ಷೇಪಗಳನ್ನು ಎತ್ತಿದ್ದ ಅರ್ಜಿದಾರರು,ಇವು ಸಂವಿಧಾನವು ಖಾತರಿ ಪಡಿಸಿರುವ ಪ್ರಜೆಗಳ ವಾಕ್ ಸ್ವಾತಂತ್ರದ ಹಕ್ಕಿಗೆ ಚ್ಯುತಿಯನ್ನುಂಟು ಮಾಡುವ ಸಾಧ್ಯತೆಯಿದೆ ಎಂದು ವಾದಿಸಿದ್ದರು.

ನೂತನ ಐಟಿ ನಿಯಮಾವಳಿಯು ಸಂವಿಧಾನವನ್ನು ಮತ್ತು ಐಟಿ ಕಾಯ್ದೆಯನ್ನು ಉಲ್ಲಂಘಿಸಿದೆ ಎಂದು ದೂರಿ ಹಲವಾರು ಮಾಧ್ಯಮ ಸಂಸ್ಥೆಗಳು ದೇಶಾದ್ಯಂತ ವಿವಿಧ ಉಚ್ಚ ನ್ಯಾಯಾಲಯಗಳಲ್ಲಿ ಅರ್ಜಿಗಳನ್ನು ಸಲ್ಲಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X