Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಲೆಬನಾನ್: ಪರಾಕಾಷ್ಠೆಗೆ ತಲುಪಿದ ಇಂಧನ...

ಲೆಬನಾನ್: ಪರಾಕಾಷ್ಠೆಗೆ ತಲುಪಿದ ಇಂಧನ ಕೊರತೆ; ಸರಕಾರಿ ಸಂಸ್ಥೆಗಳ ಕಾರ್ಯನಿರ್ವಹಣೆಗೆ ತೊಡಕು

ವಾರ್ತಾಭಾರತಿವಾರ್ತಾಭಾರತಿ14 Aug 2021 10:40 PM IST
share
ಲೆಬನಾನ್: ಪರಾಕಾಷ್ಠೆಗೆ ತಲುಪಿದ ಇಂಧನ ಕೊರತೆ; ಸರಕಾರಿ ಸಂಸ್ಥೆಗಳ ಕಾರ್ಯನಿರ್ವಹಣೆಗೆ ತೊಡಕು

 ಬೆರೂತ್, ಆ.14: ತೀವ್ರ ಆರ್ಥಿಕ ಬಿಕ್ಕಟ್ಟಿನಿಂದ ಪದೇ ಪದೇ ವಿದ್ಯುತ್ ಸ್ಥಗಿತದ ಸಮಸ್ಯೆ ಎದುರಿಸುತ್ತಿರುವ ಲೆಬನಾನ್ನಲ್ಲಿ ಡೀಸೆಲ್ ಕೊರತೆ ಪರಾಕಾಷ್ಟೆ ಸ್ಥಿತಿ ತಲುಪಿರುವುದರಿಂದ ಹಲವು ಸರಕಾರಿ ಸಂಸ್ಥೆಗಳು ಕಾರ್ಯಾಚರಣೆ ಸ್ಥಗಿತಗೊಳಿಸುವ ಅಪಾಯದಲ್ಲಿವೆ ಎಂದು ವರದಿಯಾಗಿದೆ.

 ಗ್ಯಾಸ್ ಸ್ಟೇಷನ್, ಬೇಕರಿ, ಮೆಡಿಕಲ್ ಶಾಪ್ ಗಳಲ್ಲಿ ಮಾರುದ್ದದ ಸರತಿ ಸಾಲು ಮಾಮೂಲು ದೃಶ್ಯವಾಗಿದೆ. ವಿದ್ಯುತ್ ಸ್ಥಗಿತವಾದಾಗ, ಜನರೇಟರ್ ಆನ್ ಮಾಡಲಾಗದೆ ಹಲವರು ಮನೆಯ ಟೆರೇಸ್ ಮೇಲೆ ಮಲಗುವ ಅನಿವಾರ್ಯತೆಯಿದೆ. ಶುಕ್ರವಾರ ವಿದ್ಯುತ್ ಸ್ಥಗಿತವಾಗಿ ಜನರೇಟರ್ ಬಳಕೆಗೆ ಡೀಸೆಲ್ ಅಲಭ್ಯವಾದ ಕಾರಣ ಬೆರೂತ್ನ ರಫೀಕ್ ಹರೀರಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಲೈಟ್ ಆಫ್ ಆಗುವ ಹಂತದಲ್ಲಿ, ಕಡೆ ನಿಮಿಷದಲ್ಲಿ ಡೀಸೆಲ್ ಲಭಿಸಿದ ಕಾರಣ ವಿಮಾನ ನಿಲ್ದಾಣಕ್ಕೆ ಮರುಜೀವ ಬಂದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ವಿದ್ಯುತ್ ಸ್ಥಗಿತವಾದಾಗ ಖಾಸಗಿ ಜನರೇಟರ್ ಬಳಸಿ ಪರ್ಯಾಯ ವಿದ್ಯುತ್ ಬಳಸಲಾಗುತ್ತದೆ. ಆದರೆ ಜನರೇಟರ್ ಆನ್ ಮಾಡಲು ಡೀಸೆಲ್ ಕೊರತೆಯಿದೆ. ಡೀಸೆಲ್ನ ದರ ನಿರ್ಧಾರದ ವಿಷಯದಲ್ಲಿ ಆಡಳಿತದಲ್ಲಿರುವ ಸರಕಾರ ಹಾಗೂ ಲೆಬನಾನ್ನ ಸೆಂಟ್ರಲ್ ಬ್ಯಾಂಕ್ ಮಧ್ಯೆ ಹಗ್ಗಜಗ್ಗಾಟ ನಡೆಯುತ್ತಿರುವುದರಿಂದ ತೈಲೋತ್ಪನ್ನ ಮಾರಾಟ ಸಂಸ್ಥೆ ಡೀಸೆಲ್ ಪೂರೈಸುವುದನ್ನು ನಿಲ್ಲಿಸಿದೆ. ಇಂಧನದ ಕೊರತೆಯಿಂದ ಉತ್ತರ ಲೆಬನಾನ್ನ ಅಕ್ಕರ್ ವಲಯದಲ್ಲಿ ಸೇವೆಯನ್ನು ಸ್ಥಗಿತಗೊಳಿಸಿರುವುದಾಗಿ ಸರಕಾರಿ ಸ್ವಾಮ್ಯದ ಸಂಪರ್ಕ ಇಲಾಖೆ ಘೋಷಿಸಿದೆ.

ಹಲವೆಡೆ ಡೀಸೆಲ್ ಸಾಗಾಟದ ಟ್ಯಾಂಕರ್ಗಳನ್ನು ಅಡ್ಡಗಟ್ಟಿ ಡೀಸೆಲ್ ದೋಚುವ ಪ್ರಯತ್ನ ನಡೆದಿದೆ. ದಮೋರ್ನಲ್ಲಿನ ಗ್ಯಾಸ್ ಸ್ಟೇಷನ್ನಲ್ಲಿ ಇಂಧನದ ವಿಷಯಕ್ಕೆ ಸಂಬಂಧಿಸಿದ ವಾಗ್ಯುದ್ದ ಗುಂಡು ಹಾರಾಟದವರೆಗೆ ಮುಂದುವರಿದಿದೆ. ಇಂಧನದ ಕೊರತೆಯಿಂದ ಹಲವು ಬೇಕರಿಗಳು ಮುಚ್ಚಲ್ಪಟ್ಟಿವೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಲೆಬನಾನ್ನ ಅಧಿಕೃತ ಕರೆನ್ಸಿ ಪೌಂಡ್ ಇತ್ತೀಚಿನ ದಿನಗಳಲ್ಲಿ ತೀವ್ರ ಅಪವೌಲ್ಯವಾಗಿದ್ದು 90%ದಷ್ಟು ಮೌಲ್ಯವನ್ನು ಕಳೆದುಕೊಂಡಿದೆ. ಅಂತರಾಷ್ಟ್ರೀಯ ಮಾರುಕಟ್ಟೆ ದರದ ಪ್ರಕಾರ ಒಂದು ಡಾಲರ್ಗೆ 20,000 ಲೆಬನಾನ್ ಪೌಂಡ್ ಮೌಲ್ಯದಂತೆ ತೈಲೋತ್ಪನ್ನಗಳಿಗೆ ಬೆಲೆ ನಿಗದಿಗೊಳಿಸಲಾಗುವುದು ಎಂದು ಲೆಬನಾನ್ನ ಸೆಂಟ್ರಲ್ ಬ್ಯಾಂಕ್ ಹೇಳಿದರೆ, ಇಂಧನ ಸಚಿವಾಲಯ ಡಾಲರ್ ಗೆ 3,900 ಲೆಬನಾನ್ ಪೌಂಡ್ ಮೌಲ್ಯದಂತೆ ತೈಲೋತ್ಪನ್ನ ಬೆಲೆ ನಿಗದಿಗೊಳಿಸುವುದಾಗಿ ಹೇಳುತ್ತಿದೆ.

ಯಾವ ರೀತಿ ಬೆಲೆ ನಿಗದಿಗೊಳಿಸುವುದು ಎಂಬ ಸ್ಪಷ್ಟತೆಯಿಲ್ಲದ ಕಾರಣ ಪೆಟ್ರೋಲಿಯಂ ಆಮದು ಸಂಸ್ಥೆಗಳು ಡೀಸೆಲ್ ಸ್ಟೇಷನ್ಗಳಿಗೆ ಗ್ಯಾಸೊಲಿನ್ ಮತ್ತು ಡೀಸೆಲ್ ಪೂರೈಸಲು ಸಾಧ್ಯವಾಗುತ್ತಿಲ್ಲ ಎಂದು ಲೆಬನಾನ್ನ ಪೆಟ್ರೋಲಿಯಂ ಆಮದು ಸಂಸ್ಥೆಗಳ ಒಕ್ಕೂಟದ ಮುಖ್ಯಸ್ಥ ಜಾರ್ಜ್ಸ್ ಫಯಾದ್ ಹೇಳಿದ್ದಾರೆ. ಈ ಮಧ್ಯೆ, ಮುಂದಿನ ತಿಂಗಳಿಂದ ದೇಶದಾದ್ಯಂತ ರಾತ್ರಿ 12 ಗಂಟೆಯಿಂದ ಮರುದಿನ ಬೆಳಿಗ್ಗೆ 7ರವರೆಗೆ ಇಂಟರ್ನೆಟ್ ಸೇವೆ ಸ್ಥಗಿತಕ್ಕೆ ಸರಕಾರ ನಿರ್ಧರಿಸಿದೆ ಎಂಬ ವರದಿಯನ್ನು ಸಂಪರ್ಕ ಇಲಾಖೆಯ ಸಚಿವ ತಲಾಲ್ ಹವಾತ್ ನಿರಾಕರಿಸಿದ್ದಾರೆ. ಇಂಧನ ಬಿಕ್ಕಟ್ಟಿನಿಂದ ರೋಸಿ ಹೋಗಿರುವ ಜನರು ಲೆಬನಾನ್ನಿಂದ ವಲಸೆ ಹೋಗಲು ಮುಂದಾಗಿದ್ದು ಪಾಸ್ಪೋರ್ಟ್ ಕೋರಿ ದಿನಾ ಸುಮಾರು 5,000 ಅರ್ಜಿ ಸಲ್ಲಿಕೆಯಾಗುತ್ತಿದೆ ಎಂದು ಸರಕಾರದ ಮೂಲಗಳು ಹೇಳಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X