ರಾಜ್ಯದಲ್ಲಿಂದು 1,431ಮಂದಿಗೆ ಕೊರೋನ ದೃಢ, 21 ಮಂದಿ ಸಾವು

ಬೆಂಗಳೂರು, ಆ. 15: ರಾಜ್ಯದಲ್ಲಿ ರವಿವಾರ 1,431 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. 21 ಜನರು ಸೋಂಕಿಗೆ ಬಲಿಯಾಗಿದ್ದು, 1,611 ಜನರು ಗುಣಮುಖರಾಗಿದ್ದಾರೆ.
ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 29,29,464ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 36,979ಕ್ಕೆ ತಲುಪಿದೆ.
ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 22,497ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.
21 ಸೋಂಕಿತರು ಬಲಿ: ಬೆಳಗಾವಿ 1, ಬೆಂಗಳೂರು ನಗರ 3, ಚಿತ್ರದುರ್ಗ 2, ದಕ್ಷಿಣ ಕನ್ನಡ 4, ಹಾಸನ 3, ಕೊಡಗು 1, ಕೋಲಾರ 2, ಮಂಡ್ಯ 1, ಮೈಸೂರು 1, ಉಡುಪಿ 2, ಉತ್ತರ ಕನ್ನಡ ಜಿಲ್ಲೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ.
ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 1,431 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬಾಗಲಕೋಟೆ 2, ಬಳ್ಳಾರಿ 5, ಬೆಳಗಾವಿ 28, ಬೆಂಗಳೂರು ಗ್ರಾಮಾಂತರ 17, ಬೆಂಗಳೂರು ನಗರ 305, ಬೀದರ್ 3, ಚಾಮರಾಜನಗರ 10, ಚಿಕ್ಕಬಳ್ಳಾಪುರ 5, ಚಿಕ್ಕಮಗಳೂರು 45, ಚಿತ್ರದುರ್ಗ 20, ದಕ್ಷಿಣ ಕನ್ನಡ 311, ದಾವಣಗೆರೆ 3, ಧಾರವಾಡ 15, ಗದಗ 4, ಹಾಸನ 87, ಹಾವೇರಿ 3, ಕಲಬುರಗಿ 3, ಕೊಡಗು 82, ಕೋಲಾರ 23, ಕೊಪ್ಪಳ 1, ಮಂಡ್ಯ 32, ಮೈಸೂರು 83, ರಾಯಚೂರು 4, ರಾಮನಗರ 6, ಶಿವಮೊಗ್ಗ 41, ತುಮಕೂರು 51, ಉಡುಪಿ 177, ಉತ್ತರ ಕನ್ನಡ 64, ವಿಜಯಪುರ ಜಿಲ್ಲೆಯಲ್ಲಿ ಒಂದು ಪ್ರಕರಣ ಪತ್ತೆಯಾಗಿದೆ.
ರಾಜಧಾನಿಯಲ್ಲಿ 305 ಕೊರೋನ ಪ್ರಕರಣ ದೃಢ
ರಾಜಧಾನಿಯಲ್ಲಿ ರವಿವಾರದಂದು 305 ಜನರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, 3 ಮಂದಿ ಮೃತಪಟ್ಟಿದ್ದಾರೆ.
ನಗರದಲ್ಲಿ ಇಲ್ಲಿಯವರೆಗೆ ಒಟ್ಟು 12,32,902 ಕೊರೋನ ಸೋಂಕಿತರು ದೃಢಪಟ್ಟಿದ್ದು, ಒಟ್ಟು 15,937 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಒಟ್ಟು 12,08,798 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳಲ್ಲಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.







