Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ಯೋಗಪಟು ತನುಶ್ರೀ ಪಿತ್ರೋಡಿಯಿಂದ...

ಉಡುಪಿ: ಯೋಗಪಟು ತನುಶ್ರೀ ಪಿತ್ರೋಡಿಯಿಂದ ಏಳನೇ ವಿಶ್ವದಾಖಲೆ

43:18 ನಿಮಿಷದಲ್ಲಿ 245 ಯೋಗಾಸನ ಭಂಗಿಗಳ ಪ್ರದರ್ಶನ

ವಾರ್ತಾಭಾರತಿವಾರ್ತಾಭಾರತಿ15 Aug 2021 9:05 PM IST
share
ಉಡುಪಿ: ಯೋಗಪಟು ತನುಶ್ರೀ ಪಿತ್ರೋಡಿಯಿಂದ ಏಳನೇ ವಿಶ್ವದಾಖಲೆ

ಉಡುಪಿ, ಆ.15: ಈಗಾಗಲೇ ಆರು ವಿಶ್ವದಾಖಲೆ ಮಾಡಿರುವ ಯೋಗರತ್ನ ತನುಶ್ರೀ ಪಿತ್ರೋಡಿ(13) ಇದೀಗ ಮತ್ತೊಂದು ಸಾಧನೆ ಮೂಲಕ ಏಳನೇ ವಿಶ್ವ ದಾಖಲೆಯನ್ನು ಮಾಡಿದ್ದಾರೆ. 43 ನಿಮಿಷ 18 ಸೆಕೆಂಡ್‌ನಲ್ಲಿ 245 ಯೋಗಾಸನ ಭಂಗಿಗಳನ್ನು ಪ್ರದರ್ಶಿಸುವ ಮೂಲಕ ಗೋಲ್ಡನ್ ಬುಕ್ ಆಫ್ ರೆಕಾರ್ಡ್‌ನಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.

75ನೇ ಸ್ವಾತಂತ್ರೋತ್ಸವದ ಅಂಗವಾಗಿ ರವಿವಾರ ಉಡುಪಿ ಕೃಷ್ಣಮಠದ ರಾಜಾಂಗಣದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ತನುಶ್ರೀ ಯೋಗಾಸನದ ಕ್ಲಿಷ್ಟಕರ ಭಂಗಿಗಳನ್ನು ಪ್ರದರ್ಶಿಸಿದರು. ಇದರೊಂದಿಗೆ ಅವರು ಈ ಹಿಂದೆ ಬೇರೆಯವರ ಹೆಸರಿನಲ್ಲಿದ್ದ 1 ಗಂಟೆಯಲ್ಲಿ 145 ಆಸನಗಳ ಪ್ರದರ್ಶನದ ದಾಖಲೆಯನ್ನು ಮುರಿದ್ದಾರೆ.

ಗೋಲ್ಡನ್ ಬುಕ್ ಆಫ್ ವಲ್ಡರ್ ರೆಕಾಡ್ಸರ್ ಏಷ್ಯದ ಮುಖ್ಯಸ್ಥ ಮನೀಶ್ ಮಾತನಾಡಿ, ಈವರೆಗೆ ನೋಡಿದ ಎರಡು ಸಾವಿರ ದಾಖಲೆಗಳಲ್ಲಿ ತನುಶ್ರೀ ಈ ದಾಖಲೆ ಅದ್ಭುತವಾಗಿದೆ. ಅತ್ಯಂತ ಕ್ಲಿಷ್ಟಕರ ಭಂಗಿಗಳನ್ನು ಆಕೆ ಸಮಯಕ್ಕೂ ಮೊದಲು ಪೂರ್ಣಗೊಳಿಸಿದ್ದಾರೆ. ಈ ದಾಖಲೆ ಮುಂದೆ ಯಾರಿಂದಲೂ ಮುರಿಯಲು ಸಾಧ್ಯವಿಲ್ಲ. ಇದು ನೂರು ದಾಖಲೆಗೆ ಸಮವಾಗಿದೆ ಎಂದರು.

ತನುಶ್ರೀ ಪಿತ್ರೋಡಿ ಮಾತನಾಡಿ, ಲಾಕ್‌ಡೌನ್ ಅವಧಿಯಲ್ಲಿ 180ಕ್ಕೂ ಅಧಿಕ ಆಸನಗಳನ್ನು ಕಲಿತಿದ್ದೆ. 245 ಆಸನಗಳನ್ನು ಸತತ ಪರಿಶ್ರಮದ ಮೂಲಕ ನಿಗದಿತ ಸಮಯದ ಮಿತಿಯೊಳಗೆ ಮಾಡಲು ಸಾಧ್ಯವಾಗಿದೆ. 7ನೇ ವಿಶ್ವದಾಖಲೆಯಲ್ಲಿ ಹೆಸರು ದಾಖಲಾಗಿರುವುದು ಸಂತಸ ತಂದಿದೆ ಎಂದರು.

ಉದ್ಯಾವರ ಪಿತ್ರೋಡಿ ಉದಯ್ ಕುಮಾರ್ ಮತ್ತು ಸಂಧ್ಯಾ ದಂಪತಿಯ ಪುತ್ರಿ ತನುಶ್ರೀ ಉಡುಪಿಯ ಸೇಂಟ್ ಸಿಸಿಲಿಯ ಕನ್ನಡ ಮಾಧ್ಯಮ ಶಾಲೆಯಲ್ಲಿ 8ನೆ ತರಗತಿಯ ವಿದ್ಯಾರ್ಥಿನಿಯಾಗಿದ್ದಾಳೆ. ಪರ್ಯಾಯ ಅದಮಾರು ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ ಶುಭಾಹಾರೈಸಿದರು. ಇದೇ ಸಂದರ್ಭದಲ್ಲಿ ಭಾರತೀಯ ಯೋಧರನ್ನು ಗೌರವಿಸಲಾಯಿತು.

ಶಾಸಕರಾದ ಕೆ.ರಘುಪತಿ ಭಟ್, ಲಾಲಾಜಿ ಮೆಂಡನ್, ನಗರಸಭೆ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್, ಸದಸ್ಯೆ ರಶ್ಮೀ ಚಿತ್ರರಂಜನ್ ಭಟ್, ಜಿಪಂ ಮಾಜಿ ಸದಸ್ಯೆ ಗೀತಾಂಜಲಿ ಸುವರ್ಣ, ಪರೀಕ ಎಸ್‌ಡಿಎಂನ ಡಾ.ಶೋಭಿತ್ ಶೆಟ್ಟಿ, ಬಡಗುಬೆಟ್ಟು ಕ್ರೆಡಿಟ್ ಸೊಸೈಟಿ ಆಡಳಿತ ನಿರ್ದೇಶಕ ಜಯಕರ್ ಶೆಟ್ಟಿ ಇಂದ್ರಾಳಿ, ದಿವಾಕರ್ ಸನೀಲ್, ಯೋಗ ಗುರು ರಾಮಕೃಷ್ಣ ಕೊಡಂಚ, ನರೇಂದ್ರ ಕಾಮತ್ ಕಾರ್ಕಳ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X