Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದಲಿತರ ಭೂಮಿಯ ವಾಣಿಜ್ಯ ಪರಿವರ್ತನೆ;...

ದಲಿತರ ಭೂಮಿಯ ವಾಣಿಜ್ಯ ಪರಿವರ್ತನೆ; ಕಾನೂನು ತಿದ್ದುಪಡಿ ತರಲು ಸಚಿವ ಕೋಟಗೆ ದಸಂಸ ಮನವಿ

ವಾರ್ತಾಭಾರತಿವಾರ್ತಾಭಾರತಿ16 Aug 2021 9:53 PM IST
share
ದಲಿತರ ಭೂಮಿಯ ವಾಣಿಜ್ಯ ಪರಿವರ್ತನೆ; ಕಾನೂನು ತಿದ್ದುಪಡಿ ತರಲು ಸಚಿವ ಕೋಟಗೆ ದಸಂಸ ಮನವಿ

ಉಡುಪಿ, ಆ.16: ದಲಿತರ ಭೂಮಿಯನ್ನು ವಾಣಿಜ್ಯ ಪರಿವರ್ತನೆಗೆ ಇರುವ ನಿಬಂಧನೆಗಳನ್ನು ರದ್ದುಗೊಳಿಸಿ, ಕಾನೂನಿನಲ್ಲಿ ತಿದ್ದುಪಡಿ ತರು ವಂತೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ) ಜಿಲ್ಲಾ ಸಮಿತಿ ಶನಿವಾರ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮನವಿ ಸಲ್ಲಿಸಿತು.

ಈಗ ಇರುವ ಕಾನೂನಿನ ಪ್ರಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವರ ಭೂಮಿಯನ್ನು ಕೇವಲ ಮನೆ ನಿರ್ಮಿಸುವ ಕಾರಣಕ್ಕಾಗಿ ಕೇವಲ 10 ಸೆಂಟ್ಸ್ ಮಾತ್ರ ಪರಿವರ್ತನೆ ಮಾಡಲು ಅವಕಾಶವಿದೆ. ಇದರಿಂದ ದಲಿತರು ತಮ್ಮ ಭೂಮಿಯಲ್ಲಿ ಯಾವುದೇ ವ್ಯಾಪಾರ ವಹಿವಾಟು ಮಾಡಲು, ವಾಣಿಜ್ಯ ಕಟ್ಟಡ ಕಟ್ಟಲು ಅವಕಾಶ ಇರುವುದಿಲ್ಲ. ಈ ನಿಬಂಧನೆಯನ್ನು ರದ್ದು ಮಾಡಿದರೆ ದಲಿತರು ಕೂಡ ತಮ್ಮ ಭೂಮಿಯಲ್ಲಿ ವಾಣಿಜ್ಯ ವ್ಯವಹಾರವನ್ನು ಮಾಡಿ ಕೊಂಡು ಸ್ವಂತ ಉದ್ಯೋಗ ರೂಪಿಸಿಕೊಳ್ಳಲು ಅವಕಾಶವಾಗುತ್ತದೆ ಎಂದು ದಸಂಸ ನಿಯೋಗ ಸಚಿವರಿಗೆ ಮನದಟ್ಟು ಮಾಡಿತು.

ಸಮಾಜ ಕಲ್ಯಾಣ ಇಲಾಖೆಯಿಂದ ಮೀಸಲಿಟ್ಟಿರುವ ಎಸ್‌ಸಿಪಿ/ ಟಿಎಸ್‌ಪಿ ಅನುದಾನ ಸುಮಾರು 25000 ಕೋಟಿ ರೂ. ಹಣವನ್ನು ದಲಿತರ ಮೂಲ ಭೂತ ಸ್ವಯಂ ಅಭಿವೃದ್ಧಿಗೆ ಪೂರಕವಾದ ಶಿಕ್ಷಣ, ವಸತಿ ಮತ್ತು ಸ್ವ ಉದ್ಯೋಗ ಕ್ಕಾಗಿ ಹೆಚ್ಚಿನ ಪ್ರಮಾಣದಲ್ಲಿ ಬಳಕೆ ಮಾಡಬೇಕೆಂದು ನಿಯೋಗ ಸಚಿವರನ್ನು ಒತ್ತಾಯಿಸಿತು.

ಮನವಿಯನ್ನು ಕಾಳಜಿ ಮತ್ತು ಮುತುವರ್ಜಿಯಿಂದ ಕಾರ್ಯರೂಪಕ್ಕೆ ತರುವುದಾಗಿ ಸಚಿವರು ಭರವಸೆ ನೀಡಿದರು. ಬೆಂಗಳೂರಿನಲ್ಲಿ ಇಡೀ ರಾಜ್ಯದ ದಲಿತ ನಾಯಕರ ಸಭೆ ಕರೆದು ತಮ್ಮ ಬೇಡಿಕೆ ಮತ್ತು ಅವಶ್ಯಕತೆಗಳ ಬಗ್ಗೆ ಅಭಿಪ್ರಾಯ ಕ್ರೋಢೀಕರಿಸುವ ವ್ಯವಸ್ಥೆ ಮಾಡಲಾಗುವುದು ಎಂದು ಸಚಿವರು ತಿಳಿಸಿದರು.

ನಿಯೋಗದಲ್ಲಿ ದಸಂಸ ಜಿಲ್ಲಾ ಪ್ರಧಾನ ಸಂಚಾಲಕ ಸುಂದರ ಮಾಸ್ತರ್, ಜಿಲ್ಲಾ ಸಂಘಟನಾ ಸಂಚಾಲಕ ಶ್ಯಾಮರಾಜ್ ಬಿರ್ತಿ, ಪರಮೇಶ್ವರ ಉಪ್ಪೂರು, ಶ್ಯಾಮಸುಂದರ ತೆಕ್ಕಟ್ಟೆ, ಮಂಜುನಾಥ್ ಬಾಳ್ಕುದ್ರು, ಶ್ರೀಧರ ಕುಂಜಿಬೆಟ್ಟು, ಪದಾಧಿಕಾರಿಗಳಾದ ಶಿವಾನಂದ ಮೂಡುಬೆಟ್ಟು, ಎಸ್.ನಾರಾಯಣ, ವಡ್ಡರ್ಸೆ ಶ್ರೀನಿವಾಸ, ಶಿವಾನಂದ ಬಿರ್ತಿ, ಆನಿಲ ಬಿರ್ತಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X