ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರೈತರ ಕ್ಷಮೆ ಕೇಳಲಿ: ಶಾಸಕ ಸಾ.ರಾ.ಮಹೇಶ್ ಒತ್ತಾಯ
ಬೆಂಗಳೂರು, ಆ.17: ಪ್ರತಿಭಟನಾನಿರತ ರೈತರ ಬಗ್ಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನೀಡಿರುವ ಹೇಳಿಕೆಯನ್ನು ವಾಪಸ್ ಪಡೆದು ಕ್ಷಮೆಯಾಚಿಸಬೇಕು ಎಂದು ಮಾಜಿ ಸಚಿವ ಸಾ.ರಾ.ಮಹೇಶ್ ಹಾಗೂ ಮಾಜಿ ಶಾಸಕ ಕೋನರೆಡ್ಡಿ ಒತ್ತಾಯಿಸಿದ್ದಾರೆ.
ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಾ.ರಾ.ಮಹೇಶ್ ಅವರು, ಕೇಂದ್ರ ಸರಕಾರದ ಕೃಷಿ ಕಾಯ್ದೆ ಸರಿಯಾಗಿದ್ದರೆ ರೈತರಿಗೆ ಮನವರಿಕೆ ಮಾಡಿಕೊಡಬೇಕು, ಹೋರಾಟನಿರತ ರೈತರನ್ನು ದಲ್ಲಾಳಿಗಳು ಎಂದು ಕರೆದಿರುವುದು ಸರಿಯಲ್ಲ. ಇಂದು ಖಂಡನೀಯ ಎಂದರು.
ಪ್ರತಿಭಟನಾನಿರತ ರೈತರೊಂದಿಗೆ ಸಮಾಲೋಚನೆ ನಡೆಸುವಂತೆ ಪ್ರಧಾನಿ ಮೋದಿ ಅವರಿಗೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಪತ್ರ ಬರೆದಿದ್ದಾರೆ ಎಂದು ಹೇಳಿದರು.
ಕೋನರೆಡ್ಡಿ ಮಾತನಾಡಿ, ದೇಶಾದ್ಯಂತ ರೈತ ವಿರೋಧಿ ಕಾನೂನಿನ ವಿರುದ್ಧ ಹೋರಾಟ ಮಾಡಲಾಗುತ್ತಿದೆ. ಕೇಂದ್ರದ ಕೃಷಿ ಸಚಿವರು ರೈತರ ಬಗ್ಗೆ ನೀಡಿರುವ ಹೇಳಿಕೆ ಖಂಡನಾರ್ಹ. ಇಂಥ ಹೇಳಿಕೆಯನ್ನು ಕೂಡಲೇ ಅವರು ವಾಪಸ್ ಪಡೆದು ರೈತರ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.
Next Story