Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದೇಶದಲ್ಲಿ ಹಿಂದುಳಿದವರ ಮತ್ತು ದಲಿತರ ಹೊಸ...

ದೇಶದಲ್ಲಿ ಹಿಂದುಳಿದವರ ಮತ್ತು ದಲಿತರ ಹೊಸ ಯುಗ ಆರಂಭ: ಕೇಂದ್ರ ಸಚಿವ ಎ.ನಾರಾಯಣಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ17 Aug 2021 7:36 PM IST
share
ದೇಶದಲ್ಲಿ ಹಿಂದುಳಿದವರ ಮತ್ತು ದಲಿತರ ಹೊಸ ಯುಗ ಆರಂಭ: ಕೇಂದ್ರ ಸಚಿವ ಎ.ನಾರಾಯಣಸ್ವಾಮಿ

ಬೆಂಗಳೂರು, ಆ.17: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟದ ವಿಸ್ತರಣೆ ಮೂಲಕ ದೇಶದಲ್ಲಿ ಹಿಂದುಳಿದವರ ಮತ್ತು ದಲಿತರ ಹೊಸ ಯುಗ ಆರಂಭವಾಗಿದೆ ಎಂದು ಕೇಂದ್ರ ಸಮಾಜ ಕಲ್ಯಾಣ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ವಿಶ್ಲೇಷಿಸಿದರು.

ಮಂಗಳವಾರ ಜನಾಶೀರ್ವಾದ ಯಾತ್ರೆ ಹಿನ್ನೆಲೆಯಲ್ಲಿ ನೆಲಮಂಗಲದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ ಎರಡನೇ ಬಾರಿ ಮಂತ್ರಿಮಂಡಲ ವಿಸ್ತರಣೆ ಮಾಡಿದಾಗ ಎಸ್ಸಿ-12, ಎಸ್ಟಿ-6, ಪರಿಶಿಷ್ಟ ಪಂಗಡದ(ಟ್ರೈಬಲ್) ಇಬ್ಬರಿಗೆ ಸೇರಿದಂತೆ 20 ಮಂದಿಗೆ ಸಚಿವರಾಗುವ ಅವಕಾಶ ನೀಡಿದರು ಎಂದರು.

ರಾಜ್ಯದಲ್ಲಿ ಹಿಂದೆ ಕೇಂದ್ರದ ಇಬ್ಬರು ಸಚಿವರಿದ್ದರು. ಈಗ ಮತ್ತೆ ನಾಲ್ವರಿಗೆ ಸಚಿವರಾಗುವ ಅವಕಾಶ ಲಭಿಸಿದ್ದು, ಅದಕ್ಕಾಗಿ ಪ್ರಧಾನಿಗೆ ಕೃತಜ್ಞತೆ ಸಮರ್ಪಿಸುತ್ತೇನೆ. ನೂತನ ಸಚಿವರನ್ನು ಸದನಕ್ಕೆ ಪರಿಚಯಿಸಿ ದೇಶಕ್ಕೆ ಪರಿಚಯಿಸುವುದು ಸತ್ ಸಂಪ್ರದಾಯ. ಅದಕ್ಕೆ ವಿರೋಧ ಪಕ್ಷದವರು ಅವಕಾಶ ಮಾಡಿಕೊಟ್ಟಿಲ್ಲ. ಕಾಂಗ್ರೆಸ್‍ನವರು ಸದನ ನಡೆಯದಂತೆ ನೋಡಿಕೊಂಡರು. ಇದೇ ಕಾರಣಕ್ಕೆ ನೂತನ ಸಚಿವರ ಪರಿಚಯವನ್ನು ಜನಾಶೀರ್ವಾದದ ಮೂಲಕ ಮಾಡಿಕೊಡಲು ಪ್ರಧಾನಿ ಮತ್ತು ಪಕ್ಷದ ಮುಖಂಡರು ಮುಂದಾಗಿದ್ದಾರೆ ಎಂದು ಅವರು ವಿವರಿಸಿದರು.

ಕೇಂದ್ರ ಸರಕಾರದ ಏಳು ವರ್ಷಗಳ ಸಾಧನೆ, ಬಿಜೆಪಿಯ ರಾಜ್ಯ ಸರಕಾರಗಳ ಸಾಧನೆ, ಸಚಿವರಾಗಿ ತಮ್ಮ ಖಾತೆಯಿಂದ ಲಭಿಸಲಿರುವ ಸೌಲಭ್ಯಗಳ ಕಿರು ಪರಿಚಯ ಮಾಡಿಕೊಡಲು ಈ ಯಾತ್ರೆಯನ್ನು ಬಳಸಲು ತಿಳಿಸಿದ್ದಾರೆ. ಪಕ್ಷದ ಸಂದೇಶದಂತೆ ಸಚಿವರು, ಇತರ ಜನಪ್ರತಿನಿಧಗಳು, ಪಕ್ಷದ ಪದಾಧಿಕಾರಿಗಳ ಜೊತೆಗೂಡಿ ಜನಾಶೀರ್ವಾದ ಯಾತ್ರೆ ನಡೆಸಲಾಗುತ್ತಿದೆ ಎಂದು ನಾರಾಯಣಸ್ವಾಮಿ ಹೇಳಿದರು.

56 ವರ್ಷಗಳ ಕಾಂಗ್ರೆಸ್ ಆಡಳಿತ, ಅನೇಕ ಪ್ರಧಾನಮಂತ್ರಿಗಳ ಕಾರ್ಯವೈಖರಿಯನ್ನು ನಾವು ನೋಡಿದ್ದೇವೆ. ಹಿಂದೆ ಫೇಸ್‍ಬುಕ್, ಇಲೆಕ್ಟ್ರಾನಿಕ್ ಮೀಡಿಯಾಗಳು ಇರಲಿಲ್ಲ. ಆದರೆ, ಹಿಂದೆ ಮುದ್ರಣ ಮಾಧ್ಯಮಗಳಲ್ಲಿ ವಿದೇಶಗಳಲ್ಲಿ ಪ್ರಧಾನಿಗಳ ನಾಯಕರ ಭೇಟಿ, ಊಟ, ವಿಹಾರದ ಕುರಿತ ಸುದ್ದಿಗಳು ಇರುತ್ತಿದ್ದವು. ಸ್ವಾತಂತ್ರ್ಯ ತಂದು ಕೊಟ್ಟವರು ನಾವೇ, ದಲಿತರ ಉದ್ಧಾರ ಮಾಡುತ್ತೇವೆ, ಅಲ್ಪಸಂಖ್ಯಾತರ ರಕ್ಷಣೆ ಮಾಡುತ್ತೇವೆ-ಮತ ಕೊಡಿ ಎಂದು ಕೇಳುತ್ತಿದ್ದರು. ಆದರೆ, ಅಭಿವೃದ್ಧಿ ಎಂಬುದು ಕೇವಲ ಕನಸಾಗಿಯೇ ಇತ್ತು ಎಂದು ಅವರು ತಿಳಿಸಿದರು.
ಸುಮಾರು 5 ದಶಕಕ್ಕೂ ಹೆಚ್ಚು ಕಾಲ ಈಶಾನ್ಯ ರಾಜ್ಯಗಳಿಗೆ ರೈಲ್ವೆ, ವಿಮಾನಗಳ ಸಂಪರ್ಕ ಇರಲಿಲ್ಲ. ಈ ರಾಜ್ಯಗಳ ಕಡೆ ವಿಶೇಷ ಗಮನ ಕೊಟ್ಟ ನರೇಂದ್ರ ಮೋದಿ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ ಎಂದು ಅವರು ವಿವರಿಸಿದರು.

ನರೇಂದ್ರ ಮೋದಿ ಅವರ ಆಡಳಿತದಲ್ಲಿ ದೇಶದ ಪ್ರತಿಯೊಬ್ಬ ನಾಗರಿಕನ ಮನೆಯಲ್ಲಿ ಶೌಚಾಲಯ ಇರುವಂತಾಗುವ ಸ್ವಚ್ಛ ಭಾರತ ಯೋಜನೆ, ಎಲ್ಲ ಹಳ್ಳಿಗಳಿಗೂ ವಿದ್ಯುತ್ ಸಂಪರ್ಕ ಕಲ್ಪಿಸುವ ಉಜಾಲಾ ಯೋಜನೆ, ವಿದ್ಯುತ್ ಸ್ವಾವಲಂಬಿತನ ಸಾಧ್ಯವಾಗಿದೆ. ವಸತಿ ಯೋಜನೆಯಲ್ಲೂ ಕ್ರಾಂತಿ ನಡೆದಿದೆ. ಫಸಲ್ ಬಿಮಾ ಯೋಜನೆ, ರೈತ ಸಮ್ಮಾನ್ ಯೋಜನೆ ಸೇರಿದಂತೆ ಅನೇಕ ಪ್ರಗತಿಗೆ ಪೂರಕವಾದ ಯೋಜನೆಗಳನ್ನು ಕೇಂದ್ರ ಸರಕಾರ ಜಾರಿಗೊಳಿಸಿದೆ ಎಂದು ಅವರು ತಿಳಿಸಿದರು.

ಹಿಂದೆ ರಾಜ್ಯದಲ್ಲಿ ಸಚಿವನಾಗಿದ್ದಾಗ ದಲಿತರು-ಹಿಂದುಳಿದವರ ಏಳಿಗೆಗೆ ಶ್ರಮಿಸಿದ್ದೇನೆ. ಕೇಂದ್ರ ಸಚಿವನಾಗಿ ಹಿಂದುಳಿದವರು ಮತ್ತು ದಲಿತರ ಅಭಿವೃದ್ಧಿಗೆ ಪ್ರಾಮಾಣಿಕತೆಯಿಂದ ಶ್ರಮಿಸಲಿದ್ದೇನೆ. ದೇಶದಾದ್ಯಂತ ಐಎಎಸ್, ಐಪಿಎಸ್ ಅಧಿಕಾರಿಗಳ ಕೊರತೆ ಇದೆ. ಆ ಕೊರತೆಯನ್ನು ನೀಗಿಸಬೇಕಿದೆ. ಆಡಳಿತ ವ್ಯವಸ್ಥೆಯಲ್ಲಿ ದಲಿತರ ಸಹಭಾಗಿತ್ವ ಬೇಕಿದೆ. ಆ ನಿಟ್ಟಿನಲ್ಲಿ ಐಎಎಸ್ ಕೋಚಿಂಗ್ ಅನ್ನು ಎಲ್ಲ ರಾಜ್ಯಗಳ ಪ್ರಮುಖ ವಿಶ್ವವಿದ್ಯಾನಿಲಯಗಳಲ್ಲಿ ಆರಂಭಿಸಲಾಗುವುದು. ತಲಾ 100 ಜನರಿಗೆ ಕೋಚಿಂಗ್ ಕೊಡಲಾಗುವುದು ಎಂದು ನಾರಾಯಣಸ್ವಾಮಿ ಹೇಳಿದರು.

ಎಲ್ಲ ಮೀಸಲು ಲೋಕಸಭಾ ಕ್ಷೇತ್ರಗಳಲ್ಲಿ ಅಂಬೇಡ್ಕರ್ ನವೋದಯ ಶಾಲೆಗಳನ್ನು ಆರಂಭಿಸಲಾಗುವುದು. ಸ್ಕಿಲ್ ಇಂಡಿಯಾದಡಿ ತಾಂತ್ರಿಕ ಶಿಕ್ಷಣವನ್ನೂ ನೀಡಲಾಗುವುದು ಎಂದು ಅವರು ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ರಾಜ್ಯದ ಸಚಿವ ಎಂ.ಟಿ.ಬಿ.ನಾಗರಾಜ್, ರಾಜ್ಯ ಕಾರ್ಯದರ್ಶಿ ಕೆ.ಎಸ್.ನವೀನ್, ಜಿಲ್ಲಾಧ್ಯಕ್ಷ ರಾಮಲಿಂಗಪ್ಪ, ಪಕ್ಷದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X