ಆ. 22: ಶಿಕ್ಷಕರ ಅರ್ಹತಾ ಪರೀಕ್ಷೆ
ಮಂಗಳೂರು, ಆ.19: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯು ಆ.22ರಂದು ಬೆಳಗ್ಗೆ 9:30ರಿಂದ 12 ಮತ್ತು ಮಧ್ಯಾಹ್ನ 2 ರಿಂದ 4:30ರವರೆಗೆ ನಗರದ 15 ಕೇಂದ್ರಗಳಲ್ಲಿ ನಡೆಯಲಿದೆ.
ಪರೀಕ್ಷಾ ಕೇಂದ್ರಗಳಿಗೆ ಪ್ರವೇಶ ಪತ್ರದೊಂದಿಗೆ ನಿಗದಿತ ಸಮಯಕ್ಕೆ ಹಾಜರಾಗಬೇಕು. ಇಲೆಕ್ಟ್ರಾನಿಕ್ ಉಪಕರಣಗಳು ಮತ್ತು ಇಲೆಕ್ಟ್ರಾನಿಕ್ ಗಡಿಯಾರ ತರುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ. ಮಾಸ್ಕ್ ಧರಿಸಿಕೊಂಡು, ಸ್ಯಾನಿಟೈಸರ್ ಮತ್ತು ನೀರಿನ ಬಾಟಲಿ ತೆಗೆದುಕೊಂಡು ಬರಬೇಕು.
ಕೇರಳ, ಮಹಾರಾಷ್ಟ್ರ ಮತ್ತಿತರ ಹೊರ ರಾಜ್ಯಗಳಿಂದ ಬರುವ ಪರೀಕ್ಷಾರ್ಥಿಗಳು ಕೋವಿಡ್-19 ಆರ್ಎಟಿ. ಅಥವಾ ಆರ್ಟಿಪಿಸಿಆರ್ ಪರೀಕ್ಷೆ ಮಾಡಿಸಿಕೊಂಡು ವರದಿಯನ್ನು ಪರೀಕ್ಷಾ ಕೇಂದ್ರದ ಮುಖ್ಯಸ್ಥರ ಪರಿಶೀಲನೆಗೆ ಕಡ್ಡಾಯವಾಗಿ ನೀಡಬೇಕು. ಮಾಹಿತಿಗೆ ನೋಡಲ್ ಅಧಿಕಾರಿಯ (ಮೊ.ಸಂ: 9481848647)ನ್ನು ಸಂಪರ್ಕಿಸಬಹುದು ಎಂದು ಡಿಡಿಪಿಐ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story