ಸ್ನೇಹದೀಪದ ಆಶ್ರಮವಾಸಿಗಳಿಗೆ ದಿನಸಿ ಕಿಟ್ ವಿತರಣೆ
ಮಂಗಳೂರು, ಆ.21: ಮಂಗಳೂರು ನಗರ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿಯ ವತಿಯಿಂದ ಮಾಜಿ ಪ್ರಧಾನಿ ದಿ.ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ದಿ.ದೇವರಾಜ ಅರಸು ಅವರ ಜನ್ಮದಿನಾಚರಣೆಯನ್ನು ನಗರದ ಕಾಪಿಕಾಡ್ ಬಳಿಯಿರುವ ಸ್ನೇಹ ದೀಪದ ಆಶ್ರಮದಲ್ಲಿ ಆಶ್ರಮವಾಸಿಗಳಿಗೆ ದಿನಸಿ ಕಿಟ್ಗಳನ್ನು ವಿತರಿಸುವ ಮೂಲಕ ಆಚರಿಸಲಾಯಿತು.
ಈ ಸಂದರ್ಭ ಬ್ಲಾಕ್ ಕಾಂಗ್ರೆಸ್ನ ಅಧ್ಯಕ್ಷ ಪ್ರಕಾಶ್ ಬಿ. ಸಾಲ್ಯಾನ್, ಮಾಜಿ ಮೇಯರ್ ಮಹಾಬಲ ಮಾರ್ಲ, ಮಾಜಿ ಉಪಮೇಯರ್ ರಜನೀಶ್ ಕಾಪಿಕಾಡ್, ಸ್ನೇಹ ದೀಪ ಆಶ್ರಮದ ಅಧ್ಯಕ್ಷೆ ತಬಸ್ಸುಂ, ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಪ್ರಕಾಶ್ ಬಿ.ಸಾಲ್ಯಾನ್, ನಗರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ರಾಕೇಶ್ ದೇವಾಡಿಗ, ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷ ಲಾರೆನ್ಸ್ ಡಿಸೋಜ, ನಗರ ಬ್ಲಾಕ್ ಪ್ರಧಾನ ಕಾರ್ಯದರ್ಶಿ ಯೋಗೀಶ್ ನಾಯಕ್, ನಗರ ಬ್ಲಾಕ್ ಕಾರ್ಮಿಕ ಘಟಕದ ಅಧ್ಯಕ್ಷ ಜಯರಾಜ್ ಕೋಟ್ಯಾನ್,ವಾರ್ಡ್ ಅಧ್ಯಕ್ಷ ರಾಜೇಂದ್ರ ಚಿಲಿಂಬಿ, ಕಾರ್ಪೊರೇಟರ್ಪ್ರವೀಣ್ಚಂದ್ರ ಆಳ್ವ, ಅನಿಲ್ ಕುಮಾರ್, ನಗರ ಬ್ಲಾಕ್ ಕಿಸಾನ್ ಘಟಕದ ಅಧ್ಯಕ್ಷ ರಿತೇಶ್ ಅಂಚನ್, ನಗರ ಬ್ಲಾಕ್ ಪರಿಶಿಷ್ಟ ಘಟಕದ ಅಧ್ಯಕ್ಷ ಮಿಥುನ ಉರ್ವ, ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿ ನೀರಜ್ ಪಾಲ್, ಲಕ್ಷ್ಮಣ್ ಶೆಟ್ಟಿ, ಗಿರೀಶ್ ಶೆಟ್ಟಿ, ಶೇಕ್ ಕೈಫ್, ಉದಯ್ ಆಚಾರ್, ಫಯಾಝ್, ಇಸ್ಮಾಯಿಲ್, ಕ್ಲಿಫರ್ಡ್ ಸೋನ್ಸ್, ಸಂಶುದ್ದೀನ್ ಬಂದರ್ ಉಪಸ್ಥಿತರಿದ್ದರು.
ಯುವ ಕಾಂಗ್ರೆಸ್ ಅಧ್ಯಕ್ಷ ರಾಕೇಶ್ ದೇವಾಡಿಗ ಸ್ವಾಗತಿಸಿದರು. ವಾರ್ಡ್ ಅಧ್ಯಕ್ಷ ರಾಜೇಂದ್ರ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಸಮರ್ಥ ಭಟ್ ವಂದಿಸಿದರು.