Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಐಟಿ ಪೋರ್ಟಲ್ ನಲ್ಲಿಯ ತೊಡಕುಗಳ ಬಗ್ಗೆ...

ಐಟಿ ಪೋರ್ಟಲ್ ನಲ್ಲಿಯ ತೊಡಕುಗಳ ಬಗ್ಗೆ ವಿವರಣೆ ನೀಡಲು ಇನ್ಫೋಸಿಸ್ ಸಿಇಒಗೆ ಸರಕಾರದ ಬುಲಾವ್

ವಾರ್ತಾಭಾರತಿವಾರ್ತಾಭಾರತಿ22 Aug 2021 10:14 PM IST
share

ಹೊಸದಿಲ್ಲಿ, ಆ.22: ಕಳೆದ ಜೂನ್ ನಿಂದ ಬಳಕೆಯಲ್ಲಿರುವ ನೂತನ ಆದಾಯ ತೆರಿಗೆ ಇ-ಫೈಲಿಂಗ್ ಪೋರ್ಟಲ್ನಲ್ಲಿಯ ತೊಡಕುಗಳ ಬಗ್ಗೆ ಸೋಮವಾರ,ಆ.23ರಂದು ತನ್ನೆದುರು ಖುದ್ದಾಗಿ ಹಾಜರಾಗಿ ವಿವರಣೆ ನೀಡುವಂತೆ ವಿತ್ತ ಸಚಿವಾಲಯವು ಇನ್ಫೋಸಿಸ್ ಸಿಇಒ ಸಲಿಲ್ ಪಾರೇಖ್ ಅವರಿಗೆ ಸೂಚಿಸಿದೆ. ಇದಕ್ಕೂ ಮುನ್ನ ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಅವರು ಈ ವಿಷಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು. ಪೋರ್ಟಲ್ ಅನ್ನು ‘ಹೆಚ್ಚು ಮಾನವೀಯ ಮತ್ತು ಬಳಕೆದಾರ ಸ್ನೇಹಿ’ಯನ್ನಾಗಿಸುವ ಹೊಣೆಯನ್ನು ಪಾರೇಖ್ ಮತ್ತು ಇನ್ಫೋಸಿಸ್ ನ ಹಿರಿಯ ಅಧಿಕಾರಿ ಪ್ರವೀಣ ರಾವ್ ಅವರಿಗೆ ವಹಿಸಲಾಗಿತ್ತು ಎಂದು ವಿತ್ತಸಚಿವಾಲಯವು ಹೇಳಿತ್ತು.
‘ನೂತನ ಇ-ಫೈಲಿಂಗ್ ಪೋರ್ಟಲ್ ಆರಂಭಗೊಂಡು ಎರಡೂವರೆ ತಿಂಗಳುಗಳು ಕಳೆದರೂ ಅದರಲ್ಲಿಯ ದೋಷಗಳನ್ನು ಏಕೆ ನಿವಾರಿಸಿಲ್ಲ ಎನ್ನುವುದನ್ನು ಸೀತಾರಾಮನ್ ಅವರಿಗೆ ಖುದ್ದಾಗಿ ವಿವರಿಸುವಂತೆ ಪಾರೇಖ್ಗೆ ಸೂಚಿಸಲಾಗಿದೆ. ವಾಸ್ತವದಲ್ಲಿ ಆ.21ರಿಂದ ಪೋರ್ಟಲ್ ಲಭ್ಯವಾಗುತ್ತಿಲ್ಲ ’ಎಂದು ಆದಾಯ ತೆರಿಗೆ ಸಚಿವಾಲಯವು ಟ್ವೀಟಿಸಿದೆ.
ಇನ್ಫೋಸಿಸ್ ವಿನ್ಯಾಸಗೊಳಿಸಿರುವ ಪೋರ್ಟಲ್ ಕಾರ್ಯಾರಂಭ ಮಾಡಿದ ಬಳಿಕ ಅದರಲ್ಲಿ ಹಲವಾರು ತಾಂತ್ರಿಕ ಸಮಸ್ಯೆಗಳಿರುವುದು ಕಂಡು ಬಂದಿತ್ತು. ಬಳಕೆದಾರರು ತಾಣದ ಸ್ಕ್ರೀನ್ ಶಾಟ್ ಗಳನ್ನು ಟ್ವೀಟಿಸುವ ಮತ್ತು ಸೀತಾರಾಮನ್ ಅವರಿಗೆ ಟ್ಯಾಗ್ ಮಾಡುವ ಮೂಲಕ ಈ ಬಗ್ಗೆ ದೂರಿಕೊಂಡಿದ್ದರು.
ಪ್ರೊಫೈಲ್ ಪರಿಷ್ಕರಣೆ ಅಥವಾ ಪಾಸ್ವರ್ಡ್ ಬದಲಾವಣೆಯಂತಹ ಸರಳ ಕಾರ್ಯಗಳೂ ಸಮಸ್ಯೆಯಾಗುತ್ತಿದ್ದು,ಪೋರ್ಟಲ್ ಅತ್ಯಂತ ನಿಧಾನವಾಗಿ ಕೆಲಸ ಮಾಡುತ್ತಿದೆ ಮತ್ತು ಲಾಗಿನ್ ಆಗಲು ತುಂಬ ಸಮಯವನ್ನು ತೆಗೆದುಕೊಳ್ಳುತ್ತಿದೆ ಎಂದೂ ಹಲವಾರು ಬಳಕೆದಾರರು ದೂರಿದ್ದರು.
ಪೋರ್ಟಲ್ ಅಭಿವೃದ್ಧಿಗಾಗಿ ಸರಕಾರವು 2019 ಜನವರಿಯಿಂದ 2021 ಜೂನ್ ನಡುವಿನ ಅವಧಿಯಲ್ಲಿ ಇನ್ಫೋಸಿಸ್ ಗೆ 164.5 ಕೋ.ರೂ.ಗಳನ್ನು ಪಾವತಿಸಿದೆ.
ತೆರಿಗೆದಾರರಿಗೆ ತೊಂದರೆಯಾಗುತ್ತಿರುವುದರಿಂದ ಇನ್ನಷ್ಟು ವಿಳಂಬಿಸದೆ ಎಲ್ಲ ಸಮಸ್ಯೆಗಳನ್ನು ಬಗೆಹರಿಸುವಂತೆ,ತಮ್ಮ ಸೇವೆಗಳನ್ನು ಉತ್ತಮಗೊಳಿಸುವಂತೆ ಮತ್ತು ದೂರುಗಳನ್ನು ಆದ್ಯತೆಯ ನೆಲೆಯಲ್ಲಿ ನಿವಾರಿಸುವಂತೆ ಇನ್ಫೋಸಿಸ್ಗೆ ಸೂಚಿಸಲಾಗಿತ್ತು ಎಂದು ಸಚಿವಾಲಯವು ತಿಳಿಸಿದೆ. ಇನ್ಫೋಸಿಸ್ ನ ಕಾರ್ಯ ನಿರ್ವಾಹಕೇತರ ಅಧ್ಯಕ್ಷ ನಂದನ ನಿಲೇಕಣಿ ಅವರು ಈವರೆಗೆ ಸೀತಾರಾಮನ್ ಅವರಿಗೆ ವಾರಕ್ಕೊವ್ಮೆು ವರದಿಯನ್ನು ಸಲ್ಲಿಸುತ್ತಿದ್ದರು. ತಾಂತ್ರಿಕ ದೋಷಗಳ ಬಗ್ಗೆ ವಿಷಾದ ವ್ಯಕ್ತಪಡಿಸಿರುವ ಅವರು,ಕೆಲವೇ ದಿನಗಳಲ್ಲಿ ಸಮಸ್ಯೆಗಳನ್ನು ಬಗೆಹರಿಸಲಾಗುವುದು ಎಂದು ಹೇಳಿದ್ದಾರೆ.
-

share
ವಾರ್ತಾಭಾರತಿ
ವಾರ್ತಾಭಾರತಿ
Next Story
X