Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕುಂಭಮೇಳದ ವೇಳೆ ನಕಲಿ ಕೋವಿಡ್ ಪರೀಕ್ಷೆ...

ಕುಂಭಮೇಳದ ವೇಳೆ ನಕಲಿ ಕೋವಿಡ್ ಪರೀಕ್ಷೆ ನಡೆಸಿದ ಆರೋಪಕ್ಕೊಳಗಾದ 2 ಲ್ಯಾಬ್ ಗಳು ಐಸಿಎಂಆರ್ ನ ಅನುಮೋದಿತ ಪಟ್ಟಿಯಲ್ಲಿ!

ವಾರ್ತಾಭಾರತಿವಾರ್ತಾಭಾರತಿ22 Aug 2021 11:49 PM IST
share
ಕುಂಭಮೇಳದ ವೇಳೆ ನಕಲಿ ಕೋವಿಡ್ ಪರೀಕ್ಷೆ ನಡೆಸಿದ ಆರೋಪಕ್ಕೊಳಗಾದ 2 ಲ್ಯಾಬ್ ಗಳು ಐಸಿಎಂಆರ್ ನ ಅನುಮೋದಿತ ಪಟ್ಟಿಯಲ್ಲಿ!

ಹೊಸದಿಲ್ಲಿ, ಆ. 22: ಉತ್ತರಾಖಂಡದ ಹರಿದ್ವಾರ ಜಿಲ್ಲೆಯಲ್ಲಿ ಎಪ್ರಿಲ್ನಲ್ಲಿ ಕುಂಭ ಮೇಳ ನಡೆದ ಸಂದರ್ಭ ಕೋವಿಡ್ ಪರೀಕ್ಷೆಯ ನಕಲಿ ನೋಂದಣಿ ಮಾಡಿದ ಆರೋಪಕ್ಕೊಳಗಾದ ಎರಡು ಪ್ರಯೋಗಾಲಯಗಳು ಭಾರತೀಯ ವೈದ್ಯಕೀಯ ಸಂಶೋಧನ ಮಂಡಳಿ (ಐಸಿಎಂಆರ್)ಯ ಅನುಮೋದಿತ ಪ್ರಯೋಗಶಾಲೆಗಳ ಪಟ್ಟಿಯಲ್ಲಿ ಮುಂದುವರಿದಿರುವುದು ಬೆಳಕಿಗೆ ಬಂದಿದೆ.

ತಾನು ಕೋವಿಡ್ ಪರೀಕ್ಷೆಗೆ ಒಳಗಾಗದಿದ್ದರೂ ಕೋವಿಡ್ ಪರೀಕ್ಷೆಯ ವರದಿ ಪಡೆದುಕೊಳ್ಳುವಂತೆ ಸಂದೇಶ ಸ್ವೀಕರಿಸಿದ್ದೆ ಎಂದು ಫರೀದ್ ಕೋಟದ ನಿವಾಸಿಯೊಬ್ಬರು ಸಂಬಂಧಿಸಿದ ಪ್ರಾಧಿಕಾರಕ್ಕೆ ದೂರು ಸಲ್ಲಿಸಿದ ಬಳಿಕ ಎಪ್ರಿಲ್ ಅಂತ್ಯದಲ್ಲಿ ಕುಂಭ ಮೇಳದಲ್ಲಿ ನಕಲಿ ಕೋವಿಡ್ ಪರೀಕ್ಷೆ ನಡೆಸಿರುವುದು ಬೆಳಕಿಗೆ ಬಂದಿತ್ತು. ಈ ದೂರಿನ ಹಿನ್ನೆಲೆಯಲ್ಲಿ ನಡೆದ ತನಿಖೆಯಲ್ಲಿ 1 ಲಕ್ಷ ನಕಲಿ ಆ್ಯಂಟಿಜನ್ ಪರೀಕ್ಷೆ ನಡೆಸಿರುವುದು ಕೂಡ ಬಹಿರಂಗಗೊಂಡಿತ್ತು.

ದಿಲ್ಲಿ ಮೂಲದ ಲಾಲ್ ಚಂದಾನಿ ಲ್ಯಾಬ್ಸ್, ಹಿಸ್ಸಾರ್ ಮೂಲದ ನಲ್ವಾ ಲ್ಯಾಬ್ಸ್ ಹಾಗೂ ನೋಯ್ಡ್ ಮೂಲದ ಖಾಸಗಿ ಸಂಸ್ಥೆ ಮ್ಯಾಕ್ಸ್ ಕಾರ್ಪೋರೇಟ್ ಸರ್ವೀಸಸ್- ಈ ಮೂರು ಸಂಸ್ಥೆಗಳ ವಿರುದ್ಧ ಭಾರತೀಯ ದಂಡ ಸಂಹಿತೆ, ವಿಪತ್ತು ನಿರ್ವಹಣಾ ಕಾಯ್ದೆ, ಸಾಂಕ್ರಾಮಿಕ ರೋಗಗಳ ಕಾಯ್ದೆಯ ವಿವಿಧ ಕಲಂಗಳ ಅಡಿಯಲ್ಲಿ ಕಳೆದ ವಾರ ಪ್ರಕರಣ ದಾಖಲಿಸಲಾಗಿತ್ತು.

ದಿನಗಳ ಬಳಿಕ ಮೂರು ಸಂಸ್ಥೆಗಳು ಎಫ್ಐಆರ್ ರದ್ದುಗೊಳಿಸುವಂತೆ ಹಾಗೂ ಆರೋಪ ನಿರಾಕರಿಸಿ ಪ್ರತ್ಯೇಕವಾಗಿ ಉಚ್ಚ ನ್ಯಾಯಾಲಯವನ್ನು ಸಂಪರ್ಕಿಸಿದ್ದವು.

ಪ್ರಸ್ತುತ ಮೂರು ಲ್ಯಾಬ್ ಗಳ ಬಗ್ಗೆ ಪೊಲೀಸರು, ಜಿಲ್ಲಾಡಳಿತ ಹಾಗೂ ಕುಂಭ ಮೇಲಾಡಳಿತ ಪ್ರತ್ಯೇಕವಾಗಿ ತನಿಖೆ ನಡೆಸುತ್ತಿವೆ.

ಉತ್ತರಾಖಂಡ ಸರಕಾರದಿಂದ ನಿಯೋಜಿತವಾಗಿದ್ದ ಮ್ಯಾಕ್ಸ್ ಕಾರ್ಪೊರೇಟ್ ಸರ್ವೀಸಸ್ ಕೋವಿಡ್ ಪರೀಕ್ಷೆಗಳನ್ನು ಆರೋಪಕ್ಕೆ ಒಳಗಾದ ಲ್ಯಾಬ್ ಗಳಿಗೆ ಹೊರ ಗುತ್ತಿಗೆ ನೀಡುತ್ತಿತ್ತು. ಮ್ಯಾಕ್ಸ್ ಕಾರ್ಪೊರೇಟ್ ಸರ್ವೀಸಸ್‌ ಗೆ ಲ್ಯಾಬ್ ಇಲ್ಲ ಹಾಗೂ ಅದು ಐಸಿಎಂಆರ್ನಿಂದ ಅಂಗೀಕೃತಗೊಂಡಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X