ಉಪ್ಪಿನಂಗಡಿ: ಮೀನು ಮಾರಾಟದ ಗೂಡಂಗಡಿಗೆ ಬೆಂಕಿ
![ಉಪ್ಪಿನಂಗಡಿ: ಮೀನು ಮಾರಾಟದ ಗೂಡಂಗಡಿಗೆ ಬೆಂಕಿ ಉಪ್ಪಿನಂಗಡಿ: ಮೀನು ಮಾರಾಟದ ಗೂಡಂಗಡಿಗೆ ಬೆಂಕಿ](https://www.varthabharati.in/sites/default/files/images/articles/2021/08/23/303693-1629690567.gif)
ಉಪ್ಪಿನಂಗಡಿ, ಆ.23: ಇಲ್ಲಿನ ಹಳೆಗೇಟು ಬಳಿ ಇರುವ ಮೀನು ಮಾರಾಟದ ಗೂಡಂಗಡಿಯೊಂದು ರವಿವಾರ ತಡರಾತ್ರಿ ಬೆಂಕಿಗಾಹುತಿಯಾಗಿದ್ದು, ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.
ಇಲ್ಲಿನ ಹಳೆಗೇಟು ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ ಬಳಿ ಅಶೋಕ್ ಎಂಬವರಿಗೆ ಸೇರಿದ ಅಂಗಡಿ ಇದಾಗಿದೆ. ಘಟನೆಯಿಂದ ಮೀನಿನ ಅಂಗಡಿ ಹಾಗೂ ಮಂಜುಗಡ್ಡೆ ಹಾಕಿ ಶೇಖರಿಸಿಟ್ಟಿದ್ದ ಮೀನು ಸುಟ್ಟು ಹೋಗಿವೆ.
ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಆಗಮಿಸಿ, ಪರಿಶೀಲನೆ ನಡೆಸಿದ್ದಾರೆ. ಇಂದು ಬೆಳಗ್ಗೆ ಸ್ಥಳಕ್ಕೆ ಶಾಸಕ ಸಂಜೀವ ಮಠಂದೂರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸೋಮವಾರ ಬೆಳಗ್ಗೆ ಸಂಘ ಪರಿವಾರದ ಸಂಘಟನೆಯ ಕಾರ್ಯಕರ್ತರು ಸ್ಥಳದಲ್ಲಿ ಜಮಾಯಿಸಿದ್ದು ಬೆಂಕಿ ಹಚ್ಚಿರುವ ಕಿಡಿಗೇಡಿಗಳ ಶೀಘ್ರ ಬಂಧನಕ್ಕೆ ಆಗ್ರಹಿಸಿದ್ದಾರೆ.