Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಮಾನವೀಯ ಭಾರತ ಬೇಕು

ಮಾನವೀಯ ಭಾರತ ಬೇಕು

-ಕಸ್ತೂರಿ, ತುಮಕೂರು-ಕಸ್ತೂರಿ, ತುಮಕೂರು23 Aug 2021 11:33 PM IST
share

ಮಾನ್ಯರೇ,
ಈಗ ಸೈನಿಕರು, ಪೊಲೀಸರು, ಕ್ರೀಡಾಪಟುಗಳ ಅತಿವೈಭವೀಕರಣ ನಡೆಯುತ್ತಿದೆ. ಮನೋ ದೈಹಿಕ ಆರೋಗ್ಯಕ್ಕೆ ಕ್ರೀಡೆ, ಯೋಗ ಪೂರಕವೆನ್ನುವುದನ್ನು ಮರೆಯುವಂತಿಲ್ಲ. ಸಾಮಾನ್ಯ ಕುಟುಂಬದ ಹುಡುಗ-ಹುಡುಗಿಯರು ಒಲಿಂಪಿಕ್ಸ್‌ನಲ್ಲಿ ಪದಕಗಳನ್ನು ಗೆದ್ದು ತಂದಿರುವುದು ಮಹತ್ಸಾಧನೆಯೇ ಸರಿ. ಅವರಿಗೆ ವಿಶೇಷ ಸನ್ಮಾನಗಳು, ಉನ್ನತ ಉದ್ಯೋಗಗಳು, ಪ್ರಶಸ್ತಿ ಸಲ್ಲಬೇಕಾದ್ದೇ. ಅವರ ಊರಿಗೆ, ಬಡಾವಣೆಗೆ, ಪ್ರಮುಖ ಕ್ರೀಡಾ ಕೇಂದ್ರಗಳಿಗೆ ಪದಕ ವಿಜೇತರ ಹೆಸರುಗಳನ್ನು ಇಡಬಹುದು. ಆದರೆ ಕೊಟಿ ಕೋಟಿ ನಗದು ಬಹುಮಾನಗಳು ಸೂಕ್ತವೇ?

ಭಾರತದ ಲಕ್ಷಾಂತರ ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ಗ್ರಾಮಗಳಲ್ಲಿನ್ನೂ ರಸ್ತೆ, ಶಾಲೆ, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮರೀಚಿಕೆಯಾಗಿದೆ. ಕೊರೋನ, ಕ್ಷಯ, ಮಲೇರಿಯಾಗಳಿಂದ ಸಾವಿರಾರು ಜನ ಸಾಯುತ್ತಿದ್ದಾರೆ. ಇಂತಹ ಸನ್ನಿವೇಶದಲ್ಲಿ ಯುವಕರೂ, ಉತ್ಸಾಹಿಗಳೂ ಆದ ಕ್ರೀಡಾಪಟುಗಳು ಆಜೀವ ಪರ್ಯಂತ ಕುಳಿತು ತಿನ್ನುವಷ್ಟು ಹಣ ಕೊಡಬೇಕೇ? ಅವರು ಈ ಹಣಕ್ಕೋಸ್ಕರವೇ ಆಟವಾಡಿದರು ಎಂಬ ಭಾವನೆ ಜನರಲ್ಲಿ ಮೂಡುವುದಿಲ್ಲವೇ?

ಇಂದು ಸರಿಯಾದ ಆಹಾರ, ಚಿಕಿತ್ಸೆ, ಸ್ವಚ್ಛವಾದ ಪರಿಸರಗಳಿಲ್ಲ್ಲದೆ ರೋಗ, ಸಾವುಗಳಿಗೆ ತುತ್ತಾಗಿರುವ ಮಕ್ಕಳಲ್ಲಿ ಅದೆಷ್ಟು ಮಂದಿ ಭವಿಷ್ಯದ ಸಚಿನ್, ಸಾನಿಯಾ, ಸಿಂಧೂ, ನೀರಜ್‌ಗಳಿದ್ದರೋ ಬಲ್ಲವರು ಯಾರು? ವಿಷಾದದ ಸಂಗತಿ ಎಂದರೆ ಬಹುತೇಕ ಕ್ರೀಡಾಕಲಿಗಳು ದಂತಗೋಪುರ ವಾಸಿಗಳಾಗಿದ್ದು, ಜನಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸಿದವರಲ್ಲ. ಕೋವಿಡ್ ಅಬ್ಬರದ ದುರ್ಭರ ಸಮಯದಲ್ಲಿ ಇಂತಹವರ ಕೊಡುಗೆ, ನೆರವು ಎಷ್ಟಿತ್ತು?.

ದೇಶಭಕ್ತಿ ಎಂದರೆ ಪದಕ ಗೆದ್ದು ಅದಕ್ಕೆ ಮುತ್ತಿಡುವುದು, ಪಾಕ್ ವಿರುದ್ಧ ರಣಘೋಷ ಮಾಡುವುದು, ಮಂದಿರ ನಿರ್ಮಾಣಕ್ಕೆ ಸುರಿಯುವುದು, ಪುಣ್ಯಕ್ಷೇತ್ರಗಳಿಗೆ ಭೇಟಿ ಇಷ್ಟೇ ಎನ್ನುವುದಾದರೆ ‘ಮಾನವೀಯ ಭಾರತ’ ಕಣ್ಮರೆಯಾಗಿ ಜಿಮ್ ಭಾರತ, ಯಜ್ಞ ಭಾರತ, ಯುದ್ಧ ಭಾರತ ಅಸ್ತಿತ್ವಕ್ಕೆ ಬರುತ್ತದೆ. ನಮ್ಮ ಕ್ರೀಡಾಪಟುಗಳು ದಮನಿತರು, ನಿರ್ಗತಿಕರತ್ತ ದೃಷ್ಟಿ ಹರಿಸಲಿ. ಸೋನುಸೂದ್, ಸುದೀಪ್‌ರ ಮಾದರಿಯನ್ನು ಕಂಡು ಕಲಿಯಲಿ.

share
-ಕಸ್ತೂರಿ, ತುಮಕೂರು
-ಕಸ್ತೂರಿ, ತುಮಕೂರು
Next Story
X