Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ​ವಿದ್ವಾಂಸ ಉಪ್ಪಂಗಳ ರಾಮ ಭಟ್ಟ...

ಉಡುಪಿ: ​ವಿದ್ವಾಂಸ ಉಪ್ಪಂಗಳ ರಾಮ ಭಟ್ಟ ನಿಧನ

ವಾರ್ತಾಭಾರತಿವಾರ್ತಾಭಾರತಿ24 Aug 2021 9:28 PM IST
share
ಉಡುಪಿ: ​ವಿದ್ವಾಂಸ ಉಪ್ಪಂಗಳ ರಾಮ ಭಟ್ಟ ನಿಧನ

ಉಡುಪಿ, ಆ. 24: ಹಿರಿಯ ಸಾಹಿತಿ, ವಿದ್ವಾಂಸ, ಎಂಜಿಎಂ ಕಾಲೇಜಿನ ನಿವೃತ್ತ ಕನ್ನಡ ಪ್ರಾಧ್ಯಾಪಕ ಡಾ. ಉಪ್ಪಂಗಳ ರಾಮ ಭಟ್ (81) ಅಸೌಖ್ಯದಿಂದ ಆ.24ರ ಮಂಗಳವಾರ ಸಂಜೆ ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ.

ಶ್ರೇಷ್ಠ ವ್ಯಾಕರಣ ವಿದ್ವಾಂಸರಾಗಿದ್ದ ಡಾ.ಉಪ್ಪಂಗಳ, ವ್ಯಾಕರಣದಲ್ಲಿ ವಿಶೇಷ ಸಾಧನೆ ಮಾಡಿದ ಭಟ್ಟಾಕಲಂಕರ ಗೌರವವಾರ್ಥ ಅಕಲಂಕ ಪ್ರತಿಷ್ಠಾನವನ್ನು ಸ್ಥಾಪಿಸಿ 2006ರಿಂದ 2018ರವರೆಗೆ ಪ್ರತಿ ವರ್ಷ ಪ್ರತಿಷ್ಠಾನದಿಂದ ಶ್ರೇಷ್ಠ ಕೃತಿ ಗಳನ್ನು ಗುರುತಿಸಿ ಗ್ರಂಥಕರ್ತರಿಗೆ ವಿಶೇಷ ಪುರಸ್ಕಾರಗಳನ್ನು ಪ್ರದಾನ ಮಾಡುತ್ತಿದ್ದರು.

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿದ್ದ ಡಾ. ರಾಮ ಭಟ್ಟರು 1977ರಲ್ಲಿ ಅಂಬಲಪಾಡಿಯಲ್ಲಿ ನಡೆದ ಉಡುಪಿ ತಾಲೂಕು ಸಾಹಿತ್ಯ ಸಮ್ಮೇಳನ, 2017ರಲ್ಲಿ ಕಾಸರಗೋಡು ಜಿಲ್ಲಾ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಯ ಗೌರವವನ್ನು ಪಡೆದಿದ್ದರು. ಉಡುಪಿಹವ್ಯಕ ಸಭಾದ ಅಧ್ಯಕ್ಷರೂ ಆಗಿದ್ದ ಅವರು ಕರ್ನಾಟಕ ಸಾಹಿತ್ಯ ಅಕಾಡೆಮಿ, ಅತ್ತಿಮಬ್ಬೆ ಪ್ರಶಸ್ತಿಗಳಿಗೆ ಭಾಜನರಾಗಿದ್ದರು.

ಟಿಸಿಎಚ್ ಕಲಿತು ಕಾಸರಗೋಡಿನ ಏತಡ್ಕದ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ ಶಿಕ್ಷಕರಾಗಿ ವೃತ್ತಿ ಜೀವನ ಆರಂಭಿಸಿದ ಡಾ.ಉಪ್ಪಂಗಳ, ಕಲ್ಲಿಕೋಟೆ ವಿ.ವಿ. ಮೂಲಕ ಪದವಿ, ಎಂಎ ಪದವಿ ಗಳಿಸಿದರು. 1972ರಲ್ಲಿ ಕೊಡಗಿನ ಮಾದಾಪುರದ ಚೆನ್ನಮ್ಮ ಪ.ಪೂ. ಕಾಲೇಜಿನ ಅಧ್ಯಾಪಕರಾಗಿ, 1973ರಿಂದ ಉಡುಪಿ ಎಂಜಿಎಂ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇರಿ, ಪ್ರಾಧ್ಯಾಪಕರು, ವಿಭಾಗ ಮುಖ್ಯಸ್ಥರಾಗಿ 1998ರಲ್ಲಿ ನಿವೃತ್ತರಾದರು.

ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದಲ್ಲಿ ಕರ್ನಾಟಕ ಶಬ್ದಾನುಶಾಸನ ಎಂಬ ಸಂಸ್ಕೃತ ಭಾಷೆಯಲ್ಲಿರುವ ಕನ್ನಡ ವ್ಯಾಕರಣ ಕೃತಿಯ ಬಗ್ಗೆ ಸಂಶೋಧನೆ ನಡೆಸಿ ಡಾಕ್ಟರೇಟ್ ಪದವಿಯನ್ನು 1981ರಲ್ಲಿ ಮೈಸೂರು ವಿ.ವಿ.ಯಿಂದ ಪಡೆದರು. ಗೋವಿಂದ ಪೈ ಸಂಶೋಧನ ಕೇಂದ್ರದ ಮೂಲಕ ಪಿಎಚ್‌ಡಿ ಪದವಿ ಗಳಿಸಿದ ಮೊದಲಿಗರು ಇವರಾಗಿದ್ದರು. ಇದೇ ಕೇಂದ್ರದ ಮಾರ್ಗದರ್ಶಕರಾಗಿ ಆರು ಮಂದಿಗೆ ಪಿಎಚ್‌ಡಿ ಪ್ರಬಂಧಕ್ಕೆ ಮಾರ್ಗದರ್ಶನ ನೀಡಿದ್ದಾರೆ. ಜರ್ಮನ್ ಭಾಷೆಯ ಕುರಿತಾದ ಜೂನಿಯರ್ ಡಿಪ್ಲೊಮಾ ಕೋರ್ಸ್‌ನ್ನೂ ಕಲಿತಿದ್ದರು.

30ಕ್ಕೂ ಅಧಿಕ ಸ್ವತಂತ್ರ ಕೃತಿ, ಐದು ಸಂಪಾದಿತ ಕೃತಿಗಳನ್ನು ಹೊರತಂದಿದ್ದಾರೆ. ಅಪ್ರಕಟಿತ ಕೃತಿಗಳೂ ಇವೆ. ಕನ್ನಡ ಭಾಷೆ ಮತ್ತು ವ್ಯಾಕರಣದ ವೈಶಿಷ್ಟದ ಕುರಿತು ವಿಶೇಷ ಅಧ್ಯಯನ ನಡೆಸಿದವರು. ಹವ್ಯಕ ಸಮುದಾಯದ ಬಗ್ಗೆ ಕನ್ನಡ, ಹವ್ಯಕ ಮತ್ತು ತುಳು ಭಾಷೆಯನ್ನು ಒಳಗೊಂಡ ಲೇಖನಗಳ ಸಂಗ್ರಹ ’ಮಾನಸ’ ಇವರ ಕೃತಿಗಳಲ್ಲಿ ಒಂದು. 2010ರಲ್ಲಿ ‘ಅಕಲಂಕ’ ಕಾವ್ಯನಾಮದ ಅಭಿನಂದನ ಗ್ರಂಥವನ್ನು ಅಭಿಮಾನಿಗಳು ಡಾ.ಉಪ್ಪಂಗಳರಿಗೆ ಸಮರ್ಪಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X