ಖರೀದಿ ಕೇಂದ್ರಗಳ ಮೂಲಕ ಹೆಸರುಕಾಳು ಖರೀದಿಗೆ ಕೇಂದ್ರ ಅನುಮೋದನೆ: ಸಚಿವ ಪ್ರಹ್ಲಾದ್ ಜೋಶಿ

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಬೆಂಗಳೂರು: ರಾಜ್ಯದಲ್ಲಿ 2021-22 ಸಾಲಿನ ಮುಂಗಾರು ಹಂಗಾಮಿನ ಹೆಸರುಕಾಳು ಖರೀದಿಯನ್ನು ಖರೀದಿ ಕೇಂದ್ರಗಳ ಮೂಲಕ ಕೂಡಲೇ ಆರಂಭಿಸಲು ಅನುಮೋದನೆ ನೀಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಗಳನ್ನು ಮಾಡಿರುವ ಅವರು, 'ಮುಕ್ತ ಮಾರುಕಟ್ಟೆಯಲ್ಲಿ ಹೆಸರುಕಾಳು ಬೆಲೆ ಸರಕಾರ ಘೋಷಿಸಿದ ಬೆಂಬಲ ಬೆಲೆಗಿಂತ ಕನಿಷ್ಠವಾಗಿದ್ದು, 2021-22 ರ ಮುಂಗಾರು ಹಂಗಾಮಿನಲ್ಲಿ ಬೆಳೆದ ಹೆಸರು ಕಾಳನ್ನು ಕನಿಷ್ಠ ಬೆಂಬಲ ಬೆಲೆಯನ್ವಯ ನೋಂದಾಯಿತ ರೈತರಿಂದ ಖರೀದಿಸಲು ಖರೀದಿ ಕೇಂದ್ರಗಳನ್ನು ಆರಂಭಿಸಿ 40.000 ಮೆಟ್ರಿಕ್ ಟನ್ ಹೆಸರುಕಾಳನ್ನು ಖರೀದಿಸಲು ಕೇಂದ್ರ ಸರಕಾರ ಆದೇಶ ಹೊರಡಿಸಿ ರಾಜ್ಯಸರಕಾರಕ್ಕೆ ಸೂಚಿಸಿದೆ ಎಂದು ತಿಳಿಸಿದ್ದಾರೆ.
ಈ ಬಗ್ಗೆ ಕನಾಟಕ ರಾಜ್ಯ ಸರಕಾರ ಇದೇ ತಿಂಗಳು ದಿ. 18ರಂದು ಕೇಂದ್ರ ಕೃಷಿ ಇಲಾಖೆಗೆ ಪತ್ರ ಬರೆದು 2021-22 ರ ಮುಂಗಾರು ಹಂಗಾಮಿನಲ್ಲಿ ಈಗಾಗಲೇ ಮಾರುಕಟ್ಟೆಗೆ ಹೆಸರುಕಾಳು ಬರುತ್ತಿದ್ದು ರೂ. 3355 ರಿಂದ ರೂ. 7000 ಪ್ರತಿ ಕ್ವಿಂಟಾಲ್ಗೆ ಬೆಲೆ ಇದ್ದು, ಇದು ಸರಕಾರ ಘೋಷಿತ ಕನಿಷ್ಠ ಬೆಂಬಲ ಬೆಲೆಗಿಂತಲೂ ಕಡಿಮೆ ಇರುವುದರಿಂದ ರೈತರಿಗೆ ನಷ್ಟವಾಗುವುದರಿಂದ, ಅಲ್ಲದೇ ಮುಂಬರುವ ದಿನಗಳಲ್ಲಿ ಹೆಸರು ಕಾಳು ಬೆಲೆ ಮುಕ್ತ ಮಾರುಕಟ್ಟೆಯಲ್ಲಿ ಬೇಗನೆ ಪ್ರಸ್ತಾವನೆ ಸಲ್ಲಿಸಲು ಪತ್ರ ಬರೆದಿದ್ದಲ್ಲದೇ ರಾಜ್ಯ ಸರಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮುನೇಕೊಪ್ಪ ಅವರೊಂದಿಗೆ ಜಿಲ್ಲಾ ಆಡಳಿತದ ನೇರ ಸಂಪರ್ಕದಲ್ಲಿತ್ತು ಎಂದು ತಿಳಿಸಿದ್ದಾರೆ.
ಕೇಂದ್ರ ಕೃಷಿ ಸಚಿವರು ಈ ಬಗ್ಗೆ ಕರ್ನಾಟಕ ರಾಜ್ಯದ ಹೆಸರುಬೆಳೆ ಬೆಳೆದ ರೈತರ ಸಂಕಷ್ಟಗಳನ್ನು ಗಣನೆಗೆ ತೆಗೆದುಕೊಂಡು ಕೇವಲ 4 ದಿನಗಳಲ್ಲಿ ಈ ಬಗ್ಗೆ ಕ್ರಮ ತೆಗೆದುಕೊಂಡು ರಾಜ್ಯದಲ್ಲಿ 40.000 ಮೆಟ್ರಿಕ್ ಟನ್ ಹೆಸರುಕಾಳು ಬೆಂಬಲ ದರದಲ್ಲಿ ಖರೀದಿಸಿ 90 ದಿನಗಳಲ್ಲಿ ಸಮಗ್ರ ಪ್ರಕ್ರಿಯೆ ಮುಗಿಸಬೇಕೆಂದು ಆದೇಶದಲ್ಲಿ ತಿಳಿಸಲಾಗಿದೆ. ಅದಲ್ಲದೇ ಕೇಂದ್ರ ನೋಡಲ್ ಏಜೆನ್ಸಿ ಹೆಸರುಕಾಳು ಖರೀದಿ ಪ್ರಕ್ರಿಯೆ ಮುಗಿದ ದಿನದಿಂದ 15 ದಿನಗಳ ಅವಧಿಯಲ್ಲಿ ಖರಿದಿಸಿದ ಹೆಸರುಕಾಳನ್ನು ತೀರುವಳಿ ಮಾಡಬೇಕು ಎಂದು ಹೇಳಿದ್ದಾರೆ.
ರೈತರ ಹಿತ ಕಾಯುವ ಕೇಂದ್ರ ಸರಕಾರದ ಈ ಮಹತ್ವದ ಕ್ರಮಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಹಾಗು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರಿಗೆ ತುಂಬು ಹೃದಯದ ಧನ್ಯವಾದ ಸಲ್ಲಿಸುವೆ ಎಂದು ತಿಳಿಸಿದ್ದಾರೆ.
ಹೆಸರು ಕಾಳನ್ನು ಕನಿಷ್ಠ ಬೆಂಬಲ ಬೆಲೆಯನ್ವಯ ನೋಂದಾಯಿತ ರೈತರಿಂದ ಖರೀದಿಸಲು ಖರೀದಿ ಕೇಂದ್ರಗಳನ್ನು ಆರಂಭಿಸಿ 40.000 ಮೆಟ್ರಿಕ್ ಟನ್ ಹೆಸರುಕಾಳನ್ನು ಖರೀದಿಸಲು ಕೇಂದ್ರ ಸರಕಾರ ಆದೇಶ ಹೊರಡಿಸಿ ರಾಜ್ಯಸರಕಾರಕ್ಕೆ ಸೂಚಿಸಿದೆ.
ಈ ಬಗ್ಗೆ ಕನಾಟಕ ರಾಜ್ಯ ಸರಕಾರ ಇದೇ ತಿಂಗಳು ದಿ. ೧೮ರಂದು ಕೇಂದ್ರ ಕೃಷಿ ಇಲಾಖೆಗೆ ಪತ್ರ ಬರೆದು2/7— Pralhad Joshi (@JoshiPralhad) August 24, 2021ಹೆಸರು ಕಾಳನ್ನು ಕನಿಷ್ಠ ಬೆಂಬಲ ಬೆಲೆಯನ್ವಯ ನೋಂದಾಯಿತ ರೈತರಿಂದ ಖರೀದಿಸಲು ಖರೀದಿ ಕೇಂದ್ರಗಳನ್ನು ಆರಂಭಿಸಿ 40.000 ಮೆಟ್ರಿಕ್ ಟನ್ ಹೆಸರುಕಾಳನ್ನು ಖರೀದಿಸಲು ಕೇಂದ್ರ ಸರಕಾರ ಆದೇಶ ಹೊರಡಿಸಿ ರಾಜ್ಯಸರಕಾರಕ್ಕೆ ಸೂಚಿಸಿದೆ.
— Pralhad Joshi (@JoshiPralhad) August 24, 2021
ಈ ಬಗ್ಗೆ ಕನಾಟಕ ರಾಜ್ಯ ಸರಕಾರ ಇದೇ ತಿಂಗಳು ದಿ. ೧೮ರಂದು ಕೇಂದ್ರ ಕೃಷಿ ಇಲಾಖೆಗೆ ಪತ್ರ ಬರೆದು 2/7







